Categories: ಕೋಲಾರ

ಬಿಇಎಂಎಲ್ ಹೊರಗುತ್ತಿಗೆ ಕಾರ್ಮಿಕರ ಸಮಸ್ಯೆ ಬಗ್ಗೆ ರಕ್ಷಣಾ ಸಚಿವರ ಜತೆ ಚರ್ಚೆ- ನನ್ನ ಮಾತಿನ ಮೇಲೆ ವಿಶ್ವಾಸವಿಟ್ಟು ಕೆಲಸಕ್ಕೆ ಹಾಜರಾಗಲು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮನವಿ

ಕೋಲಾರ: ಬಿಇಎಂಎಲ್ ಹೊರಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ಜಿಲ್ಲೆಯ ಕೆಜಿಎಫ್ ನಲ್ಲಿ ಕಳೆದ 13 ದಿನಗಳಿಂದ ಕಾರ್ಮಿಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಕೋಲಾರ ಸಂಸದ ಮಲ್ಲೇಶ್ ಬಾಬು, ಶಾಸಕರಾದ ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿ ಮಾತನಾಡಿದ ಅವರು ನಿಮ್ಮ ಬೇಡಿಕೆಗಳ ಬಗ್ಗೆ ಈಗಾಗಲೇ ಕಂಪನಿಯ ಸಿಎಂಡಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅವರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ನಾನು ನಾಳೆ (ಸೋಮವಾರ) ಬೆಳಗ್ಗೆ ದೆಹಲಿಗೆ ತೆರಳುತ್ತಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ನಿಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುತ್ತೇನೆ. ಸಿಂಗ್ ಅವರಿಗೆ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ ಇದ್ದು, ನಿಮ್ಮ ಸಮಸ್ಯೆಗಳಿಗೆ ಅವರು ಖಂಡಿತಾ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎನ್ನುವ ಭರವಸೆ ಇದೆ ಎಂದರು.

ಕಾರ್ಮಿಕರ ಉದ್ಯೋಗ ಖಾಯಂ, ವೇತನ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಕಳೆದ 13 ದಿನಗಳಿಂದ ಧರಣಿ ನಡೆಸುತ್ತಿರುವ ನಿಮ್ಮ ನೋವನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ನಾನು ಇಲ್ಲಿಗೆ ಬರುವುದಕ್ಕೆ ಮೊದಲೇ ಬಿಇಎಂಎಲ್ ಸಿಎಂಡಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದೆ. ಉದ್ಯೋಗ ಖಾಯಂ ವಿಷಯ ಒಂದು ಮಾತ್ರ ನನ್ನ ಕೈಯ್ಯಲ್ಲಿ ಇಲ್ಲ, ಉಳಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ನಾವು ಪರಿಶೀಲನೆ ಮಾಡಲು ಸಿದ್ಧರಿದ್ದೇವೆ. ಕಾರ್ಮಿಕರು ಧರಣಿ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾದರೆ, ಈ ಬಗ್ಗೆ ಕೂತು ಚರ್ಚೆ ನಡೆಸಲು ನಾವು ತಯಾರಿದ್ದೇವೆ ಎಂದು ಅವರು ನನಗೆ ತಿಳಿಸಿದರು ಎಂಬುದಾಗಿ ಸಚಿವರು ಕಾರ್ಮಿಕರ ಸಭೆಯಲ್ಲಿ ಹೇಳಿದರು.

