Categories: ಲೇಖನ

ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ……..

ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ………

ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ…………

ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ………

ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ……….

ಆದರೆ,
ನಾನಾ ಕಾರಣಗಳಿಂದ ನಮ್ಮನ್ನು ದ್ವೇಷಿಸುವ, ಅಸೂಯೆ ಪಡುವ, ನಮ್ಮ ಕಾಲೆಳೆಯುವ, ನಮಗೆ ತೊಂದರೆ ಕೊಡುವ ಜನರ ನಡುವೆ ನಾವು ವಾಸಿಸುವುದು ಕಷ್ಟವಾದಾಗ ನಾವು ಸಾಧನೆಯ ಬೆಟ್ಟವನ್ನು ‌ಏರಲು ಪ್ರಯತ್ನಿಸಬೇಕು………..

ಇಲ್ಲದಿದ್ದರೆ ಈ ಜನರ ನಡುವೆ ನಮ್ಮ ಬದುಕು ಅಸಹನೆಯಿಂದಲೇ ಮುಗಿದು ಹೋಗುತ್ತದೆ…….

ಹಾಗಾದರೆ ಸಾಧನೆ ಎಂದರೇನು ?

ನಮ್ಮ ‌ಸಾಮಾನ್ಯ ಜನರ ಭಾವನೆಯಲ್ಲಿ ಹೆಚ್ಚು ಹೆಚ್ಚು ಹಣ ಮಾಡುವುದು, ಉನ್ನತ ಅಧಿಕಾರಕ್ಕೆ ಏರುವುದು, ಅಪಾರ ‌ಆಸ್ತಿ ಮಾಡುವುದು, ಪ್ರಶಸ್ತಿಗಳನ್ನು ಪಡೆಯುವುದು, ಜನಪ್ರಿಯತೆ ಗಳಿಸುವುದು,
ಒಟ್ಟಿನಲ್ಲಿ ನಮ್ಮ ಸಮಕಾಲೀನ ಇತರರಿಗಿಂತ ನೋಡುಗರ ದೃಷ್ಟಿಯಲ್ಲಿ ಹೆಚ್ಚು ಹೆಸರು ಮಾಡುವುದು ಎಂದಾಗಿದೆ.‌……

ಈ ರೀತಿಯ ಸಾಧನೆ ಮಾಡುವ ಅವಕಾಶವಿದ್ದು ಒಂದು ವೇಳೆ ನಾವು ಅದರಲ್ಲಿ ಯಶಸ್ವಿಯಾದರೆ, ನಾವು ಯಾವುದೇ ಸ್ಥಳದಲ್ಲಿ ಇದ್ದರೂ ಗೌರವ ಘನತೆಗೇನು ಕುಂದು ಬರುವುದಿಲ್ಲ……..

ಅನೇಕ ಕಾರಣಗಳಿಗಾಗಿ ನಾವು ಈ ರೀತಿಯ ಸ್ಥಾನ ಮಾನ ಪಡೆಯಲು ಸಾಧ್ಯವಾಗದಿದ್ದಾಗ, ನಮ್ಮ ನಡುವಿನ ಇತರರು ಈ ವ್ಯಾವಹಾರಿಕ ಜಗತ್ತಿನಲ್ಲಿ ನಮಗಿಂತ ಮುಂದೆ ಹೋಗಿ ನಮ್ಮನ್ನು ಕೀಳಾಗಿ ಕಂಡಾಗ ಅಥವಾ ನಮ್ಮ ಮನಸ್ಸು ಹಾಗೆ ಭಾವಿಸಿದಾಗ ನಾವು ಎತ್ತರದ ಪ್ರದೇಶಕ್ಕೆ ಹೋಗಲು ಪ್ರಯತ್ನಿಸಬೇಕು……

ಅದು ಹೇಗೆ ಸಾಧ್ಯ.?
ಈ ಯಾವುದೇ ಅನುಕೂಲಗಳು ನಮಗೆ ಇಲ್ಲದಿರುವಾಗ ಸಾಧನೆಯ ಮೆಟ್ಟಿಲು ಹತ್ತುವುದು ಹೇಗೆ ???????

ಖಂಡಿತ ‌ಸಾಧ್ಯವಿದೆ…..

ನಮ್ಮ ಇಡೀ ವ್ಯಕ್ತಿತ್ವವನ್ನು ಪುನರ್ ರೂಪಿಸಿಕೊಳ್ಳಬೇಕು ಮತ್ತು ಉನ್ನತೀಕರಿಸಿಕೊಳ್ಳಬೇಕು.
ಹೇಗೆಂದರೆ………..

ಹೆಚ್ಚು ನಿರೀಕ್ಷೆಗಳನ್ನೇ ಇಟ್ಟುಕೊಳ್ಳದೆ ನಿರ್ಲಿಪ್ತತೆ ಅಥವಾ ಸ್ಥಿತ ಪ್ರಜ್ಞತೆಯನ್ನು ಬೆಳೆಸಿಕೊಳ್ಳಬೇಕು…….

ಯಾವುದೇ ‌ಸಂದರ್ಭದಲ್ಲಿಯೂ ಯಾರ ಮೇಲೆಯೂ ಅವಲಂಬಿತವಾಗುವ ಅಥವಾ ಯಾವುದನ್ನಾದರೂ ಬೇಡುವ ಪರಿಸ್ಥಿತಿಯನ್ನು ತಿರಸ್ಕರಿಸಬೇಕು…..

