ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೋರ್ವನ ಹುಚ್ಚಾಟಕ್ಕೆ ಬೆಚ್ಚಿಬಿದ್ದ ಸಹ ಪ್ರಯಾಣಿಕರು: ಕಂಡಕ್ಟರ್ ಗೆ ಚಾಕುವಿನಿಂದ ಇರಿತ: ಸುತ್ತಿಗೆಯಿಂದ ಬಸ್ಸಿನ ಗಾಜು ಪುಡಿಗಟ್ಟಿ‌ ದುಷ್ಕೃತ್ಯ ಮೆರೆದ ಸೈಕೋ

ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೋರ್ವನ ಹುಚ್ಚಾಟಕ್ಕೆ ಸಹ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಕಂಡಕ್ಟರ್ ಗೆ ಚಾಕುವಿನಿಂದ ಇರಿದು, ಸುತ್ತಿಗೆಯಿಂದ ಬಸ್ಸಿನ ಗಾಜು ಪುಡಿಗಟ್ಟಿ‌ ದುಷ್ಕೃತ್ಯ ಮೆರೆದಿದ್ದಾನೆ.

ಈ ಘಟನೆ (ಅಕ್ಟೋಬರ್ 01) ಸಂಜೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ ನಡೆದಿದೆ.

ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ.‌ ಇದನ್ನು ನೋಡಿ ಸಹ ಪ್ರಯಾಣಿಕರು ಭಯದಿಂದ ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು ದೌಡಾಯಿಸಿ, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎನ್ನಲಾಗಿದೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಜಾಬ್ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಇದು ಖಂಡಿತವಾಗಿಯೂ ಭಯಾನಕ ಕೃತ್ಯ.  ಸಾರ್ವಜನಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಭವಿಷ್ಯದಲ್ಲಿ ಇಂತಹ ದುಷ್ಕೃತ್ಯ ಚಟುವಟಿಕೆಗಳನ್ನು ತಪ್ಪಿಸಲು ಅವರ ವಿರುದ್ಧ ಕಠಿಣ ಮತ್ತು ಮಾದರಿ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

7 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

8 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

9 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

10 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

17 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago