ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2023ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮುನಿರಾಜು ವಿರುದ್ಧ ಸಾರ್ವಜನಿಕರ ಆಕ್ರೋಶಗೊಂಡ ಹಿನ್ನೆಲೆ ಅಪೂರ್ಣಗೊಂಡಿದೆ.
ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಾಶೆಟ್ಟಿಹಳ್ಳಿ ಪ.ಪಂ ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯವಾಗಿದೆ. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಅಭಿವೃದ್ಧಿ ದೃಷ್ಟಿಯಿಂದ ಕರೆಯಲಾಗಿರುವ ಪೂರ್ವಭಾವಿ ಸಭೆಗೆ ಕೇವಲ ಬೆರಳೆಣಿಕೆಯಷ್ಟು ಮಂದಿಯನ್ನು ಮಾತ್ರ ಆಹ್ವಾನ ನೀಡಲಾಗಿದೆ. ಸಂಘ-ಸಂಸ್ಥೆ, ಯುವ ಜನತೆ, ಸಾರ್ವಜನಿಕರಿಗೆ, ಮಾಧ್ಯಮದವರಿಗೆ ಮಾಹಿತಿಯೇ ಇಲ್ಲ. ಇಲ್ಲಿನ ಮುಖ್ಯಾಧಿಕಾರಿ ತಮ್ಮಿಷ್ಟದಂತೆ ನಡೆದುಕೊಳ್ಳುತ್ತಿದ್ದಾರೆ. ಬಜೆಟ್ ಅಂಕಿ-ಅಂಶಗಳು ಕೇವಲ ಬೋಗಸ್ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕಿಡಿಕಾರಿದರು.
ಕಸುವನಹಳ್ಳಿ ಮುಖಂಡ ಅಂಬರೀಶ್ ಮಾತನಾಡಿ ಗ್ರಾಮ ಪಂಚಾಯತಿಯಾಗಿದ್ದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಗಾಂಧಿ ಪುರಸ್ಕಾರ, ನೈರ್ಮಲ್ಯ ರತ್ನ, ದೀನ್ ದಯಾಳ್ ಪ್ರಶಸ್ತಿ ಹೀಗೆ ಗ್ರಾಮ ಪಂಚಾಯತಿಗಳಿಗೆ ನೀಡಲಾಗುವ ಪ್ರತಿಯೊಂದು ವಿಭಾಗದಲ್ಲಿಯೂ ಸ್ಥಾನ ಪಡೆದು ಪ್ರಶಸ್ತಿ ಪಡೆದುಕೊಂಡಿತ್ತು. ಆದರೆ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಇಲ್ಲಿನ ಸುತ್ತಮುತ್ತಲಿನ ಪ್ರದೇಶ ಸೇರಿ ನಮ್ಮ ಪಂಚಾಯತಿಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ಇತ್ತು ಆದರೆ ಅಭಿವೃದ್ಧಿ ವೇಗ ಶೂನ್ಯಕ್ಕೆ ಇಳಿದಿದೆ ಎಂದರು.
ಬಜೆಟ್ ವಿಚಾರ ಜನರ ಗಮನಕ್ಕೆ ತಂದು ಸಿದ್ಧಪಡಿಸಬೇಕು. ಸಲಹೆ, ಸೂಚನೆಗಳನ್ನು ಪಡೆದುಕೊಂಡ ಸಿದ್ಧಪಡಿಸಬೇಕು, ಆದರೆ ಇಲ್ಲಿನ ಮುಖ್ಯಾಧಿಕಾರಿ ಮುನಿರಾಜು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿಯಾಗಿರಬೇಕು. ಆದರೆ ಈಗಿರುವ ಅಧಿಕಾರಿ ಕೇವಲ ಕಂದಾಯ ನಿರೀಕ್ಷಕರಾಗಿದ್ದು, ಇದೀಗ ಪ್ರಮೋಷನ್ ಆಧಾರದ ಮೇಲೆ ಮುಖ್ಯಾಧಿಕಾರಿ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದು ಗುಡುಗಿದರು.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…