ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೋರ್ವನ ಹುಚ್ಚಾಟಕ್ಕೆ ಬೆಚ್ಚಿಬಿದ್ದ ಸಹ ಪ್ರಯಾಣಿಕರು: ಕಂಡಕ್ಟರ್ ಗೆ ಚಾಕುವಿನಿಂದ ಇರಿತ: ಸುತ್ತಿಗೆಯಿಂದ ಬಸ್ಸಿನ ಗಾಜು ಪುಡಿಗಟ್ಟಿ‌ ದುಷ್ಕೃತ್ಯ ಮೆರೆದ ಸೈಕೋ

ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೋರ್ವನ ಹುಚ್ಚಾಟಕ್ಕೆ ಸಹ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಕಂಡಕ್ಟರ್ ಗೆ ಚಾಕುವಿನಿಂದ ಇರಿದು, ಸುತ್ತಿಗೆಯಿಂದ ಬಸ್ಸಿನ ಗಾಜು ಪುಡಿಗಟ್ಟಿ‌ ದುಷ್ಕೃತ್ಯ ಮೆರೆದಿದ್ದಾನೆ.

ಈ ಘಟನೆ (ಅಕ್ಟೋಬರ್ 01) ಸಂಜೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ ನಡೆದಿದೆ.

ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ.‌ ಇದನ್ನು ನೋಡಿ ಸಹ ಪ್ರಯಾಣಿಕರು ಭಯದಿಂದ ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು ದೌಡಾಯಿಸಿ, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎನ್ನಲಾಗಿದೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಜಾಬ್ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಇದು ಖಂಡಿತವಾಗಿಯೂ ಭಯಾನಕ ಕೃತ್ಯ.  ಸಾರ್ವಜನಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಭವಿಷ್ಯದಲ್ಲಿ ಇಂತಹ ದುಷ್ಕೃತ್ಯ ಚಟುವಟಿಕೆಗಳನ್ನು ತಪ್ಪಿಸಲು ಅವರ ವಿರುದ್ಧ ಕಠಿಣ ಮತ್ತು ಮಾದರಿ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

10 hours ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

12 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

24 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

1 day ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

1 day ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago