ಬಾಶೆಟ್ಟಿಹಳ್ಳಿ ವಿಎಸ್‍ಎಸ್‍ಎನ್ ಚುನಾವಣೆ: ಅಭ್ಯರ್ಥಿಗಳಿಗೆ ಕಿಡಿಗೇಡಿಗಳು ಪದ ಬಳಕೆಗೆ ಜನಧ್ವನಿ ವೇದಿಕೆ ಖಂಡನೆ

ದೊಡ್ಡಬಳ್ಳಾಪುರ : ತಾಲೂಕಿನ ಬಾಶೆಟ್ಟಿಹಳ್ಳಿ ವಿವಿದೋದ್ದೇಶ  ಸಹಕಾರ ಸಂಘದ ಚುನಾವಣೆ ಉಮೇದುವಾರರನ್ನು ಕಿಡಿಗೇಡಿಗಳು ಎಂದು ಕರೆದಿರುವ ಬಿಜೆಪಿ ಮುಖಂಡರ ಹೇಳಿಕೆ ಖಂಡನೀಯವಾಗಿದ್ದು, ಚುನಾವಣೆಯನ್ನು ವಾಮಮಾರ್ಗದಲ್ಲಿ ಗೆದ್ದ ಇವರು, ಸಂಘದ ಏಳಿಗೆಯ ಮನೋಭಾವವಿರುವವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಿಲ್ಲ ಎಂದು ಜನಧ್ವನಿ ವೇದಿಕೆಯ ಸದಸ್ಯರು ದೂರಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜನಧ್ವನಿ ವೇದಿಕೆಯ ಬಾಶೆಟ್ಟಿಹಳ್ಳಿ ಕೃಷ್ಣ ಮೂರ್ತಿ, ನಾರಾಯಣಸ್ವಾಮಿ, ಜ.19 ರಂದು ಬಾಶೆಟ್ಟಿಹಳ್ಳಿ ವಿವಿದೋದ್ದೇಶ ಸಹಕಾರ ಸಂಘದ ಚುನಾವಣೆ ನಡೆಯಿತು. ಇಲ್ಲಿ ಚುನಾವಣೆಯು ನಡೆದು 30 ವರ್ಷಗಳು ಆಗಿದೆ. ಈಗಲೂ ಮೂರು ಪಕ್ಷಗಳು ಸೇರಿ ಅಪವಿತ್ರ ಮೈತ್ರಿಯೊಂದಿಗೆ, ರೈತರಿಗೆ ಯಾವುದೇ ಮಾಹಿತಿ ನೀಡದೇ  ಅವಿರೋಧ ಆಯ್ಕೆ ಎಂದು ಅವರಿಗೆ ಬೇಕಾದವರನ್ನೇ ಆಯ್ಕೆ ಮಾಡಲು ಹೋರಟಾಗ ಜನಧ್ವನಿ ವೇದಿಕೆಯ ಮುಖಂಡರು ಖಂಡಿಸಿ ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಿತು. ಇದರ ಪರಿಣಾಮ ಚುನಾವಣೆ ನಡೆದು ಎನ್‍ಡಿಎ ಬೆಂಬಲಿತ ಅಭ್ಯರ್ಥಿಗಳು 9 ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 2 ಸದಸ್ಯರು ಜಯಗಳಿಸಿದ್ದಾರೆ. ಸಂಘದಲ್ಲಿ ಒಟ್ಟು ಮತದಾರರ ಸಂಖ್ಯೆ 242,ಅಷ್ಟೇ. ಸಂಘಕ್ಕೆ ಆಯ್ಕೆಯಾಗಲು ಹತ್ತಾರು ಲಕ್ಷಗಳು ಖರ್ಚು ಮಾಡಿ ಗೆಲ್ಲುವ ಅವಶ್ಯಕತೆ ಇತ್ತಾ. ಜನಧ್ವನಿ ವೇದಿಕೆಯಿಂದ ಐದು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮತ ನೀಡಿದ ಎಲ್ಲಾ ಮತಬಾಂಧವರಿಗೂ ತಮ್ಮ ಮೂಲಕ ವಂದನೆಗಳು ಅರ್ಪಿಸುತ್ತೇವೆ ಎಂದರು.

