ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2023ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮುನಿರಾಜು ವಿರುದ್ಧ ಸಾರ್ವಜನಿಕರ ಆಕ್ರೋಶಗೊಂಡ ಹಿನ್ನೆಲೆ ಅಪೂರ್ಣಗೊಂಡಿದೆ.
ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಾಶೆಟ್ಟಿಹಳ್ಳಿ ಪ.ಪಂ ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯವಾಗಿದೆ. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಅಭಿವೃದ್ಧಿ ದೃಷ್ಟಿಯಿಂದ ಕರೆಯಲಾಗಿರುವ ಪೂರ್ವಭಾವಿ ಸಭೆಗೆ ಕೇವಲ ಬೆರಳೆಣಿಕೆಯಷ್ಟು ಮಂದಿಯನ್ನು ಮಾತ್ರ ಆಹ್ವಾನ ನೀಡಲಾಗಿದೆ. ಸಂಘ-ಸಂಸ್ಥೆ, ಯುವ ಜನತೆ, ಸಾರ್ವಜನಿಕರಿಗೆ, ಮಾಧ್ಯಮದವರಿಗೆ ಮಾಹಿತಿಯೇ ಇಲ್ಲ. ಇಲ್ಲಿನ ಮುಖ್ಯಾಧಿಕಾರಿ ತಮ್ಮಿಷ್ಟದಂತೆ ನಡೆದುಕೊಳ್ಳುತ್ತಿದ್ದಾರೆ. ಬಜೆಟ್ ಅಂಕಿ-ಅಂಶಗಳು ಕೇವಲ ಬೋಗಸ್ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕಿಡಿಕಾರಿದರು.
ಕಸುವನಹಳ್ಳಿ ಮುಖಂಡ ಅಂಬರೀಶ್ ಮಾತನಾಡಿ ಗ್ರಾಮ ಪಂಚಾಯತಿಯಾಗಿದ್ದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಗಾಂಧಿ ಪುರಸ್ಕಾರ, ನೈರ್ಮಲ್ಯ ರತ್ನ, ದೀನ್ ದಯಾಳ್ ಪ್ರಶಸ್ತಿ ಹೀಗೆ ಗ್ರಾಮ ಪಂಚಾಯತಿಗಳಿಗೆ ನೀಡಲಾಗುವ ಪ್ರತಿಯೊಂದು ವಿಭಾಗದಲ್ಲಿಯೂ ಸ್ಥಾನ ಪಡೆದು ಪ್ರಶಸ್ತಿ ಪಡೆದುಕೊಂಡಿತ್ತು. ಆದರೆ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಇಲ್ಲಿನ ಸುತ್ತಮುತ್ತಲಿನ ಪ್ರದೇಶ ಸೇರಿ ನಮ್ಮ ಪಂಚಾಯತಿಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ಇತ್ತು ಆದರೆ ಅಭಿವೃದ್ಧಿ ವೇಗ ಶೂನ್ಯಕ್ಕೆ ಇಳಿದಿದೆ ಎಂದರು.
ಬಜೆಟ್ ವಿಚಾರ ಜನರ ಗಮನಕ್ಕೆ ತಂದು ಸಿದ್ಧಪಡಿಸಬೇಕು. ಸಲಹೆ, ಸೂಚನೆಗಳನ್ನು ಪಡೆದುಕೊಂಡ ಸಿದ್ಧಪಡಿಸಬೇಕು, ಆದರೆ ಇಲ್ಲಿನ ಮುಖ್ಯಾಧಿಕಾರಿ ಮುನಿರಾಜು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿಯಾಗಿರಬೇಕು. ಆದರೆ ಈಗಿರುವ ಅಧಿಕಾರಿ ಕೇವಲ ಕಂದಾಯ ನಿರೀಕ್ಷಕರಾಗಿದ್ದು, ಇದೀಗ ಪ್ರಮೋಷನ್ ಆಧಾರದ ಮೇಲೆ ಮುಖ್ಯಾಧಿಕಾರಿ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದು ಗುಡುಗಿದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…