ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೋರ್ವನ ಹುಚ್ಚಾಟಕ್ಕೆ ಸಹ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಕಂಡಕ್ಟರ್ ಗೆ ಚಾಕುವಿನಿಂದ ಇರಿದು, ಸುತ್ತಿಗೆಯಿಂದ ಬಸ್ಸಿನ ಗಾಜು ಪುಡಿಗಟ್ಟಿ ದುಷ್ಕೃತ್ಯ ಮೆರೆದಿದ್ದಾನೆ.
ಈ ಘಟನೆ (ಅಕ್ಟೋಬರ್ 01) ಸಂಜೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ ನಡೆದಿದೆ.
ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ನಲ್ಲಿ ಈ ದುಷ್ಕೃತ್ಯ ನಡೆದಿದೆ.
ಕಂಡಕ್ಟರ್ ಯೋಗೇಶ್ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ. ಇದನ್ನು ನೋಡಿ ಸಹ ಪ್ರಯಾಣಿಕರು ಭಯದಿಂದ ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್ಫೀಲ್ಡ್ ಠಾಣೆ ಪೊಲೀಸರು ದೌಡಾಯಿಸಿ, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.
ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್ ಯೋಗೇಶ್ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎನ್ನಲಾಗಿದೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಜಾಬ್ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಇದು ಖಂಡಿತವಾಗಿಯೂ ಭಯಾನಕ ಕೃತ್ಯ. ಸಾರ್ವಜನಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಭವಿಷ್ಯದಲ್ಲಿ ಇಂತಹ ದುಷ್ಕೃತ್ಯ ಚಟುವಟಿಕೆಗಳನ್ನು ತಪ್ಪಿಸಲು ಅವರ ವಿರುದ್ಧ ಕಠಿಣ ಮತ್ತು ಮಾದರಿ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…