ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2023ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮುನಿರಾಜು ವಿರುದ್ಧ ಸಾರ್ವಜನಿಕರ ಆಕ್ರೋಶಗೊಂಡ ಹಿನ್ನೆಲೆ ಅಪೂರ್ಣಗೊಂಡಿದೆ.
ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖಂಡರು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಾಶೆಟ್ಟಿಹಳ್ಳಿ ಪ.ಪಂ ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯವಾಗಿದೆ. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ ಅಭಿವೃದ್ಧಿ ದೃಷ್ಟಿಯಿಂದ ಕರೆಯಲಾಗಿರುವ ಪೂರ್ವಭಾವಿ ಸಭೆಗೆ ಕೇವಲ ಬೆರಳೆಣಿಕೆಯಷ್ಟು ಮಂದಿಯನ್ನು ಮಾತ್ರ ಆಹ್ವಾನ ನೀಡಲಾಗಿದೆ. ಸಂಘ-ಸಂಸ್ಥೆ, ಯುವ ಜನತೆ, ಸಾರ್ವಜನಿಕರಿಗೆ, ಮಾಧ್ಯಮದವರಿಗೆ ಮಾಹಿತಿಯೇ ಇಲ್ಲ. ಇಲ್ಲಿನ ಮುಖ್ಯಾಧಿಕಾರಿ ತಮ್ಮಿಷ್ಟದಂತೆ ನಡೆದುಕೊಳ್ಳುತ್ತಿದ್ದಾರೆ. ಬಜೆಟ್ ಅಂಕಿ-ಅಂಶಗಳು ಕೇವಲ ಬೋಗಸ್ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕಿಡಿಕಾರಿದರು.
ಕಸುವನಹಳ್ಳಿ ಮುಖಂಡ ಅಂಬರೀಶ್ ಮಾತನಾಡಿ ಗ್ರಾಮ ಪಂಚಾಯತಿಯಾಗಿದ್ದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಗಾಂಧಿ ಪುರಸ್ಕಾರ, ನೈರ್ಮಲ್ಯ ರತ್ನ, ದೀನ್ ದಯಾಳ್ ಪ್ರಶಸ್ತಿ ಹೀಗೆ ಗ್ರಾಮ ಪಂಚಾಯತಿಗಳಿಗೆ ನೀಡಲಾಗುವ ಪ್ರತಿಯೊಂದು ವಿಭಾಗದಲ್ಲಿಯೂ ಸ್ಥಾನ ಪಡೆದು ಪ್ರಶಸ್ತಿ ಪಡೆದುಕೊಂಡಿತ್ತು. ಆದರೆ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಇಲ್ಲಿನ ಸುತ್ತಮುತ್ತಲಿನ ಪ್ರದೇಶ ಸೇರಿ ನಮ್ಮ ಪಂಚಾಯತಿಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ಇತ್ತು ಆದರೆ ಅಭಿವೃದ್ಧಿ ವೇಗ ಶೂನ್ಯಕ್ಕೆ ಇಳಿದಿದೆ ಎಂದರು.
ಬಜೆಟ್ ವಿಚಾರ ಜನರ ಗಮನಕ್ಕೆ ತಂದು ಸಿದ್ಧಪಡಿಸಬೇಕು. ಸಲಹೆ, ಸೂಚನೆಗಳನ್ನು ಪಡೆದುಕೊಂಡ ಸಿದ್ಧಪಡಿಸಬೇಕು, ಆದರೆ ಇಲ್ಲಿನ ಮುಖ್ಯಾಧಿಕಾರಿ ಮುನಿರಾಜು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಸ್ಥಾನಕ್ಕೆ ಕೆಎಎಸ್ ಅಧಿಕಾರಿಯಾಗಿರಬೇಕು. ಆದರೆ ಈಗಿರುವ ಅಧಿಕಾರಿ ಕೇವಲ ಕಂದಾಯ ನಿರೀಕ್ಷಕರಾಗಿದ್ದು, ಇದೀಗ ಪ್ರಮೋಷನ್ ಆಧಾರದ ಮೇಲೆ ಮುಖ್ಯಾಧಿಕಾರಿ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದು ಗುಡುಗಿದರು.
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…