ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ ಅಪೂರ್ಣ; ಮುಖ್ಯಾಧಿಕಾರಿ ಕಾರ್ಯವೈಖರಿಗೆ ತೀವ್ರ ಅಸಮಾಧಾನಗೊಂಡ ಸಾರ್ವಜನಿಕರು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2023ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮುನಿರಾಜು ವಿರುದ್ಧ ಸಾರ್ವಜನಿಕರ ಆಕ್ರೋಶಗೊಂಡ ಹಿನ್ನೆಲೆ ಅಪೂರ್ಣಗೊಂಡಿದೆ.

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಾಶೆಟ್ಟಿಹಳ್ಳಿ ಪ.ಪಂ ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯವಾಗಿದೆ. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಅಭಿವೃದ್ಧಿ ದೃಷ್ಟಿಯಿಂದ ಕರೆಯಲಾಗಿರುವ ಪೂರ್ವಭಾವಿ ಸಭೆಗೆ ಕೇವಲ ಬೆರಳೆಣಿಕೆಯಷ್ಟು ಮಂದಿಯನ್ನು ಮಾತ್ರ ಆಹ್ವಾನ ನೀಡಲಾಗಿದೆ. ಸಂಘ-ಸಂಸ್ಥೆ, ಯುವ ಜನತೆ, ಸಾರ್ವಜನಿಕರಿಗೆ, ಮಾಧ್ಯಮದವರಿಗೆ ಮಾಹಿತಿಯೇ ಇಲ್ಲ. ಇಲ್ಲಿನ ಮುಖ್ಯಾಧಿಕಾರಿ ತಮ್ಮಿಷ್ಟದಂತೆ ನಡೆದುಕೊಳ್ಳುತ್ತಿದ್ದಾರೆ. ಬಜೆಟ್ ಅಂಕಿ-ಅಂಶಗಳು ಕೇವಲ ಬೋಗಸ್ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕಿಡಿಕಾರಿದರು.

ಪಟ್ಟಣ ಪಂಚಾಯತಿಯಾಗಿ ಎರಡು ವರ್ಷ ಕಳೆದಿದೆ. ಕಳೆದ ಬಜೆಟ್ ನಲ್ಲಿ ಘೋಷಿಸಿದ ಯಾವುದೇ ಒಂದು ಯೋಜನೆ ಜಾರಿಯಾಗಿಲ್ಲ. ಕನಿಷ್ಠ ಮೂಲಭೂತ ಸೌಕರ್ಯಗಳ ಒದಗಿಸುವಲ್ಲಿಯೂ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಸುವನಹಳ್ಳಿ ಮುಖಂಡ ಅಂಬರೀಶ್ ಮಾತನಾಡಿ ಗ್ರಾಮ ಪಂಚಾಯತಿಯಾಗಿದ್ದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಗಾಂಧಿ ಪುರಸ್ಕಾರ, ನೈರ್ಮಲ್ಯ ರತ್ನ, ದೀನ್ ದಯಾಳ್ ಪ್ರಶಸ್ತಿ ಹೀಗೆ ಗ್ರಾಮ ಪಂಚಾಯತಿಗಳಿಗೆ ನೀಡಲಾಗುವ ಪ್ರತಿಯೊಂದು ವಿಭಾಗದಲ್ಲಿಯೂ ಸ್ಥಾನ ಪಡೆದು ಪ್ರಶಸ್ತಿ ಪಡೆದುಕೊಂಡಿತ್ತು. ಆದರೆ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಇಲ್ಲಿನ ಸುತ್ತಮುತ್ತಲಿನ ಪ್ರದೇಶ ಸೇರಿ ನಮ್ಮ ಪಂಚಾಯತಿಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ಇತ್ತು ಆದರೆ ಅಭಿವೃದ್ಧಿ ವೇಗ ಶೂನ್ಯಕ್ಕೆ ಇಳಿದಿದೆ ಎಂದರು.

ಬಜೆಟ್ ವಿಚಾರ ಜನರ ಗಮನಕ್ಕೆ ತಂದು ಸಿದ್ಧಪಡಿಸಬೇಕು. ಸಲಹೆ, ಸೂಚನೆಗಳನ್ನು ಪಡೆದುಕೊಂಡ ಸಿದ್ಧಪಡಿಸಬೇಕು, ಆದರೆ ಇಲ್ಲಿನ ಮುಖ್ಯಾಧಿಕಾರಿ ಮುನಿರಾಜು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿಯಾಗಿರಬೇಕು. ಆದರೆ ಈಗಿರುವ ಅಧಿಕಾರಿ ಕೇವಲ ಕಂದಾಯ ನಿರೀಕ್ಷಕರಾಗಿದ್ದು, ಇದೀಗ ಪ್ರಮೋಷನ್ ಆಧಾರದ ಮೇಲೆ ಮುಖ್ಯಾಧಿಕಾರಿ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದು ಗುಡುಗಿದರು.

ಪ.ಪಂ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಈ ಅಧಿಕಾರಿಯನ್ನು ಒಂದು ವಾರದಲ್ಲಿ ಬದಲಾಯಿಸದಿದ್ದರೆ ಪಂಚಾಯತಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು. ಈ ನಿರರ್ಥಕ ಬಜೆಟ್ ನಮಗೆ ಬೇಕಾಗಿಲ್ಲ ಎಂದು ಬಜೆಟ್ ಪ್ರತಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

1 hour ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

9 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

20 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago