ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2023ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮುನಿರಾಜು ವಿರುದ್ಧ ಸಾರ್ವಜನಿಕರ ಆಕ್ರೋಶಗೊಂಡ ಹಿನ್ನೆಲೆ ಅಪೂರ್ಣಗೊಂಡಿದೆ.
ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಾಶೆಟ್ಟಿಹಳ್ಳಿ ಪ.ಪಂ ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯವಾಗಿದೆ. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಅಭಿವೃದ್ಧಿ ದೃಷ್ಟಿಯಿಂದ ಕರೆಯಲಾಗಿರುವ ಪೂರ್ವಭಾವಿ ಸಭೆಗೆ ಕೇವಲ ಬೆರಳೆಣಿಕೆಯಷ್ಟು ಮಂದಿಯನ್ನು ಮಾತ್ರ ಆಹ್ವಾನ ನೀಡಲಾಗಿದೆ. ಸಂಘ-ಸಂಸ್ಥೆ, ಯುವ ಜನತೆ, ಸಾರ್ವಜನಿಕರಿಗೆ, ಮಾಧ್ಯಮದವರಿಗೆ ಮಾಹಿತಿಯೇ ಇಲ್ಲ. ಇಲ್ಲಿನ ಮುಖ್ಯಾಧಿಕಾರಿ ತಮ್ಮಿಷ್ಟದಂತೆ ನಡೆದುಕೊಳ್ಳುತ್ತಿದ್ದಾರೆ. ಬಜೆಟ್ ಅಂಕಿ-ಅಂಶಗಳು ಕೇವಲ ಬೋಗಸ್ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕಿಡಿಕಾರಿದರು.
ಕಸುವನಹಳ್ಳಿ ಮುಖಂಡ ಅಂಬರೀಶ್ ಮಾತನಾಡಿ ಗ್ರಾಮ ಪಂಚಾಯತಿಯಾಗಿದ್ದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಗಾಂಧಿ ಪುರಸ್ಕಾರ, ನೈರ್ಮಲ್ಯ ರತ್ನ, ದೀನ್ ದಯಾಳ್ ಪ್ರಶಸ್ತಿ ಹೀಗೆ ಗ್ರಾಮ ಪಂಚಾಯತಿಗಳಿಗೆ ನೀಡಲಾಗುವ ಪ್ರತಿಯೊಂದು ವಿಭಾಗದಲ್ಲಿಯೂ ಸ್ಥಾನ ಪಡೆದು ಪ್ರಶಸ್ತಿ ಪಡೆದುಕೊಂಡಿತ್ತು. ಆದರೆ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಇಲ್ಲಿನ ಸುತ್ತಮುತ್ತಲಿನ ಪ್ರದೇಶ ಸೇರಿ ನಮ್ಮ ಪಂಚಾಯತಿಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ಇತ್ತು ಆದರೆ ಅಭಿವೃದ್ಧಿ ವೇಗ ಶೂನ್ಯಕ್ಕೆ ಇಳಿದಿದೆ ಎಂದರು.
ಬಜೆಟ್ ವಿಚಾರ ಜನರ ಗಮನಕ್ಕೆ ತಂದು ಸಿದ್ಧಪಡಿಸಬೇಕು. ಸಲಹೆ, ಸೂಚನೆಗಳನ್ನು ಪಡೆದುಕೊಂಡ ಸಿದ್ಧಪಡಿಸಬೇಕು, ಆದರೆ ಇಲ್ಲಿನ ಮುಖ್ಯಾಧಿಕಾರಿ ಮುನಿರಾಜು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿಯಾಗಿರಬೇಕು. ಆದರೆ ಈಗಿರುವ ಅಧಿಕಾರಿ ಕೇವಲ ಕಂದಾಯ ನಿರೀಕ್ಷಕರಾಗಿದ್ದು, ಇದೀಗ ಪ್ರಮೋಷನ್ ಆಧಾರದ ಮೇಲೆ ಮುಖ್ಯಾಧಿಕಾರಿ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದು ಗುಡುಗಿದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…