ಬಾಶೆಟ್ಟಿಹಳ್ಳಿ ವಿಎಸ್‍ಎಸ್‍ಎನ್ ಚುನಾವಣೆ: ಅಭ್ಯರ್ಥಿಗಳಿಗೆ ಕಿಡಿಗೇಡಿಗಳು ಪದ ಬಳಕೆಗೆ ಜನಧ್ವನಿ ವೇದಿಕೆ ಖಂಡನೆ

ದೊಡ್ಡಬಳ್ಳಾಪುರ : ತಾಲೂಕಿನ ಬಾಶೆಟ್ಟಿಹಳ್ಳಿ ವಿವಿದೋದ್ದೇಶ  ಸಹಕಾರ ಸಂಘದ ಚುನಾವಣೆ ಉಮೇದುವಾರರನ್ನು ಕಿಡಿಗೇಡಿಗಳು ಎಂದು ಕರೆದಿರುವ ಬಿಜೆಪಿ ಮುಖಂಡರ ಹೇಳಿಕೆ ಖಂಡನೀಯವಾಗಿದ್ದು, ಚುನಾವಣೆಯನ್ನು ವಾಮಮಾರ್ಗದಲ್ಲಿ ಗೆದ್ದ ಇವರು, ಸಂಘದ ಏಳಿಗೆಯ ಮನೋಭಾವವಿರುವವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಿಲ್ಲ ಎಂದು ಜನಧ್ವನಿ ವೇದಿಕೆಯ ಸದಸ್ಯರು ದೂರಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜನಧ್ವನಿ ವೇದಿಕೆಯ ಬಾಶೆಟ್ಟಿಹಳ್ಳಿ ಕೃಷ್ಣ ಮೂರ್ತಿ, ನಾರಾಯಣಸ್ವಾಮಿ, ಜ.19 ರಂದು ಬಾಶೆಟ್ಟಿಹಳ್ಳಿ ವಿವಿದೋದ್ದೇಶ ಸಹಕಾರ ಸಂಘದ ಚುನಾವಣೆ ನಡೆಯಿತು. ಇಲ್ಲಿ ಚುನಾವಣೆಯು ನಡೆದು 30 ವರ್ಷಗಳು ಆಗಿದೆ. ಈಗಲೂ ಮೂರು ಪಕ್ಷಗಳು ಸೇರಿ ಅಪವಿತ್ರ ಮೈತ್ರಿಯೊಂದಿಗೆ, ರೈತರಿಗೆ ಯಾವುದೇ ಮಾಹಿತಿ ನೀಡದೇ  ಅವಿರೋಧ ಆಯ್ಕೆ ಎಂದು ಅವರಿಗೆ ಬೇಕಾದವರನ್ನೇ ಆಯ್ಕೆ ಮಾಡಲು ಹೋರಟಾಗ ಜನಧ್ವನಿ ವೇದಿಕೆಯ ಮುಖಂಡರು ಖಂಡಿಸಿ ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಿತು. ಇದರ ಪರಿಣಾಮ ಚುನಾವಣೆ ನಡೆದು ಎನ್‍ಡಿಎ ಬೆಂಬಲಿತ ಅಭ್ಯರ್ಥಿಗಳು 9 ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 2 ಸದಸ್ಯರು ಜಯಗಳಿಸಿದ್ದಾರೆ. ಸಂಘದಲ್ಲಿ ಒಟ್ಟು ಮತದಾರರ ಸಂಖ್ಯೆ 242,ಅಷ್ಟೇ. ಸಂಘಕ್ಕೆ ಆಯ್ಕೆಯಾಗಲು ಹತ್ತಾರು ಲಕ್ಷಗಳು ಖರ್ಚು ಮಾಡಿ ಗೆಲ್ಲುವ ಅವಶ್ಯಕತೆ ಇತ್ತಾ. ಜನಧ್ವನಿ ವೇದಿಕೆಯಿಂದ ಐದು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮತ ನೀಡಿದ ಎಲ್ಲಾ ಮತಬಾಂಧವರಿಗೂ ತಮ್ಮ ಮೂಲಕ ವಂದನೆಗಳು ಅರ್ಪಿಸುತ್ತೇವೆ ಎಂದರು.

ಈ ಸಮಯದಲ್ಲಿ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡ ಪ್ರೇಮ್ ಕುಮಾರ್, ಚುನಾವಣೆ ನಡೆಸಲು ಕಾರಣರಾದವರು ಕಿಡಿಕೇಡಿಗಳು ಎಂದು ಕರೆದಿದ್ದಾರೆ. ಇದು ಖಂಡನೀಯ. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವವನ್ನು ಉಳಿಸುವ, ಗೌರವಿಸುವ ಹಾಗೂ ಘನತೆಯನ್ನು ಹೆಚ್ಚಿಸುತ್ತದೆ. ಆದರೆ, ಚುನಾವಣೆಗೆ ಸ್ಪರ್ಧಿಸುವುದು ಮತ್ತು ಮತದಾನ ಮಾಡುವುದನ್ನು ವಿರೋಧಿಸುವ ಇವರಿಗೆ ಸಂವಿಧಾನದ ಮೇಲೆ ಗೌರವ ಇಲ್ಲ. ಚುನಾವಣೆಯನ್ನು  ವಾಮಮಾರ್ಗದಲ್ಲಿ ಗೆದ್ದ ಇವರು ಮತ್ತೊಬ್ಬರನ್ನು ಕಿಡಿಗೇಡಿಗಳು ಎನ್ನಲು ಯಾವ ನೈತಿಕತೆ ಇದೆ.  ಹಲವಾರು ವರುಷಗಳಿಂದ ಏಳು ಊರಿನ ರೈತರುಗಳಿಗೆ ಮಾಹಿತಿ ನೀಡದೆ ಕತ್ತಲಲ್ಲಿ ಇಟ್ಟು ಸಂಘದ ಸದಸ್ಯತ್ವವನ್ನು ಹೆಚ್ಚು ಮಾಡದೆ ಕೇಲವೇ ಮತದಾರರನ್ನು ಉಳಿಸಿಕೊಂಡು ಅವಿರೋಧವಾಗಿ ಆಯ್ಕೆಯಾಗಲು ಸಂಚು ರೂಪಿಸುತ್ತಿದ್ದರು. ಇದನ್ನು ಗಮನಿಸಿದ ಜನಧ್ವನಿ ವೇದಿಕೆಯು ಇನ್ನು ಇರುವ ನೂರಾರು ರೈತರನ್ನು ಸಹಕಾರ ಸಂಘಕ್ಕೆ ಸದಸ್ಯರನ್ನಾಗಿಸಲು ಈ ಚುನಾವಣೆಯ ನಿರ್ಣಯವನ್ನು ತೆಗೆದುಕೊಂಡ ಕಾರಣ ವೇದಿಕೆಯನ್ನು ಕಿಡಿಗೇಡಿಗಳೆಂದು ಸಂಭೋಧಿಸಿದ್ದಾರೆ. ಈ ಹಿಂದಿನ ಆಡಳಿತ ಮಂಡಳಿ 30 ವರ್ಷಗಳಿಂದ ಅವಿರೋಧವಾಗಿ ಆಯ್ಕೆಯಾಗಿ ತಮ್ಮ ನಿರ್ದೇಶಕರು ಸಂಘವನ್ನು ಅಭಿವೃದ್ಧಿ ಮಾಡಲು ರೈತರಿಗೆ ಸವಲತ್ತುಗಳನ್ನು ನೀಡಲು ಏನು ಪ್ರಯತ್ನಪಟ್ಟಿದ್ದಾರೆ ಎಂದು ನಾವು ಪ್ರಶ್ನೆ ಮಾಡಬೇಕಾಗಿದೆ ಎಂದರು.

ಈ ವೇಳೆ ರಾಜ್ಯ ಮತ್ತು ತಾಲೂಕು ವೇದಿಕೆ ಮುಖಂಡರಾದ ರಮೇಶ ಸಂಕ್ರಾಂತಿ,  ಮತ್ತು ಕೊನಘಟ್ಟ ಚಂದ್ರಪ್ಪ, ಕೆಸ್ತೂರು ಗಿರೀಶ್, ತಿಪ್ಪೂರು ನರಸಿಂಹ ಮೂರ್ತಿ, ಮತ್ತು  ರಾಮಮೂರ್ತಿ. ನಾಗದೇನಹಳ್ಳಿ ಚಂದ್ರಣ್ಣ ಏಕಾಶಿಪುರ ರಾಜಣ್ಣ , ಬಾಶೆಟ್ಟಹಳ್ಳಿ ಕೃಷ್ಣ ಮೂರ್ತಿ, ಸದಾನಂದ, ಅರಹಳ್ಳಿ ಗುಡದಹಳ್ಳಿ ವೆಂಕಟೇಶ, ಓಬದೇನಹಳ್ಳಿ ರಾಜೇಂದ್ರ ಎಳ್ಳುಪುರ ಮಹೇಶ, ಬೈರಸಂದ್ರ ಗಂಗಾದರ್, ಜಿಂಕೆಬಚ್ಚಹಳ್ಳಿ ದುರ್ಗೇಶ್ ಹಾಜರಿದ್ದರು.

Ramesh Babu

Journalist

Recent Posts

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

48 minutes ago

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

11 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

12 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

14 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

15 hours ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

18 hours ago