ಈ ಸಮಯದಲ್ಲಿ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡ ಪ್ರೇಮ್ ಕುಮಾರ್, ಚುನಾವಣೆ ನಡೆಸಲು ಕಾರಣರಾದವರು ಕಿಡಿಕೇಡಿಗಳು ಎಂದು ಕರೆದಿದ್ದಾರೆ. ಇದು ಖಂಡನೀಯ. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವವನ್ನು ಉಳಿಸುವ, ಗೌರವಿಸುವ ಹಾಗೂ ಘನತೆಯನ್ನು ಹೆಚ್ಚಿಸುತ್ತದೆ. ಆದರೆ, ಚುನಾವಣೆಗೆ ಸ್ಪರ್ಧಿಸುವುದು ಮತ್ತು ಮತದಾನ ಮಾಡುವುದನ್ನು ವಿರೋಧಿಸುವ ಇವರಿಗೆ ಸಂವಿಧಾನದ ಮೇಲೆ ಗೌರವ ಇಲ್ಲ. ಚುನಾವಣೆಯನ್ನು  ವಾಮಮಾರ್ಗದಲ್ಲಿ ಗೆದ್ದ ಇವರು ಮತ್ತೊಬ್ಬರನ್ನು ಕಿಡಿಗೇಡಿಗಳು ಎನ್ನಲು ಯಾವ ನೈತಿಕತೆ ಇದೆ.  ಹಲವಾರು ವರುಷಗಳಿಂದ ಏಳು ಊರಿನ ರೈತರುಗಳಿಗೆ ಮಾಹಿತಿ ನೀಡದೆ ಕತ್ತಲಲ್ಲಿ ಇಟ್ಟು ಸಂಘದ ಸದಸ್ಯತ್ವವನ್ನು ಹೆಚ್ಚು ಮಾಡದೆ ಕೇಲವೇ ಮತದಾರರನ್ನು ಉಳಿಸಿಕೊಂಡು ಅವಿರೋಧವಾಗಿ ಆಯ್ಕೆಯಾಗಲು ಸಂಚು ರೂಪಿಸುತ್ತಿದ್ದರು. ಇದನ್ನು ಗಮನಿಸಿದ ಜನಧ್ವನಿ ವೇದಿಕೆಯು ಇನ್ನು ಇರುವ ನೂರಾರು ರೈತರನ್ನು ಸಹಕಾರ ಸಂಘಕ್ಕೆ ಸದಸ್ಯರನ್ನಾಗಿಸಲು ಈ ಚುನಾವಣೆಯ ನಿರ್ಣಯವನ್ನು ತೆಗೆದುಕೊಂಡ ಕಾರಣ ವೇದಿಕೆಯನ್ನು ಕಿಡಿಗೇಡಿಗಳೆಂದು ಸಂಭೋಧಿಸಿದ್ದಾರೆ. ಈ ಹಿಂದಿನ ಆಡಳಿತ ಮಂಡಳಿ 30 ವರ್ಷಗಳಿಂದ ಅವಿರೋಧವಾಗಿ ಆಯ್ಕೆಯಾಗಿ ತಮ್ಮ ನಿರ್ದೇಶಕರು ಸಂಘವನ್ನು ಅಭಿವೃದ್ಧಿ ಮಾಡಲು ರೈತರಿಗೆ ಸವಲತ್ತುಗಳನ್ನು ನೀಡಲು ಏನು ಪ್ರಯತ್ನಪಟ್ಟಿದ್ದಾರೆ ಎಂದು ನಾವು ಪ್ರಶ್ನೆ ಮಾಡಬೇಕಾಗಿದೆ ಎಂದರು.

ಈ ವೇಳೆ ರಾಜ್ಯ ಮತ್ತು ತಾಲೂಕು ವೇದಿಕೆ ಮುಖಂಡರಾದ ರಮೇಶ ಸಂಕ್ರಾಂತಿ,  ಮತ್ತು ಕೊನಘಟ್ಟ ಚಂದ್ರಪ್ಪ, ಕೆಸ್ತೂರು ಗಿರೀಶ್, ತಿಪ್ಪೂರು ನರಸಿಂಹ ಮೂರ್ತಿ, ಮತ್ತು  ರಾಮಮೂರ್ತಿ. ನಾಗದೇನಹಳ್ಳಿ ಚಂದ್ರಣ್ಣ ಏಕಾಶಿಪುರ ರಾಜಣ್ಣ , ಬಾಶೆಟ್ಟಹಳ್ಳಿ ಕೃಷ್ಣ ಮೂರ್ತಿ, ಸದಾನಂದ, ಅರಹಳ್ಳಿ ಗುಡದಹಳ್ಳಿ ವೆಂಕಟೇಶ, ಓಬದೇನಹಳ್ಳಿ ರಾಜೇಂದ್ರ ಎಳ್ಳುಪುರ ಮಹೇಶ, ಬೈರಸಂದ್ರ ಗಂಗಾದರ್, ಜಿಂಕೆಬಚ್ಚಹಳ್ಳಿ ದುರ್ಗೇಶ್ ಹಾಜರಿದ್ದರು.

Ramesh Babu

Journalist

Recent Posts

ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಎಂಎಲ್‌ಸಿ ಟಿ.ಎ. ಶರವಣ, ಅವಧೂತ ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್‌ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…

2 hours ago

‘ಡೇ ಕೇರ್’ ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ……?

ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…

5 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

18 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

18 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

19 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

23 hours ago