ಬಾಶೆಟ್ಟಿಹಳ್ಳಿ ವಿಎಸ್‍ಎಸ್‍ಎನ್ ಚುನಾವಣೆ: ಅಭ್ಯರ್ಥಿಗಳಿಗೆ ಕಿಡಿಗೇಡಿಗಳು ಪದ ಬಳಕೆಗೆ ಜನಧ್ವನಿ ವೇದಿಕೆ ಖಂಡನೆ

ದೊಡ್ಡಬಳ್ಳಾಪುರ : ತಾಲೂಕಿನ ಬಾಶೆಟ್ಟಿಹಳ್ಳಿ ವಿವಿದೋದ್ದೇಶ  ಸಹಕಾರ ಸಂಘದ ಚುನಾವಣೆ ಉಮೇದುವಾರರನ್ನು ಕಿಡಿಗೇಡಿಗಳು ಎಂದು ಕರೆದಿರುವ ಬಿಜೆಪಿ ಮುಖಂಡರ ಹೇಳಿಕೆ ಖಂಡನೀಯವಾಗಿದ್ದು, ಚುನಾವಣೆಯನ್ನು ವಾಮಮಾರ್ಗದಲ್ಲಿ ಗೆದ್ದ ಇವರು, ಸಂಘದ ಏಳಿಗೆಯ ಮನೋಭಾವವಿರುವವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಿಲ್ಲ ಎಂದು ಜನಧ್ವನಿ ವೇದಿಕೆಯ ಸದಸ್ಯರು ದೂರಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜನಧ್ವನಿ ವೇದಿಕೆಯ ಬಾಶೆಟ್ಟಿಹಳ್ಳಿ ಕೃಷ್ಣ ಮೂರ್ತಿ, ನಾರಾಯಣಸ್ವಾಮಿ, ಜ.19 ರಂದು ಬಾಶೆಟ್ಟಿಹಳ್ಳಿ ವಿವಿದೋದ್ದೇಶ ಸಹಕಾರ ಸಂಘದ ಚುನಾವಣೆ ನಡೆಯಿತು. ಇಲ್ಲಿ ಚುನಾವಣೆಯು ನಡೆದು 30 ವರ್ಷಗಳು ಆಗಿದೆ. ಈಗಲೂ ಮೂರು ಪಕ್ಷಗಳು ಸೇರಿ ಅಪವಿತ್ರ ಮೈತ್ರಿಯೊಂದಿಗೆ, ರೈತರಿಗೆ ಯಾವುದೇ ಮಾಹಿತಿ ನೀಡದೇ  ಅವಿರೋಧ ಆಯ್ಕೆ ಎಂದು ಅವರಿಗೆ ಬೇಕಾದವರನ್ನೇ ಆಯ್ಕೆ ಮಾಡಲು ಹೋರಟಾಗ ಜನಧ್ವನಿ ವೇದಿಕೆಯ ಮುಖಂಡರು ಖಂಡಿಸಿ ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಿತು. ಇದರ ಪರಿಣಾಮ ಚುನಾವಣೆ ನಡೆದು ಎನ್‍ಡಿಎ ಬೆಂಬಲಿತ ಅಭ್ಯರ್ಥಿಗಳು 9 ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 2 ಸದಸ್ಯರು ಜಯಗಳಿಸಿದ್ದಾರೆ. ಸಂಘದಲ್ಲಿ ಒಟ್ಟು ಮತದಾರರ ಸಂಖ್ಯೆ 242,ಅಷ್ಟೇ. ಸಂಘಕ್ಕೆ ಆಯ್ಕೆಯಾಗಲು ಹತ್ತಾರು ಲಕ್ಷಗಳು ಖರ್ಚು ಮಾಡಿ ಗೆಲ್ಲುವ ಅವಶ್ಯಕತೆ ಇತ್ತಾ. ಜನಧ್ವನಿ ವೇದಿಕೆಯಿಂದ ಐದು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮತ ನೀಡಿದ ಎಲ್ಲಾ ಮತಬಾಂಧವರಿಗೂ ತಮ್ಮ ಮೂಲಕ ವಂದನೆಗಳು ಅರ್ಪಿಸುತ್ತೇವೆ ಎಂದರು.

