ಬಿಎಂಟಿಸಿ ಬಸ್ ನಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸಿಟಿ ರೌಂಡ್ಸ್ ಮಾಡಿದರು.
ಬೆಂಗಳೂರಿನ ಶಿವಾಜಿನಗರದಿಂದ- ದೇವನಹಳ್ಳಿ,ಕಾಕ್ಸ್ ಟೌನ್, ಇಂಡಿಯನ್ ಎಕ್ಸ್ ಪ್ರೆಸ್ ವರೆಗೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿ ಪ್ರಯಾಣಿಕರ ಕುಂದುಕೊರತೆಗಳನ್ನು ಆಲಿಸಿದರು.
ಈ ವೇಳೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಾರ್ವಜನಿಕ ಬಸ್ ನಲ್ಲಿ ಪ್ರಯಾಣಿಸಿ ಮಹಿಳೆಯರ ಸುರಕ್ಷತೆ ಬಗ್ಗೆ ಗಮನಹರಿಸಿದ್ದೇವೆ. ಮಹಿಳೆಯರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ. ಪ್ರಯಾಣದ ವೇಳೆ ಮಹಿಳೆಯರಿಗೆ ತೊಂದರೆಯಾದಾಗ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂಬ ಅರಿವು ಮೂಡಿಸಲಾಗಿದೆ. ಸೇಫ್ಟಿ ಐ ಲ್ಯಾಂಡ್ ಗಳಲ್ಲಿ ಪ್ಯಾನಿಕ್ ಬಟನ್ ಬಳಸೋದು ಹೇಗೆ.. ತೊಂದರೆಯಾದಾಗ 112 ಕರೆ ಮಾಡೋದು.. ಸುರಕ್ಷಾ ಆಪ್ ಬಳಕೆ ಮಾಡುವ ವಿಧಾನ, ಹೀಗೆ ಹಲವು ಮಾಹಿತಿಯನ್ನ ಮಹಿಳೆಯರಿಗೆ ನೀಡಿದ್ದೇವೆ ಎಂದರು.
ಸಾರ್ವಜನಿಕರು ಸಮಸ್ಯೆ ತಗೆದುಕೊಂಡು ನಮ್ಮ ಬಳಿ ಬರೋದಕ್ಕಿಂತ ನಾವೇ ಅವರ ಬಳಿ ಹೊಗೋದು ಒಳ್ಳೆಯದು. ಹೀಗಾಗಿ ಇಂದು ನಗರದ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಬೆಳೆಸಿ ಅರಿವು ಮೂಡಿಸಿದ್ದೇವೆ ಎಂದು ತಿಳಿಸಿದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…