ನೆಲಮಂಗಲದಿಂದ ಯಶವಂತಪುರ ಕಡೆ ಬರುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಡ್ರೈವರ್ ಕಿರಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಹಾಗೇ ನರಳಾಡಿದ ಕಿರಣ್ ತಕ್ಷಣವೇ ಡ್ರೈವರ್ ಸೀಟ್ನಿಂದ ಕುಸಿದು ಬೀಳುತ್ತಾ ಇದ್ದರು. ಇದನ್ನು ಗಮನಿಸಿದ ಕಂಡಕ್ಟರ್ ಓಬಳೇಶ್ ಸಂಚರಿಸುತ್ತಿದ್ದ ಬಸ್ನ್ನು ನಿಲ್ಲಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಬಸ್ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾಸನ ಮೂಲದ ಚಾಲಕ ಕಿರಣ್ಕುಮಾರ್ (40) ಮೃತ ಚಾಲಕ. ಇಂದು (ನವೆಂಬರ್ 06) ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್ ಡ್ರೈವ್ ಮಾಡಿಕೊಂಡು ಹೋಗುತ್ತಿರುವಾಗಲೇ ಏಕಾಏಕಿ ಹೃದಯಾಘಾತವಾಗಿದೆ.
ಬಿಎಂಟಿಸಿ ಕಂಡಕ್ಟರ್ ಓಬ್ಳೇಶ್ ಅವರ ಈ ಸಾಹಸ ಮತ್ತು ಸಮಯಪ್ರಜ್ಞೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. BMTC ಮುಖ್ಯ ಸಂಚಾರ ವ್ಯವಸ್ಥಾಪಕರಾದ ಜಿ.ಟಿ ಪ್ರಭಾಕರ್ ರೆಡ್ಡಿ ಅವರು ಪ್ರಯಾಣಿಕರ ಜೀವ ಉಳಿಸಿದ ಕಂಡಕ್ಟರ್ಗೆ ಬಹುಮಾನ ಘೋಷಣೆ ಮಾಡಿದ್ದಾರೆ..
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…