ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೋರ್ವನ ಹುಚ್ಚಾಟಕ್ಕೆ ಸಹ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಕಂಡಕ್ಟರ್ ಗೆ ಚಾಕುವಿನಿಂದ ಇರಿದು, ಸುತ್ತಿಗೆಯಿಂದ ಬಸ್ಸಿನ ಗಾಜು ಪುಡಿಗಟ್ಟಿ ದುಷ್ಕೃತ್ಯ ಮೆರೆದಿದ್ದಾನೆ.
ಈ ಘಟನೆ (ಅಕ್ಟೋಬರ್ 01) ಸಂಜೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ ನಡೆದಿದೆ.
ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ನಲ್ಲಿ ಈ ದುಷ್ಕೃತ್ಯ ನಡೆದಿದೆ.
ಕಂಡಕ್ಟರ್ ಯೋಗೇಶ್ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ. ಇದನ್ನು ನೋಡಿ ಸಹ ಪ್ರಯಾಣಿಕರು ಭಯದಿಂದ ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್ಫೀಲ್ಡ್ ಠಾಣೆ ಪೊಲೀಸರು ದೌಡಾಯಿಸಿ, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.
ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್ ಯೋಗೇಶ್ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎನ್ನಲಾಗಿದೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಜಾಬ್ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಇದು ಖಂಡಿತವಾಗಿಯೂ ಭಯಾನಕ ಕೃತ್ಯ. ಸಾರ್ವಜನಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಭವಿಷ್ಯದಲ್ಲಿ ಇಂತಹ ದುಷ್ಕೃತ್ಯ ಚಟುವಟಿಕೆಗಳನ್ನು ತಪ್ಪಿಸಲು ಅವರ ವಿರುದ್ಧ ಕಠಿಣ ಮತ್ತು ಮಾದರಿ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…