Categories: ಕೋಲಾರ

ಬಿಇಎಂಎಲ್ ಹೊರಗುತ್ತಿಗೆ ಕಾರ್ಮಿಕರ ಸಮಸ್ಯೆ ಬಗ್ಗೆ ರಕ್ಷಣಾ ಸಚಿವರ ಜತೆ ಚರ್ಚೆ- ನನ್ನ ಮಾತಿನ ಮೇಲೆ ವಿಶ್ವಾಸವಿಟ್ಟು ಕೆಲಸಕ್ಕೆ ಹಾಜರಾಗಲು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮನವಿ

ಕೋಲಾರ: ಬಿಇಎಂಎಲ್ ಹೊರಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ಜಿಲ್ಲೆಯ ಕೆಜಿಎಫ್ ನಲ್ಲಿ ಕಳೆದ 13 ದಿನಗಳಿಂದ ಕಾರ್ಮಿಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಕೋಲಾರ ಸಂಸದ ಮಲ್ಲೇಶ್ ಬಾಬು, ಶಾಸಕರಾದ ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿ ಮಾತನಾಡಿದ ಅವರು ನಿಮ್ಮ ಬೇಡಿಕೆಗಳ ಬಗ್ಗೆ ಈಗಾಗಲೇ ಕಂಪನಿಯ ಸಿಎಂಡಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅವರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ನಾನು ನಾಳೆ (ಸೋಮವಾರ) ಬೆಳಗ್ಗೆ ದೆಹಲಿಗೆ ತೆರಳುತ್ತಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ನಿಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುತ್ತೇನೆ. ಸಿಂಗ್ ಅವರಿಗೆ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ ಇದ್ದು, ನಿಮ್ಮ ಸಮಸ್ಯೆಗಳಿಗೆ ಅವರು ಖಂಡಿತಾ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎನ್ನುವ ಭರವಸೆ ಇದೆ ಎಂದರು.

ಕಾರ್ಮಿಕರ ಉದ್ಯೋಗ ಖಾಯಂ, ವೇತನ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಕಳೆದ 13 ದಿನಗಳಿಂದ ಧರಣಿ ನಡೆಸುತ್ತಿರುವ ನಿಮ್ಮ ನೋವನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ನಾನು ಇಲ್ಲಿಗೆ ಬರುವುದಕ್ಕೆ ಮೊದಲೇ ಬಿಇಎಂಎಲ್ ಸಿಎಂಡಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದೆ. ಉದ್ಯೋಗ ಖಾಯಂ ವಿಷಯ ಒಂದು ಮಾತ್ರ ನನ್ನ ಕೈಯ್ಯಲ್ಲಿ ಇಲ್ಲ, ಉಳಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ನಾವು ಪರಿಶೀಲನೆ ಮಾಡಲು ಸಿದ್ಧರಿದ್ದೇವೆ. ಕಾರ್ಮಿಕರು ಧರಣಿ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾದರೆ, ಈ ಬಗ್ಗೆ ಕೂತು ಚರ್ಚೆ ನಡೆಸಲು ನಾವು ತಯಾರಿದ್ದೇವೆ ಎಂದು ಅವರು ನನಗೆ ತಿಳಿಸಿದರು ಎಂಬುದಾಗಿ ಸಚಿವರು ಕಾರ್ಮಿಕರ ಸಭೆಯಲ್ಲಿ ಹೇಳಿದರು.

ಬಿಇಎಂಎಲ್ ಕೇಂದ್ರ ಸರಕಾರಿ ಸ್ವಾಮ್ಯದ ಬೃಹತ್ ಕೈಗಾರಿಕೆ. 13 ದಿನಗಳಿಂದ ಧರಣಿಗೆ ಅವಕಾಶ ಮಾಡಿಕೊಡುವ ಪರಿಸ್ಥಿತಿ ಸೃಷ್ಟಿ ಆಗಿದ್ದೇ ಕಳವಳಕಾರಿ. ಇದು ಕಂಪನಿಗಾಗಲಿ, ದೇಶಕ್ಕಾಗಲಿ ಅಥವಾ ಕಾರ್ಮಿಕರ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಆದ್ದರಿಂದ ನನ್ನ ಮಾತಿನ ಮೇಲೆ ಭರವಸೆ ಇಡಿ. ತಕ್ಷಣ ನಿಮ್ಮ ಧರಣಿ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾಗಿ. ನಾನು ಗುರುವಾರದೊಳಗೆ ರಕ್ಷಣಾ ಸಚಿವರ ಜತೆ ಚರ್ಚೆ ನಡೆಸಿದ ಬಳಿಕ ಶುಕ್ರವಾರ ಬೆಳಗ್ಗೆ ನಿಮ್ಮೆಲ್ಲರಿಗೂ ಒಳ್ಳೆಯ ಸುದ್ದಿ ಕೊಡುತ್ತೇನೆ ಎಂದರು.

ನಿಮ್ಮಗಳ ಕುಟುಂಬಗಳಿಗೆ ಒಳ್ಳೆಯದಾಗುವ ರೀತಿಯಲ್ಲಿ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ, ಇದು ನನ್ನ ಜವಾಬ್ದಾರಿ. ನೀವು ಮೊದಲು ಕೆಲಸಕ್ಕೆ ಹೋಗಿ, ಇಷ್ಟು ದಿನ ಧರಣೆ ಕೂತರೆ ಯಾರಿಗೂ ಶ್ರೇಯಸ್ಕರ ಅಲ್ಲ. ಶನಿವಾರ ಈ ವಿಷಯ ನನ್ನ ಗಮನಕ್ಕೆ ಬಂತು. ಭಾನುವಾರ ನಿಮ್ಮ ಬಳಿಗೆ ಬಂದಿದ್ದೇನೆ ಎಂದರು.

ಇದಕ್ಕೂ ಮೊದಲು ಸಚಿವ ಕುಮಾರಸ್ವಾಮಿ ಕಾರ್ಮಿಕ ಮುಖಂಡರ ಮನವಿಗಳನ್ನು ಆಲಿಸಿದರು. ಬಳಿಕ ಸಚಿವರ ಮಾತಿಗೆ ಸ್ಪಂದಿಸಿದ ಕಾರ್ಮಿಕರು; ಈ ಕೂಡಲೇ ನಾವು ಕೆಲಸಕ್ಕೆ ಹಾಜರಾಗಬೇಕು ಎನ್ನುವ ನಿಮ್ಮ ಒತ್ತಾಸೆಯ ಬಗ್ಗೆ ಚರ್ಚೆ ನಡೆಸುತ್ತೇವೆ. ಇಲ್ಲಿ ಯಾವುದೇ ಕಾರಣಕ್ಕೂ ನಿಮ್ಮ ಕಳಕಳಿಗೆ ವಿರುದ್ಧವಾದ ಯಾವುದೇ ನಿರ್ಧಾರ ಮಾಡುವುದಿಲ್ಲ ಎಂದು ಹೇಳಿದರು.

ಸಭೆಯಲ್ಲಿ ಮಾಜಿ ಸಂಸದ ಎಸ್. ಮುನಿಸ್ವಾಮಿ, ಎಂಎಲ್ಸಿ ಇಂಚರ ಗೋವಿಂದರಾಜು, ಮಾಜಿ ಸದಸ್ಯ ಚೌಡರೆಡ್ಡಿ, ಮಾಜಿ ಶಾಸಕರಾದ ವೈ.ಸಂಪಂಗಿ, ಎಂ.ನಾರಾಯಣಸ್ವಾಮಿ, ಬಿ.ಪಿ ವೆಂಕಟಮುನಿಯಪ್ಪ, ಸೇರಿದಂತೆ ಅನೇಕ ಮುಖಂಡರು, ವಿವಿಧ ಸಂಘಟನೆಗಳ ಕಾರ್ಮಿಕ ಮುಖಂಡರು ಇದ್ದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

5 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

18 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

19 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

20 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

20 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

1 day ago