ಬಾಶೆಟ್ಟಿಹಳ್ಳಿ ವಿಎಸ್‍ಎಸ್‍ಎನ್ ಚುನಾವಣೆ: ಅಭ್ಯರ್ಥಿಗಳಿಗೆ ಕಿಡಿಗೇಡಿಗಳು ಪದ ಬಳಕೆಗೆ ಜನಧ್ವನಿ ವೇದಿಕೆ ಖಂಡನೆ

ದೊಡ್ಡಬಳ್ಳಾಪುರ : ತಾಲೂಕಿನ ಬಾಶೆಟ್ಟಿಹಳ್ಳಿ ವಿವಿದೋದ್ದೇಶ  ಸಹಕಾರ ಸಂಘದ ಚುನಾವಣೆ ಉಮೇದುವಾರರನ್ನು ಕಿಡಿಗೇಡಿಗಳು ಎಂದು ಕರೆದಿರುವ ಬಿಜೆಪಿ ಮುಖಂಡರ ಹೇಳಿಕೆ ಖಂಡನೀಯವಾಗಿದ್ದು, ಚುನಾವಣೆಯನ್ನು ವಾಮಮಾರ್ಗದಲ್ಲಿ ಗೆದ್ದ ಇವರು, ಸಂಘದ ಏಳಿಗೆಯ ಮನೋಭಾವವಿರುವವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಿಲ್ಲ ಎಂದು ಜನಧ್ವನಿ ವೇದಿಕೆಯ ಸದಸ್ಯರು ದೂರಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜನಧ್ವನಿ ವೇದಿಕೆಯ ಬಾಶೆಟ್ಟಿಹಳ್ಳಿ ಕೃಷ್ಣ ಮೂರ್ತಿ, ನಾರಾಯಣಸ್ವಾಮಿ, ಜ.19 ರಂದು ಬಾಶೆಟ್ಟಿಹಳ್ಳಿ ವಿವಿದೋದ್ದೇಶ ಸಹಕಾರ ಸಂಘದ ಚುನಾವಣೆ ನಡೆಯಿತು. ಇಲ್ಲಿ ಚುನಾವಣೆಯು ನಡೆದು 30 ವರ್ಷಗಳು ಆಗಿದೆ. ಈಗಲೂ ಮೂರು ಪಕ್ಷಗಳು ಸೇರಿ ಅಪವಿತ್ರ ಮೈತ್ರಿಯೊಂದಿಗೆ, ರೈತರಿಗೆ ಯಾವುದೇ ಮಾಹಿತಿ ನೀಡದೇ  ಅವಿರೋಧ ಆಯ್ಕೆ ಎಂದು ಅವರಿಗೆ ಬೇಕಾದವರನ್ನೇ ಆಯ್ಕೆ ಮಾಡಲು ಹೋರಟಾಗ ಜನಧ್ವನಿ ವೇದಿಕೆಯ ಮುಖಂಡರು ಖಂಡಿಸಿ ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಿತು. ಇದರ ಪರಿಣಾಮ ಚುನಾವಣೆ ನಡೆದು ಎನ್‍ಡಿಎ ಬೆಂಬಲಿತ ಅಭ್ಯರ್ಥಿಗಳು 9 ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 2 ಸದಸ್ಯರು ಜಯಗಳಿಸಿದ್ದಾರೆ. ಸಂಘದಲ್ಲಿ ಒಟ್ಟು ಮತದಾರರ ಸಂಖ್ಯೆ 242,ಅಷ್ಟೇ. ಸಂಘಕ್ಕೆ ಆಯ್ಕೆಯಾಗಲು ಹತ್ತಾರು ಲಕ್ಷಗಳು ಖರ್ಚು ಮಾಡಿ ಗೆಲ್ಲುವ ಅವಶ್ಯಕತೆ ಇತ್ತಾ. ಜನಧ್ವನಿ ವೇದಿಕೆಯಿಂದ ಐದು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮತ ನೀಡಿದ ಎಲ್ಲಾ ಮತಬಾಂಧವರಿಗೂ ತಮ್ಮ ಮೂಲಕ ವಂದನೆಗಳು ಅರ್ಪಿಸುತ್ತೇವೆ ಎಂದರು.