ಬಿಇಎಂಎಲ್ ಕೇಂದ್ರ ಸರಕಾರಿ ಸ್ವಾಮ್ಯದ ಬೃಹತ್ ಕೈಗಾರಿಕೆ. 13 ದಿನಗಳಿಂದ ಧರಣಿಗೆ ಅವಕಾಶ ಮಾಡಿಕೊಡುವ ಪರಿಸ್ಥಿತಿ ಸೃಷ್ಟಿ ಆಗಿದ್ದೇ ಕಳವಳಕಾರಿ. ಇದು ಕಂಪನಿಗಾಗಲಿ, ದೇಶಕ್ಕಾಗಲಿ ಅಥವಾ ಕಾರ್ಮಿಕರ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಆದ್ದರಿಂದ ನನ್ನ ಮಾತಿನ ಮೇಲೆ ಭರವಸೆ ಇಡಿ. ತಕ್ಷಣ ನಿಮ್ಮ ಧರಣಿ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾಗಿ. ನಾನು ಗುರುವಾರದೊಳಗೆ ರಕ್ಷಣಾ ಸಚಿವರ ಜತೆ ಚರ್ಚೆ ನಡೆಸಿದ ಬಳಿಕ ಶುಕ್ರವಾರ ಬೆಳಗ್ಗೆ ನಿಮ್ಮೆಲ್ಲರಿಗೂ ಒಳ್ಳೆಯ ಸುದ್ದಿ ಕೊಡುತ್ತೇನೆ ಎಂದರು.

ನಿಮ್ಮಗಳ ಕುಟುಂಬಗಳಿಗೆ ಒಳ್ಳೆಯದಾಗುವ ರೀತಿಯಲ್ಲಿ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ, ಇದು ನನ್ನ ಜವಾಬ್ದಾರಿ. ನೀವು ಮೊದಲು ಕೆಲಸಕ್ಕೆ ಹೋಗಿ, ಇಷ್ಟು ದಿನ ಧರಣೆ ಕೂತರೆ ಯಾರಿಗೂ ಶ್ರೇಯಸ್ಕರ ಅಲ್ಲ. ಶನಿವಾರ ಈ ವಿಷಯ ನನ್ನ ಗಮನಕ್ಕೆ ಬಂತು. ಭಾನುವಾರ ನಿಮ್ಮ ಬಳಿಗೆ ಬಂದಿದ್ದೇನೆ ಎಂದರು.

ಇದಕ್ಕೂ ಮೊದಲು ಸಚಿವ ಕುಮಾರಸ್ವಾಮಿ ಕಾರ್ಮಿಕ ಮುಖಂಡರ ಮನವಿಗಳನ್ನು ಆಲಿಸಿದರು. ಬಳಿಕ ಸಚಿವರ ಮಾತಿಗೆ ಸ್ಪಂದಿಸಿದ ಕಾರ್ಮಿಕರು; ಈ ಕೂಡಲೇ ನಾವು ಕೆಲಸಕ್ಕೆ ಹಾಜರಾಗಬೇಕು ಎನ್ನುವ ನಿಮ್ಮ ಒತ್ತಾಸೆಯ ಬಗ್ಗೆ ಚರ್ಚೆ ನಡೆಸುತ್ತೇವೆ. ಇಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ಕಳಕಳಿಗೆ ವಿರುದ್ಧವಾದ ಯಾವುದೇ ನಿರ್ಧಾರ ಮಾಡುವುದಿಲ್ಲ ಎಂದು ಹೇಳಿದರು.

ಸಭೆಯಲ್ಲಿ ಮಾಜಿ ಸಂಸದ ಎಸ್. ಮುನಿಸ್ವಾಮಿ, ಎಂಎಲ್ಸಿ ಇಂಚರ ಗೋವಿಂದರಾಜು, ಮಾಜಿ ಸದಸ್ಯ ಚೌಡರೆಡ್ಡಿ, ಮಾಜಿ ಶಾಸಕರಾದ ವೈ.ಸಂಪಂಗಿ, ಎಂ.ನಾರಾಯಣಸ್ವಾಮಿ, ಬಿ.ಪಿ ವೆಂಕಟಮುನಿಯಪ್ಪ, ಸೇರಿದಂತೆ ಅನೇಕ ಮುಖಂಡರು, ವಿವಿಧ ಸಂಘಟನೆಗಳ ಕಾರ್ಮಿಕ ಮುಖಂಡರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

12 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

21 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

22 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago