ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ ಅಪೂರ್ಣ; ಮುಖ್ಯಾಧಿಕಾರಿ ಕಾರ್ಯವೈಖರಿಗೆ ತೀವ್ರ ಅಸಮಾಧಾನಗೊಂಡ ಸಾರ್ವಜನಿಕರು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2023ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮುನಿರಾಜು ವಿರುದ್ಧ ಸಾರ್ವಜನಿಕರ ಆಕ್ರೋಶಗೊಂಡ ಹಿನ್ನೆಲೆ ಅಪೂರ್ಣಗೊಂಡಿದೆ.

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಾಶೆಟ್ಟಿಹಳ್ಳಿ ಪ.ಪಂ ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯವಾಗಿದೆ. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಅಭಿವೃದ್ಧಿ ದೃಷ್ಟಿಯಿಂದ ಕರೆಯಲಾಗಿರುವ ಪೂರ್ವಭಾವಿ ಸಭೆಗೆ ಕೇವಲ ಬೆರಳೆಣಿಕೆಯಷ್ಟು ಮಂದಿಯನ್ನು ಮಾತ್ರ ಆಹ್ವಾನ ನೀಡಲಾಗಿದೆ. ಸಂಘ-ಸಂಸ್ಥೆ, ಯುವ ಜನತೆ, ಸಾರ್ವಜನಿಕರಿಗೆ, ಮಾಧ್ಯಮದವರಿಗೆ ಮಾಹಿತಿಯೇ ಇಲ್ಲ. ಇಲ್ಲಿನ ಮುಖ್ಯಾಧಿಕಾರಿ ತಮ್ಮಿಷ್ಟದಂತೆ ನಡೆದುಕೊಳ್ಳುತ್ತಿದ್ದಾರೆ. ಬಜೆಟ್ ಅಂಕಿ-ಅಂಶಗಳು ಕೇವಲ ಬೋಗಸ್ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕಿಡಿಕಾರಿದರು.

ಪಟ್ಟಣ ಪಂಚಾಯತಿಯಾಗಿ ಎರಡು ವರ್ಷ ಕಳೆದಿದೆ. ಕಳೆದ ಬಜೆಟ್ ನಲ್ಲಿ ಘೋಷಿಸಿದ ಯಾವುದೇ ಒಂದು ಯೋಜನೆ ಜಾರಿಯಾಗಿಲ್ಲ. ಕನಿಷ್ಠ ಮೂಲಭೂತ ಸೌಕರ್ಯಗಳ ಒದಗಿಸುವಲ್ಲಿಯೂ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಸುವನಹಳ್ಳಿ ಮುಖಂಡ ಅಂಬರೀಶ್ ಮಾತನಾಡಿ ಗ್ರಾಮ ಪಂಚಾಯತಿಯಾಗಿದ್ದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಗಾಂಧಿ ಪುರಸ್ಕಾರ, ನೈರ್ಮಲ್ಯ ರತ್ನ, ದೀನ್ ದಯಾಳ್ ಪ್ರಶಸ್ತಿ ಹೀಗೆ ಗ್ರಾಮ ಪಂಚಾಯತಿಗಳಿಗೆ ನೀಡಲಾಗುವ ಪ್ರತಿಯೊಂದು ವಿಭಾಗದಲ್ಲಿಯೂ ಸ್ಥಾನ ಪಡೆದು ಪ್ರಶಸ್ತಿ ಪಡೆದುಕೊಂಡಿತ್ತು. ಆದರೆ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಇಲ್ಲಿನ ಸುತ್ತಮುತ್ತಲಿನ ಪ್ರದೇಶ ಸೇರಿ ನಮ್ಮ ಪಂಚಾಯತಿಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ಇತ್ತು ಆದರೆ ಅಭಿವೃದ್ಧಿ ವೇಗ ಶೂನ್ಯಕ್ಕೆ ಇಳಿದಿದೆ ಎಂದರು.

ಬಜೆಟ್ ವಿಚಾರ ಜನರ ಗಮನಕ್ಕೆ ತಂದು ಸಿದ್ಧಪಡಿಸಬೇಕು. ಸಲಹೆ, ಸೂಚನೆಗಳನ್ನು ಪಡೆದುಕೊಂಡ ಸಿದ್ಧಪಡಿಸಬೇಕು, ಆದರೆ ಇಲ್ಲಿನ ಮುಖ್ಯಾಧಿಕಾರಿ ಮುನಿರಾಜು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿಯಾಗಿರಬೇಕು. ಆದರೆ ಈಗಿರುವ ಅಧಿಕಾರಿ ಕೇವಲ ಕಂದಾಯ ನಿರೀಕ್ಷಕರಾಗಿದ್ದು, ಇದೀಗ ಪ್ರಮೋಷನ್ ಆಧಾರದ ಮೇಲೆ ಮುಖ್ಯಾಧಿಕಾರಿ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದು ಗುಡುಗಿದರು.

ಪ.ಪಂ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಈ ಅಧಿಕಾರಿಯನ್ನು ಒಂದು ವಾರದಲ್ಲಿ ಬದಲಾಯಿಸದಿದ್ದರೆ ಪಂಚಾಯತಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು. ಈ ನಿರರ್ಥಕ ಬಜೆಟ್ ನಮಗೆ ಬೇಕಾಗಿಲ್ಲ ಎಂದು ಬಜೆಟ್ ಪ್ರತಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

4 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

5 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

17 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

19 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago