ಬಾಶೆಟ್ಟಿಹಳ್ಳಿ ವಿಎಸ್‍ಎಸ್‍ಎನ್ ಚುನಾವಣೆ: ಅಭ್ಯರ್ಥಿಗಳಿಗೆ ಕಿಡಿಗೇಡಿಗಳು ಪದ ಬಳಕೆಗೆ ಜನಧ್ವನಿ ವೇದಿಕೆ ಖಂಡನೆ

ದೊಡ್ಡಬಳ್ಳಾಪುರ : ತಾಲೂಕಿನ ಬಾಶೆಟ್ಟಿಹಳ್ಳಿ ವಿವಿದೋದ್ದೇಶ  ಸಹಕಾರ ಸಂಘದ ಚುನಾವಣೆ ಉಮೇದುವಾರರನ್ನು ಕಿಡಿಗೇಡಿಗಳು ಎಂದು ಕರೆದಿರುವ ಬಿಜೆಪಿ ಮುಖಂಡರ ಹೇಳಿಕೆ ಖಂಡನೀಯವಾಗಿದ್ದು, ಚುನಾವಣೆಯನ್ನು ವಾಮಮಾರ್ಗದಲ್ಲಿ ಗೆದ್ದ ಇವರು, ಸಂಘದ ಏಳಿಗೆಯ ಮನೋಭಾವವಿರುವವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಿಲ್ಲ ಎಂದು ಜನಧ್ವನಿ ವೇದಿಕೆಯ ಸದಸ್ಯರು ದೂರಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜನಧ್ವನಿ ವೇದಿಕೆಯ ಬಾಶೆಟ್ಟಿಹಳ್ಳಿ ಕೃಷ್ಣ ಮೂರ್ತಿ, ನಾರಾಯಣಸ್ವಾಮಿ, ಜ.19 ರಂದು ಬಾಶೆಟ್ಟಿಹಳ್ಳಿ ವಿವಿದೋದ್ದೇಶ ಸಹಕಾರ ಸಂಘದ ಚುನಾವಣೆ ನಡೆಯಿತು. ಇಲ್ಲಿ ಚುನಾವಣೆಯು ನಡೆದು 30 ವರ್ಷಗಳು ಆಗಿದೆ. ಈಗಲೂ ಮೂರು ಪಕ್ಷಗಳು ಸೇರಿ ಅಪವಿತ್ರ ಮೈತ್ರಿಯೊಂದಿಗೆ, ರೈತರಿಗೆ ಯಾವುದೇ ಮಾಹಿತಿ ನೀಡದೇ  ಅವಿರೋಧ ಆಯ್ಕೆ ಎಂದು ಅವರಿಗೆ ಬೇಕಾದವರನ್ನೇ ಆಯ್ಕೆ ಮಾಡಲು ಹೋರಟಾಗ ಜನಧ್ವನಿ ವೇದಿಕೆಯ ಮುಖಂಡರು ಖಂಡಿಸಿ ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಿತು. ಇದರ ಪರಿಣಾಮ ಚುನಾವಣೆ ನಡೆದು ಎನ್‍ಡಿಎ ಬೆಂಬಲಿತ ಅಭ್ಯರ್ಥಿಗಳು 9 ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 2 ಸದಸ್ಯರು ಜಯಗಳಿಸಿದ್ದಾರೆ. ಸಂಘದಲ್ಲಿ ಒಟ್ಟು ಮತದಾರರ ಸಂಖ್ಯೆ 242,ಅಷ್ಟೇ. ಸಂಘಕ್ಕೆ ಆಯ್ಕೆಯಾಗಲು ಹತ್ತಾರು ಲಕ್ಷಗಳು ಖರ್ಚು ಮಾಡಿ ಗೆಲ್ಲುವ ಅವಶ್ಯಕತೆ ಇತ್ತಾ. ಜನಧ್ವನಿ ವೇದಿಕೆಯಿಂದ ಐದು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮತ ನೀಡಿದ ಎಲ್ಲಾ ಮತಬಾಂಧವರಿಗೂ ತಮ್ಮ ಮೂಲಕ ವಂದನೆಗಳು ಅರ್ಪಿಸುತ್ತೇವೆ ಎಂದರು.

ಈ ಸಮಯದಲ್ಲಿ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡ ಪ್ರೇಮ್ ಕುಮಾರ್, ಚುನಾವಣೆ ನಡೆಸಲು ಕಾರಣರಾದವರು ಕಿಡಿಕೇಡಿಗಳು ಎಂದು ಕರೆದಿದ್ದಾರೆ. ಇದು ಖಂಡನೀಯ. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವವನ್ನು ಉಳಿಸುವ, ಗೌರವಿಸುವ ಹಾಗೂ ಘನತೆಯನ್ನು ಹೆಚ್ಚಿಸುತ್ತದೆ. ಆದರೆ, ಚುನಾವಣೆಗೆ ಸ್ಪರ್ಧಿಸುವುದು ಮತ್ತು ಮತದಾನ ಮಾಡುವುದನ್ನು ವಿರೋಧಿಸುವ ಇವರಿಗೆ ಸಂವಿಧಾನದ ಮೇಲೆ ಗೌರವ ಇಲ್ಲ. ಚುನಾವಣೆಯನ್ನು  ವಾಮಮಾರ್ಗದಲ್ಲಿ ಗೆದ್ದ ಇವರು ಮತ್ತೊಬ್ಬರನ್ನು ಕಿಡಿಗೇಡಿಗಳು ಎನ್ನಲು ಯಾವ ನೈತಿಕತೆ ಇದೆ.  ಹಲವಾರು ವರುಷಗಳಿಂದ ಏಳು ಊರಿನ ರೈತರುಗಳಿಗೆ ಮಾಹಿತಿ ನೀಡದೆ ಕತ್ತಲಲ್ಲಿ ಇಟ್ಟು ಸಂಘದ ಸದಸ್ಯತ್ವವನ್ನು ಹೆಚ್ಚು ಮಾಡದೆ ಕೇಲವೇ ಮತದಾರರನ್ನು ಉಳಿಸಿಕೊಂಡು ಅವಿರೋಧವಾಗಿ ಆಯ್ಕೆಯಾಗಲು ಸಂಚು ರೂಪಿಸುತ್ತಿದ್ದರು. ಇದನ್ನು ಗಮನಿಸಿದ ಜನಧ್ವನಿ ವೇದಿಕೆಯು ಇನ್ನು ಇರುವ ನೂರಾರು ರೈತರನ್ನು ಸಹಕಾರ ಸಂಘಕ್ಕೆ ಸದಸ್ಯರನ್ನಾಗಿಸಲು ಈ ಚುನಾವಣೆಯ ನಿರ್ಣಯವನ್ನು ತೆಗೆದುಕೊಂಡ ಕಾರಣ ವೇದಿಕೆಯನ್ನು ಕಿಡಿಗೇಡಿಗಳೆಂದು ಸಂಭೋಧಿಸಿದ್ದಾರೆ. ಈ ಹಿಂದಿನ ಆಡಳಿತ ಮಂಡಳಿ 30 ವರ್ಷಗಳಿಂದ ಅವಿರೋಧವಾಗಿ ಆಯ್ಕೆಯಾಗಿ ತಮ್ಮ ನಿರ್ದೇಶಕರು ಸಂಘವನ್ನು ಅಭಿವೃದ್ಧಿ ಮಾಡಲು ರೈತರಿಗೆ ಸವಲತ್ತುಗಳನ್ನು ನೀಡಲು ಏನು ಪ್ರಯತ್ನಪಟ್ಟಿದ್ದಾರೆ ಎಂದು ನಾವು ಪ್ರಶ್ನೆ ಮಾಡಬೇಕಾಗಿದೆ ಎಂದರು.

ಈ ವೇಳೆ ರಾಜ್ಯ ಮತ್ತು ತಾಲೂಕು ವೇದಿಕೆ ಮುಖಂಡರಾದ ರಮೇಶ ಸಂಕ್ರಾಂತಿ,  ಮತ್ತು ಕೊನಘಟ್ಟ ಚಂದ್ರಪ್ಪ, ಕೆಸ್ತೂರು ಗಿರೀಶ್, ತಿಪ್ಪೂರು ನರಸಿಂಹ ಮೂರ್ತಿ, ಮತ್ತು  ರಾಮಮೂರ್ತಿ. ನಾಗದೇನಹಳ್ಳಿ ಚಂದ್ರಣ್ಣ ಏಕಾಶಿಪುರ ರಾಜಣ್ಣ , ಬಾಶೆಟ್ಟಹಳ್ಳಿ ಕೃಷ್ಣ ಮೂರ್ತಿ, ಸದಾನಂದ, ಅರಹಳ್ಳಿ ಗುಡದಹಳ್ಳಿ ವೆಂಕಟೇಶ, ಓಬದೇನಹಳ್ಳಿ ರಾಜೇಂದ್ರ ಎಳ್ಳುಪುರ ಮಹೇಶ, ಬೈರಸಂದ್ರ ಗಂಗಾದರ್, ಜಿಂಕೆಬಚ್ಚಹಳ್ಳಿ ದುರ್ಗೇಶ್ ಹಾಜರಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

4 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

4 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

6 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

7 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

8 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

15 hours ago