ಈ ಪರಿಸ್ಥಿತಿಯಲ್ಲಿಯೂ ಅನಿರೀಕ್ಷಿತವಾಗಿ ಕೆಲವು ಆಕರ್ಷಣೆಗಳು ಮತ್ತು ಅನುಕೂಲಕರ ಲಾಭಗಳು ನಮಗೆ ಒಲಿಯಬಹುದು. ಅವುಗಳನ್ನು ನಮ್ಮ ಘನತೆಗೆ ತಕ್ಕುದಾದ ಮತ್ತು ಭವಿಷ್ಯದ ನಮ್ಮ ಸ್ವಾಭಿಮಾನದ ಬದುಕಿಗೆ ತೊಂದರೆಯಾಗದೆ ಇದ್ದರೆ ಮಾತ್ರ ಸ್ವೀಕರಿಸಬೇಕು. ಇಲ್ಲದಿದ್ದರೆ ‌ನಮ್ಮ ಮನೋಬಲ ಉಪಯೋಗಿಸಿ ತಿರಸ್ಕರಿಸಬೇಕು…..

ಈ ಹಂತದಲ್ಲಿ ಸಾಂಪ್ರದಾಯಿಕ ಶೈಲಿಯ ಜನರ ನಡುವೆ ಇರುವುದಕ್ಕಿಂತ ಏಕಾಂತದ ವಾತಾವರಣದಲ್ಲಿ ನಮ್ಮ ಸಮಯ ಕಳೆಯುವಂತೆ ನಮ್ಮ ಮನಸ್ಸಿನ ಅರಮನೆಗೆ ನಾವೇ ರಾಜರಾಗಬೇಕು…..

ಸಮಾಜದ ಸುತ್ತ ನಾವು ಸುತ್ತುವುದಕ್ಕಿಂತ ನಮ್ಮ ಸುತ್ತ ಸಮಾಜ ಸುತ್ತುವ ಸ್ವಯಂ ಅಹಂ ರೂಪಿಸಿಕೊಳ್ಳಬೇಕು. ನಮಗೆ ಆಸಕ್ತಿದಾಯಕ ಕ್ಷೇತ್ರವನ್ನು ಆರಿಸಿಕೊಂಡು ಅದರಲ್ಲಿ ತಪಸ್ಸಿನಂತೆ ನಿರಂತರವಾಗಿ ತೊಡಗಿಸಿಕೊಳ್ಳಬೇಕು. ಅದರಲ್ಲಿ ಸಾಧನೆ ಮಾಡುವ ಯಾವ ಅವಕಾಶವನ್ನೂ ಕಳೆದುಕೊಳ್ಳಬಾರದು…..

ಎಲ್ಲಕ್ಕಿಂತ ಮುಖ್ಯವಾಗಿ ಸಾವಿನ ಭಯವನ್ನು ಕಡಿಮೆ ಮಾಡಿಕೊಂಡು ಅದನ್ನು ಸ್ವೀಕರಿಸಲು ಮಾನಸಿಕವಾಗಿ ಸಿದ್ದರಾಗಬೇಕು. ಸಾವಿನ ನಂತರದ ಅಂಶಗಳ ಬಗ್ಗೆ ಯೋಚಿಸಲೇಬಾರದು….

ಇದು ಎಲ್ಲವನ್ನೂ ತ್ಯಜಿಸಿ ಸನ್ಯಾಸಿಯಾಗುವ ಸ್ಥಿತಿಯಲ್ಲ. ಸಾಧನೆಗಾಗಿ ರೂಪಿಸಿಕೊಳ್ಳುವ ಸರಳ ಮಾನಸಿಕ ಜೀವನಶೈಲಿ……

ಆಗ ನಮ್ಮನ್ನು ಹಿಡಿಯಲು ಅಥವಾ ನಿಯಂತ್ರಿಸಲು ಯಾರಿಗೂ ಸಾಧ್ಯವಾಗುವುದಿಲ್ಲ…..

ಏನೂ ಇಲ್ಲದ ಸಂದರ್ಭದಲ್ಲಿಯೂ ಇದನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ, ಕನಿಷ್ಠ ಮಟ್ಟದ ಸರಳ ಜೀವನಶೈಲಿ ನಮ್ಮದಾದರೆ ನಮ್ಮ ವ್ಯಕ್ತಿತ್ವ ತಾನೇತಾನಾಗಿ ಮೇಲಕ್ಕೇರುತ್ತದೆ. ನಮ್ಮ ಬಡತನದ, ಸೋಲಿನ, ಅಸಹಾಯಕತೆಯ ಜೀವನ ನೋಡಿ ಅಸೂಯೆ ಪಡುವ, ವ್ಯಂಗ್ಯ ಮಾಡುವ ಜನ, ತಮ್ಮ ವ್ಯಾವಹಾರಿಕ ಮತ್ತು ಸಂಬಂಧಗಳ ಏರಿಳಿತಗಳಿಂದ ಬಸವಳಿದಾಗ ನಮ್ಮ ನೆಮ್ಮದಿಯ ಜೀವನ ಅವರಿಗೆ ಸೋಜಿಗದಂತೆ ಕಾಣುತ್ತದೆ. ಅವರುಗಳು ನಮ್ಮ ವ್ಯಕ್ತಿತ್ವದ ಮುಂದೆ ಸಣ್ಣವರಾಗಿ ಕಾಣುತ್ತಾರೆ. ಅದೇ ನಮ್ಮ ಬಹುದೊಡ್ಡ ಆತ್ಮವಿಶ್ವಾಸ….

ಮಾನಸಿಕವಾಗಿ ನಾವು ಏರುವ ಎತ್ತರಕ್ಕೆ ಯಾವುದೇ ಮಿತಿಯೂ ಇಲ್ಲ……….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

13 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago