ಬಿಎಂಟಿಸಿ ಬಸ್ ಡ್ರೈವರ್ ಗೆ ಹೃದಯಾಘಾತ: ಬಸ್ ಡ್ರೈವ್ ಮಾಡುತ್ತಲೇ ಡ್ರೈವರ್ ಸೀಟ್‌ನಿಂದ ಕುಸಿದು ಬಿದ್ದ ಚಾಲಕ: ಸಂಚರಿಸುತ್ತಿದ್ದ ಬಸ್​​ನ್ನು ನಿಲ್ಲಿಸಿ ಸಮಯಪ್ರಜ್ಞೆ ಮೆರೆದ ಕಂಡಕ್ಟರ್ ಓಬಳೇಶ್

ನೆಲಮಂಗಲದಿಂದ ಯಶವಂತಪುರ ಕಡೆ ಬರುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಡ್ರೈವರ್ ಕಿರಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಹಾಗೇ ನರಳಾಡಿದ ಕಿರಣ್ ತಕ್ಷಣವೇ ಡ್ರೈವರ್ ಸೀಟ್‌ನಿಂದ ಕುಸಿದು ಬೀಳುತ್ತಾ ಇದ್ದರು. ಇದನ್ನು ಗಮನಿಸಿದ ಕಂಡಕ್ಟರ್ ಓಬಳೇಶ್ ಸಂಚರಿಸುತ್ತಿದ್ದ ಬಸ್​​ನ್ನು ನಿಲ್ಲಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಸನ ಮೂಲದ ಚಾಲಕ ಕಿರಣ್‌ಕುಮಾರ್ (40) ಮೃತ ಚಾಲಕ. ಇಂದು (ನವೆಂಬರ್ 06) ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್ ಡ್ರೈವ್​ ಮಾಡಿಕೊಂಡು ಹೋಗುತ್ತಿರುವಾಗಲೇ ಏಕಾಏಕಿ ಹೃದಯಾಘಾತವಾಗಿದೆ.

ಬಿಎಂಟಿಸಿ ಡ್ರೈವರ್ ಕಿರಣ್‌ ಅವರಿಗೆ ಹೃದಯಾಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡ್ರೈವಿಂಗ್ ವೇಳೆ ಚಾಲಕ ಹಾರ್ಟ್ ಅಟ್ಯಾಕ್‌ನಿಂದ ಸಾವನ್ನಪ್ಪಿದ್ದಾರೆ. ಪ್ರಾಣ ಬಿಟ್ಟ ಡ್ರೈವರ್‌ಗೆ ಇನ್ನೂ 39 ವರ್ಷ ವಯಸ್ಸಾಗಿತ್ತು ಅಷ್ಟೇ. ಹೃದಯಾಘಾತದ ಸಂದರ್ಭದಲ್ಲೂ ಕಿರಣ್ ಅವರು ಬಸ್ ನಿಲ್ಲಿಸಲು ಪ್ರಯತ್ನ ಪಟ್ಟಿದ್ದಾರೆ. ಕಂಡಕ್ಟರ್ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.

ಬಿಎಂಟಿಸಿ ಕಂಡಕ್ಟರ್ ಓಬ್ಳೇಶ್ ಅವರ ಈ ಸಾಹಸ ಮತ್ತು ಸಮಯಪ್ರಜ್ಞೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. BMTC ಮುಖ್ಯ ಸಂಚಾರ ವ್ಯವಸ್ಥಾಪಕರಾದ ಜಿ.ಟಿ ಪ್ರಭಾಕರ್ ರೆಡ್ಡಿ ಅವರು ಪ್ರಯಾಣಿಕರ ಜೀವ ಉಳಿಸಿದ ಕಂಡಕ್ಟರ್‌ಗೆ ಬಹುಮಾನ ಘೋಷಣೆ ಮಾಡಿದ್ದಾರೆ..

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

8 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

8 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

8 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

9 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

10 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

14 hours ago