ಈ ಸಮಯದಲ್ಲಿ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡ ಪ್ರೇಮ್ ಕುಮಾರ್, ಚುನಾವಣೆ ನಡೆಸಲು ಕಾರಣರಾದವರು ಕಿಡಿಕೇಡಿಗಳು ಎಂದು ಕರೆದಿದ್ದಾರೆ. ಇದು ಖಂಡನೀಯ. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವವನ್ನು ಉಳಿಸುವ, ಗೌರವಿಸುವ ಹಾಗೂ ಘನತೆಯನ್ನು ಹೆಚ್ಚಿಸುತ್ತದೆ. ಆದರೆ, ಚುನಾವಣೆಗೆ ಸ್ಪರ್ಧಿಸುವುದು ಮತ್ತು ಮತದಾನ ಮಾಡುವುದನ್ನು ವಿರೋಧಿಸುವ ಇವರಿಗೆ ಸಂವಿಧಾನದ ಮೇಲೆ ಗೌರವ ಇಲ್ಲ. ಚುನಾವಣೆಯನ್ನು  ವಾಮಮಾರ್ಗದಲ್ಲಿ ಗೆದ್ದ ಇವರು ಮತ್ತೊಬ್ಬರನ್ನು ಕಿಡಿಗೇಡಿಗಳು ಎನ್ನಲು ಯಾವ ನೈತಿಕತೆ ಇದೆ.  ಹಲವಾರು ವರುಷಗಳಿಂದ ಏಳು ಊರಿನ ರೈತರುಗಳಿಗೆ ಮಾಹಿತಿ ನೀಡದೆ ಕತ್ತಲಲ್ಲಿ ಇಟ್ಟು ಸಂಘದ ಸದಸ್ಯತ್ವವನ್ನು ಹೆಚ್ಚು ಮಾಡದೆ ಕೇಲವೇ ಮತದಾರರನ್ನು ಉಳಿಸಿಕೊಂಡು ಅವಿರೋಧವಾಗಿ ಆಯ್ಕೆಯಾಗಲು ಸಂಚು ರೂಪಿಸುತ್ತಿದ್ದರು. ಇದನ್ನು ಗಮನಿಸಿದ ಜನಧ್ವನಿ ವೇದಿಕೆಯು ಇನ್ನು ಇರುವ ನೂರಾರು ರೈತರನ್ನು ಸಹಕಾರ ಸಂಘಕ್ಕೆ ಸದಸ್ಯರನ್ನಾಗಿಸಲು ಈ ಚುನಾವಣೆಯ ನಿರ್ಣಯವನ್ನು ತೆಗೆದುಕೊಂಡ ಕಾರಣ ವೇದಿಕೆಯನ್ನು ಕಿಡಿಗೇಡಿಗಳೆಂದು ಸಂಭೋಧಿಸಿದ್ದಾರೆ. ಈ ಹಿಂದಿನ ಆಡಳಿತ ಮಂಡಳಿ 30 ವರ್ಷಗಳಿಂದ ಅವಿರೋಧವಾಗಿ ಆಯ್ಕೆಯಾಗಿ ತಮ್ಮ ನಿರ್ದೇಶಕರು ಸಂಘವನ್ನು ಅಭಿವೃದ್ಧಿ ಮಾಡಲು ರೈತರಿಗೆ ಸವಲತ್ತುಗಳನ್ನು ನೀಡಲು ಏನು ಪ್ರಯತ್ನಪಟ್ಟಿದ್ದಾರೆ ಎಂದು ನಾವು ಪ್ರಶ್ನೆ ಮಾಡಬೇಕಾಗಿದೆ ಎಂದರು.

ಈ ವೇಳೆ ರಾಜ್ಯ ಮತ್ತು ತಾಲೂಕು ವೇದಿಕೆ ಮುಖಂಡರಾದ ರಮೇಶ ಸಂಕ್ರಾಂತಿ,  ಮತ್ತು ಕೊನಘಟ್ಟ ಚಂದ್ರಪ್ಪ, ಕೆಸ್ತೂರು ಗಿರೀಶ್, ತಿಪ್ಪೂರು ನರಸಿಂಹ ಮೂರ್ತಿ, ಮತ್ತು  ರಾಮಮೂರ್ತಿ. ನಾಗದೇನಹಳ್ಳಿ ಚಂದ್ರಣ್ಣ ಏಕಾಶಿಪುರ ರಾಜಣ್ಣ , ಬಾಶೆಟ್ಟಹಳ್ಳಿ ಕೃಷ್ಣ ಮೂರ್ತಿ, ಸದಾನಂದ, ಅರಹಳ್ಳಿ ಗುಡದಹಳ್ಳಿ ವೆಂಕಟೇಶ, ಓಬದೇನಹಳ್ಳಿ ರಾಜೇಂದ್ರ ಎಳ್ಳುಪುರ ಮಹೇಶ, ಬೈರಸಂದ್ರ ಗಂಗಾದರ್, ಜಿಂಕೆಬಚ್ಚಹಳ್ಳಿ ದುರ್ಗೇಶ್ ಹಾಜರಿದ್ದರು.

Ramesh Babu

Journalist

Recent Posts

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

10 minutes ago

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

17 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

18 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

21 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

1 day ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

1 day ago