ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ ಅಪೂರ್ಣ; ಮುಖ್ಯಾಧಿಕಾರಿ ಕಾರ್ಯವೈಖರಿಗೆ ತೀವ್ರ ಅಸಮಾಧಾನಗೊಂಡ ಸಾರ್ವಜನಿಕರು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2023ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮುನಿರಾಜು ವಿರುದ್ಧ ಸಾರ್ವಜನಿಕರ ಆಕ್ರೋಶಗೊಂಡ ಹಿನ್ನೆಲೆ ಅಪೂರ್ಣಗೊಂಡಿದೆ.

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಾಶೆಟ್ಟಿಹಳ್ಳಿ ಪ.ಪಂ ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯವಾಗಿದೆ. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಅಭಿವೃದ್ಧಿ ದೃಷ್ಟಿಯಿಂದ ಕರೆಯಲಾಗಿರುವ ಪೂರ್ವಭಾವಿ ಸಭೆಗೆ ಕೇವಲ ಬೆರಳೆಣಿಕೆಯಷ್ಟು ಮಂದಿಯನ್ನು ಮಾತ್ರ ಆಹ್ವಾನ ನೀಡಲಾಗಿದೆ. ಸಂಘ-ಸಂಸ್ಥೆ, ಯುವ ಜನತೆ, ಸಾರ್ವಜನಿಕರಿಗೆ, ಮಾಧ್ಯಮದವರಿಗೆ ಮಾಹಿತಿಯೇ ಇಲ್ಲ. ಇಲ್ಲಿನ ಮುಖ್ಯಾಧಿಕಾರಿ ತಮ್ಮಿಷ್ಟದಂತೆ ನಡೆದುಕೊಳ್ಳುತ್ತಿದ್ದಾರೆ. ಬಜೆಟ್ ಅಂಕಿ-ಅಂಶಗಳು ಕೇವಲ ಬೋಗಸ್ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕಿಡಿಕಾರಿದರು.

ಪಟ್ಟಣ ಪಂಚಾಯತಿಯಾಗಿ ಎರಡು ವರ್ಷ ಕಳೆದಿದೆ. ಕಳೆದ ಬಜೆಟ್ ನಲ್ಲಿ ಘೋಷಿಸಿದ ಯಾವುದೇ ಒಂದು ಯೋಜನೆ ಜಾರಿಯಾಗಿಲ್ಲ. ಕನಿಷ್ಠ ಮೂಲಭೂತ ಸೌಕರ್ಯಗಳ ಒದಗಿಸುವಲ್ಲಿಯೂ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಸುವನಹಳ್ಳಿ ಮುಖಂಡ ಅಂಬರೀಶ್ ಮಾತನಾಡಿ ಗ್ರಾಮ ಪಂಚಾಯತಿಯಾಗಿದ್ದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಗಾಂಧಿ ಪುರಸ್ಕಾರ, ನೈರ್ಮಲ್ಯ ರತ್ನ, ದೀನ್ ದಯಾಳ್ ಪ್ರಶಸ್ತಿ ಹೀಗೆ ಗ್ರಾಮ ಪಂಚಾಯತಿಗಳಿಗೆ ನೀಡಲಾಗುವ ಪ್ರತಿಯೊಂದು ವಿಭಾಗದಲ್ಲಿಯೂ ಸ್ಥಾನ ಪಡೆದು ಪ್ರಶಸ್ತಿ ಪಡೆದುಕೊಂಡಿತ್ತು. ಆದರೆ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಇಲ್ಲಿನ ಸುತ್ತಮುತ್ತಲಿನ ಪ್ರದೇಶ ಸೇರಿ ನಮ್ಮ ಪಂಚಾಯತಿಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ಇತ್ತು ಆದರೆ ಅಭಿವೃದ್ಧಿ ವೇಗ ಶೂನ್ಯಕ್ಕೆ ಇಳಿದಿದೆ ಎಂದರು.

ಬಜೆಟ್ ವಿಚಾರ ಜನರ ಗಮನಕ್ಕೆ ತಂದು ಸಿದ್ಧಪಡಿಸಬೇಕು. ಸಲಹೆ, ಸೂಚನೆಗಳನ್ನು ಪಡೆದುಕೊಂಡ ಸಿದ್ಧಪಡಿಸಬೇಕು, ಆದರೆ ಇಲ್ಲಿನ ಮುಖ್ಯಾಧಿಕಾರಿ ಮುನಿರಾಜು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿಯಾಗಿರಬೇಕು. ಆದರೆ ಈಗಿರುವ ಅಧಿಕಾರಿ ಕೇವಲ ಕಂದಾಯ ನಿರೀಕ್ಷಕರಾಗಿದ್ದು, ಇದೀಗ ಪ್ರಮೋಷನ್ ಆಧಾರದ ಮೇಲೆ ಮುಖ್ಯಾಧಿಕಾರಿ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದು ಗುಡುಗಿದರು.

ಪ.ಪಂ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಈ ಅಧಿಕಾರಿಯನ್ನು ಒಂದು ವಾರದಲ್ಲಿ ಬದಲಾಯಿಸದಿದ್ದರೆ ಪಂಚಾಯತಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು. ಈ ನಿರರ್ಥಕ ಬಜೆಟ್ ನಮಗೆ ಬೇಕಾಗಿಲ್ಲ ಎಂದು ಬಜೆಟ್ ಪ್ರತಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

2 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

4 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

7 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

12 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

23 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

1 day ago