ಬಿಎಂಟಿಸಿ ಬಸ್ ನಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸಿಟಿ ರೌಂಡ್ಸ್ ಮಾಡಿದರು.
ಬೆಂಗಳೂರಿನ ಶಿವಾಜಿನಗರದಿಂದ- ದೇವನಹಳ್ಳಿ,ಕಾಕ್ಸ್ ಟೌನ್, ಇಂಡಿಯನ್ ಎಕ್ಸ್ ಪ್ರೆಸ್ ವರೆಗೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿ ಪ್ರಯಾಣಿಕರ ಕುಂದುಕೊರತೆಗಳನ್ನು ಆಲಿಸಿದರು.
ಈ ವೇಳೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಾರ್ವಜನಿಕ ಬಸ್ ನಲ್ಲಿ ಪ್ರಯಾಣಿಸಿ ಮಹಿಳೆಯರ ಸುರಕ್ಷತೆ ಬಗ್ಗೆ ಗಮನಹರಿಸಿದ್ದೇವೆ. ಮಹಿಳೆಯರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ. ಪ್ರಯಾಣದ ವೇಳೆ ಮಹಿಳೆಯರಿಗೆ ತೊಂದರೆಯಾದಾಗ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂಬ ಅರಿವು ಮೂಡಿಸಲಾಗಿದೆ. ಸೇಫ್ಟಿ ಐ ಲ್ಯಾಂಡ್ ಗಳಲ್ಲಿ ಪ್ಯಾನಿಕ್ ಬಟನ್ ಬಳಸೋದು ಹೇಗೆ.. ತೊಂದರೆಯಾದಾಗ 112 ಕರೆ ಮಾಡೋದು.. ಸುರಕ್ಷಾ ಆಪ್ ಬಳಕೆ ಮಾಡುವ ವಿಧಾನ, ಹೀಗೆ ಹಲವು ಮಾಹಿತಿಯನ್ನ ಮಹಿಳೆಯರಿಗೆ ನೀಡಿದ್ದೇವೆ ಎಂದರು.
ಸಾರ್ವಜನಿಕರು ಸಮಸ್ಯೆ ತಗೆದುಕೊಂಡು ನಮ್ಮ ಬಳಿ ಬರೋದಕ್ಕಿಂತ ನಾವೇ ಅವರ ಬಳಿ ಹೊಗೋದು ಒಳ್ಳೆಯದು. ಹೀಗಾಗಿ ಇಂದು ನಗರದ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಬೆಳೆಸಿ ಅರಿವು ಮೂಡಿಸಿದ್ದೇವೆ ಎಂದು ತಿಳಿಸಿದರು.
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…