ಈ ಸಮಯದಲ್ಲಿ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡ ಪ್ರೇಮ್ ಕುಮಾರ್, ಚುನಾವಣೆ ನಡೆಸಲು ಕಾರಣರಾದವರು ಕಿಡಿಕೇಡಿಗಳು ಎಂದು ಕರೆದಿದ್ದಾರೆ. ಇದು ಖಂಡನೀಯ. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವವನ್ನು ಉಳಿಸುವ, ಗೌರವಿಸುವ ಹಾಗೂ ಘನತೆಯನ್ನು ಹೆಚ್ಚಿಸುತ್ತದೆ. ಆದರೆ, ಚುನಾವಣೆಗೆ ಸ್ಪರ್ಧಿಸುವುದು ಮತ್ತು ಮತದಾನ ಮಾಡುವುದನ್ನು ವಿರೋಧಿಸುವ ಇವರಿಗೆ ಸಂವಿಧಾನದ ಮೇಲೆ ಗೌರವ ಇಲ್ಲ. ಚುನಾವಣೆಯನ್ನು  ವಾಮಮಾರ್ಗದಲ್ಲಿ ಗೆದ್ದ ಇವರು ಮತ್ತೊಬ್ಬರನ್ನು ಕಿಡಿಗೇಡಿಗಳು ಎನ್ನಲು ಯಾವ ನೈತಿಕತೆ ಇದೆ.  ಹಲವಾರು ವರುಷಗಳಿಂದ ಏಳು ಊರಿನ ರೈತರುಗಳಿಗೆ ಮಾಹಿತಿ ನೀಡದೆ ಕತ್ತಲಲ್ಲಿ ಇಟ್ಟು ಸಂಘದ ಸದಸ್ಯತ್ವವನ್ನು ಹೆಚ್ಚು ಮಾಡದೆ ಕೇಲವೇ ಮತದಾರರನ್ನು ಉಳಿಸಿಕೊಂಡು ಅವಿರೋಧವಾಗಿ ಆಯ್ಕೆಯಾಗಲು ಸಂಚು ರೂಪಿಸುತ್ತಿದ್ದರು. ಇದನ್ನು ಗಮನಿಸಿದ ಜನಧ್ವನಿ ವೇದಿಕೆಯು ಇನ್ನು ಇರುವ ನೂರಾರು ರೈತರನ್ನು ಸಹಕಾರ ಸಂಘಕ್ಕೆ ಸದಸ್ಯರನ್ನಾಗಿಸಲು ಈ ಚುನಾವಣೆಯ ನಿರ್ಣಯವನ್ನು ತೆಗೆದುಕೊಂಡ ಕಾರಣ ವೇದಿಕೆಯನ್ನು ಕಿಡಿಗೇಡಿಗಳೆಂದು ಸಂಭೋಧಿಸಿದ್ದಾರೆ. ಈ ಹಿಂದಿನ ಆಡಳಿತ ಮಂಡಳಿ 30 ವರ್ಷಗಳಿಂದ ಅವಿರೋಧವಾಗಿ ಆಯ್ಕೆಯಾಗಿ ತಮ್ಮ ನಿರ್ದೇಶಕರು ಸಂಘವನ್ನು ಅಭಿವೃದ್ಧಿ ಮಾಡಲು ರೈತರಿಗೆ ಸವಲತ್ತುಗಳನ್ನು ನೀಡಲು ಏನು ಪ್ರಯತ್ನಪಟ್ಟಿದ್ದಾರೆ ಎಂದು ನಾವು ಪ್ರಶ್ನೆ ಮಾಡಬೇಕಾಗಿದೆ ಎಂದರು.

ಈ ವೇಳೆ ರಾಜ್ಯ ಮತ್ತು ತಾಲೂಕು ವೇದಿಕೆ ಮುಖಂಡರಾದ ರಮೇಶ ಸಂಕ್ರಾಂತಿ,  ಮತ್ತು ಕೊನಘಟ್ಟ ಚಂದ್ರಪ್ಪ, ಕೆಸ್ತೂರು ಗಿರೀಶ್, ತಿಪ್ಪೂರು ನರಸಿಂಹ ಮೂರ್ತಿ, ಮತ್ತು  ರಾಮಮೂರ್ತಿ. ನಾಗದೇನಹಳ್ಳಿ ಚಂದ್ರಣ್ಣ ಏಕಾಶಿಪುರ ರಾಜಣ್ಣ , ಬಾಶೆಟ್ಟಹಳ್ಳಿ ಕೃಷ್ಣ ಮೂರ್ತಿ, ಸದಾನಂದ, ಅರಹಳ್ಳಿ ಗುಡದಹಳ್ಳಿ ವೆಂಕಟೇಶ, ಓಬದೇನಹಳ್ಳಿ ರಾಜೇಂದ್ರ ಎಳ್ಳುಪುರ ಮಹೇಶ, ಬೈರಸಂದ್ರ ಗಂಗಾದರ್, ಜಿಂಕೆಬಚ್ಚಹಳ್ಳಿ ದುರ್ಗೇಶ್ ಹಾಜರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

13 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago