ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ ಅಪೂರ್ಣ; ಮುಖ್ಯಾಧಿಕಾರಿ ಕಾರ್ಯವೈಖರಿಗೆ ತೀವ್ರ ಅಸಮಾಧಾನಗೊಂಡ ಸಾರ್ವಜನಿಕರು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2023ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮುನಿರಾಜು ವಿರುದ್ಧ ಸಾರ್ವಜನಿಕರ ಆಕ್ರೋಶಗೊಂಡ ಹಿನ್ನೆಲೆ ಅಪೂರ್ಣಗೊಂಡಿದೆ.

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಾಶೆಟ್ಟಿಹಳ್ಳಿ ಪ.ಪಂ ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯವಾಗಿದೆ. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಅಭಿವೃದ್ಧಿ ದೃಷ್ಟಿಯಿಂದ ಕರೆಯಲಾಗಿರುವ ಪೂರ್ವಭಾವಿ ಸಭೆಗೆ ಕೇವಲ ಬೆರಳೆಣಿಕೆಯಷ್ಟು ಮಂದಿಯನ್ನು ಮಾತ್ರ ಆಹ್ವಾನ ನೀಡಲಾಗಿದೆ. ಸಂಘ-ಸಂಸ್ಥೆ, ಯುವ ಜನತೆ, ಸಾರ್ವಜನಿಕರಿಗೆ, ಮಾಧ್ಯಮದವರಿಗೆ ಮಾಹಿತಿಯೇ ಇಲ್ಲ. ಇಲ್ಲಿನ ಮುಖ್ಯಾಧಿಕಾರಿ ತಮ್ಮಿಷ್ಟದಂತೆ ನಡೆದುಕೊಳ್ಳುತ್ತಿದ್ದಾರೆ. ಬಜೆಟ್ ಅಂಕಿ-ಅಂಶಗಳು ಕೇವಲ ಬೋಗಸ್ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕಿಡಿಕಾರಿದರು.

ಪಟ್ಟಣ ಪಂಚಾಯತಿಯಾಗಿ ಎರಡು ವರ್ಷ ಕಳೆದಿದೆ. ಕಳೆದ ಬಜೆಟ್ ನಲ್ಲಿ ಘೋಷಿಸಿದ ಯಾವುದೇ ಒಂದು ಯೋಜನೆ ಜಾರಿಯಾಗಿಲ್ಲ. ಕನಿಷ್ಠ ಮೂಲಭೂತ ಸೌಕರ್ಯಗಳ ಒದಗಿಸುವಲ್ಲಿಯೂ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಸುವನಹಳ್ಳಿ ಮುಖಂಡ ಅಂಬರೀಶ್ ಮಾತನಾಡಿ ಗ್ರಾಮ ಪಂಚಾಯತಿಯಾಗಿದ್ದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಗಾಂಧಿ ಪುರಸ್ಕಾರ, ನೈರ್ಮಲ್ಯ ರತ್ನ, ದೀನ್ ದಯಾಳ್ ಪ್ರಶಸ್ತಿ ಹೀಗೆ ಗ್ರಾಮ ಪಂಚಾಯತಿಗಳಿಗೆ ನೀಡಲಾಗುವ ಪ್ರತಿಯೊಂದು ವಿಭಾಗದಲ್ಲಿಯೂ ಸ್ಥಾನ ಪಡೆದು ಪ್ರಶಸ್ತಿ ಪಡೆದುಕೊಂಡಿತ್ತು. ಆದರೆ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಇಲ್ಲಿನ ಸುತ್ತಮುತ್ತಲಿನ ಪ್ರದೇಶ ಸೇರಿ ನಮ್ಮ ಪಂಚಾಯತಿಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ಇತ್ತು ಆದರೆ ಅಭಿವೃದ್ಧಿ ವೇಗ ಶೂನ್ಯಕ್ಕೆ ಇಳಿದಿದೆ ಎಂದರು.

ಬಜೆಟ್ ವಿಚಾರ ಜನರ ಗಮನಕ್ಕೆ ತಂದು ಸಿದ್ಧಪಡಿಸಬೇಕು. ಸಲಹೆ, ಸೂಚನೆಗಳನ್ನು ಪಡೆದುಕೊಂಡ ಸಿದ್ಧಪಡಿಸಬೇಕು, ಆದರೆ ಇಲ್ಲಿನ ಮುಖ್ಯಾಧಿಕಾರಿ ಮುನಿರಾಜು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿಯಾಗಿರಬೇಕು. ಆದರೆ ಈಗಿರುವ ಅಧಿಕಾರಿ ಕೇವಲ ಕಂದಾಯ ನಿರೀಕ್ಷಕರಾಗಿದ್ದು, ಇದೀಗ ಪ್ರಮೋಷನ್ ಆಧಾರದ ಮೇಲೆ ಮುಖ್ಯಾಧಿಕಾರಿ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದು ಗುಡುಗಿದರು.

ಪ.ಪಂ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಈ ಅಧಿಕಾರಿಯನ್ನು ಒಂದು ವಾರದಲ್ಲಿ ಬದಲಾಯಿಸದಿದ್ದರೆ ಪಂಚಾಯತಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು. ಈ ನಿರರ್ಥಕ ಬಜೆಟ್ ನಮಗೆ ಬೇಕಾಗಿಲ್ಲ ಎಂದು ಬಜೆಟ್ ಪ್ರತಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

1 hour ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

2 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

16 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

19 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

21 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

2 days ago