ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೋರ್ವನ ಹುಚ್ಚಾಟಕ್ಕೆ ಬೆಚ್ಚಿಬಿದ್ದ ಸಹ ಪ್ರಯಾಣಿಕರು: ಕಂಡಕ್ಟರ್ ಗೆ ಚಾಕುವಿನಿಂದ ಇರಿತ: ಸುತ್ತಿಗೆಯಿಂದ ಬಸ್ಸಿನ ಗಾಜು ಪುಡಿಗಟ್ಟಿ‌ ದುಷ್ಕೃತ್ಯ ಮೆರೆದ ಸೈಕೋ

ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೋರ್ವನ ಹುಚ್ಚಾಟಕ್ಕೆ ಸಹ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಕಂಡಕ್ಟರ್ ಗೆ ಚಾಕುವಿನಿಂದ ಇರಿದು, ಸುತ್ತಿಗೆಯಿಂದ ಬಸ್ಸಿನ ಗಾಜು ಪುಡಿಗಟ್ಟಿ‌ ದುಷ್ಕೃತ್ಯ ಮೆರೆದಿದ್ದಾನೆ.

ಈ ಘಟನೆ (ಅಕ್ಟೋಬರ್ 01) ಸಂಜೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ ನಡೆದಿದೆ.

ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ.‌ ಇದನ್ನು ನೋಡಿ ಸಹ ಪ್ರಯಾಣಿಕರು ಭಯದಿಂದ ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು ದೌಡಾಯಿಸಿ, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎನ್ನಲಾಗಿದೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಜಾಬ್ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಇದು ಖಂಡಿತವಾಗಿಯೂ ಭಯಾನಕ ಕೃತ್ಯ.  ಸಾರ್ವಜನಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಭವಿಷ್ಯದಲ್ಲಿ ಇಂತಹ ದುಷ್ಕೃತ್ಯ ಚಟುವಟಿಕೆಗಳನ್ನು ತಪ್ಪಿಸಲು ಅವರ ವಿರುದ್ಧ ಕಠಿಣ ಮತ್ತು ಮಾದರಿ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

37 minutes ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

8 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

8 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

11 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

22 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

1 day ago