ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ ಅಪೂರ್ಣ; ಮುಖ್ಯಾಧಿಕಾರಿ ಕಾರ್ಯವೈಖರಿಗೆ ತೀವ್ರ ಅಸಮಾಧಾನಗೊಂಡ ಸಾರ್ವಜನಿಕರು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2023ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮುನಿರಾಜು ವಿರುದ್ಧ ಸಾರ್ವಜನಿಕರ ಆಕ್ರೋಶಗೊಂಡ ಹಿನ್ನೆಲೆ ಅಪೂರ್ಣಗೊಂಡಿದೆ.

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಾಶೆಟ್ಟಿಹಳ್ಳಿ ಪ.ಪಂ ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯವಾಗಿದೆ. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಅಭಿವೃದ್ಧಿ ದೃಷ್ಟಿಯಿಂದ ಕರೆಯಲಾಗಿರುವ ಪೂರ್ವಭಾವಿ ಸಭೆಗೆ ಕೇವಲ ಬೆರಳೆಣಿಕೆಯಷ್ಟು ಮಂದಿಯನ್ನು ಮಾತ್ರ ಆಹ್ವಾನ ನೀಡಲಾಗಿದೆ. ಸಂಘ-ಸಂಸ್ಥೆ, ಯುವ ಜನತೆ, ಸಾರ್ವಜನಿಕರಿಗೆ, ಮಾಧ್ಯಮದವರಿಗೆ ಮಾಹಿತಿಯೇ ಇಲ್ಲ. ಇಲ್ಲಿನ ಮುಖ್ಯಾಧಿಕಾರಿ ತಮ್ಮಿಷ್ಟದಂತೆ ನಡೆದುಕೊಳ್ಳುತ್ತಿದ್ದಾರೆ. ಬಜೆಟ್ ಅಂಕಿ-ಅಂಶಗಳು ಕೇವಲ ಬೋಗಸ್ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕಿಡಿಕಾರಿದರು.

ಪಟ್ಟಣ ಪಂಚಾಯತಿಯಾಗಿ ಎರಡು ವರ್ಷ ಕಳೆದಿದೆ. ಕಳೆದ ಬಜೆಟ್ ನಲ್ಲಿ ಘೋಷಿಸಿದ ಯಾವುದೇ ಒಂದು ಯೋಜನೆ ಜಾರಿಯಾಗಿಲ್ಲ. ಕನಿಷ್ಠ ಮೂಲಭೂತ ಸೌಕರ್ಯಗಳ ಒದಗಿಸುವಲ್ಲಿಯೂ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಸುವನಹಳ್ಳಿ ಮುಖಂಡ ಅಂಬರೀಶ್ ಮಾತನಾಡಿ ಗ್ರಾಮ ಪಂಚಾಯತಿಯಾಗಿದ್ದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಗಾಂಧಿ ಪುರಸ್ಕಾರ, ನೈರ್ಮಲ್ಯ ರತ್ನ, ದೀನ್ ದಯಾಳ್ ಪ್ರಶಸ್ತಿ ಹೀಗೆ ಗ್ರಾಮ ಪಂಚಾಯತಿಗಳಿಗೆ ನೀಡಲಾಗುವ ಪ್ರತಿಯೊಂದು ವಿಭಾಗದಲ್ಲಿಯೂ ಸ್ಥಾನ ಪಡೆದು ಪ್ರಶಸ್ತಿ ಪಡೆದುಕೊಂಡಿತ್ತು. ಆದರೆ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಇಲ್ಲಿನ ಸುತ್ತಮುತ್ತಲಿನ ಪ್ರದೇಶ ಸೇರಿ ನಮ್ಮ ಪಂಚಾಯತಿಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ಇತ್ತು ಆದರೆ ಅಭಿವೃದ್ಧಿ ವೇಗ ಶೂನ್ಯಕ್ಕೆ ಇಳಿದಿದೆ ಎಂದರು.

ಬಜೆಟ್ ವಿಚಾರ ಜನರ ಗಮನಕ್ಕೆ ತಂದು ಸಿದ್ಧಪಡಿಸಬೇಕು. ಸಲಹೆ, ಸೂಚನೆಗಳನ್ನು ಪಡೆದುಕೊಂಡ ಸಿದ್ಧಪಡಿಸಬೇಕು, ಆದರೆ ಇಲ್ಲಿನ ಮುಖ್ಯಾಧಿಕಾರಿ ಮುನಿರಾಜು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿಯಾಗಿರಬೇಕು. ಆದರೆ ಈಗಿರುವ ಅಧಿಕಾರಿ ಕೇವಲ ಕಂದಾಯ ನಿರೀಕ್ಷಕರಾಗಿದ್ದು, ಇದೀಗ ಪ್ರಮೋಷನ್ ಆಧಾರದ ಮೇಲೆ ಮುಖ್ಯಾಧಿಕಾರಿ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದು ಗುಡುಗಿದರು.

ಪ.ಪಂ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಈ ಅಧಿಕಾರಿಯನ್ನು ಒಂದು ವಾರದಲ್ಲಿ ಬದಲಾಯಿಸದಿದ್ದರೆ ಪಂಚಾಯತಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು. ಈ ನಿರರ್ಥಕ ಬಜೆಟ್ ನಮಗೆ ಬೇಕಾಗಿಲ್ಲ ಎಂದು ಬಜೆಟ್ ಪ್ರತಿ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

2 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

2 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

4 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

8 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

14 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago