ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘ ಒತ್ತಾಯಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸ್ಕೀಮ್ ನೌಕರರ ಕರಾಳ ದಿನಾಚರಣೆ ಅಂಗವಾಗಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ನಳಿನಾಕ್ಷಿ, ಜಿಲ್ಲೆಯ 600ಕ್ಕೂ ಹೆಚ್ಚು ಅಂಗನವಾಡಿ ನೌಕರರನ್ನು ಬಿಎಲ್ಒ ಕೆಲಸಕ್ಕೆ ನಿಯೋಜಿಸಿರುವುದರಿಂದ ಅಂಗನವಾಡಿ ಸೇವೆಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.
ಅಂಗನವಾಡಿ ನೌಕರರಲ್ಲಿ ಹಲವರಿಗೆ ಆರೋಗ್ಯ ಸಮಸ್ಯೆಗಳಿದ್ದು, ಕೆಲವರಿಗೆ ಗರ್ಭಕೋಶ ಶಸ್ತ್ರಚಿಕಿತ್ಸೆ ನಡೆದಿದ್ದು, ಕೆಲವರು ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಇನ್ನೂ ಕೆಲವರಿಗೆ ಕಾಲು ನೋವು ಹಾಗೂ ಮೊಬೈಲ್ನಲ್ಲಿ ಕೆಲಸ ಮಾಡಲು ಕಣ್ಣಿನ ಸಮಸ್ಯೆಗಳಿವೆ. ಇಂತಹ ಪರಿಸ್ಥಿತಿಯಲ್ಲಿ ಬಿಎಲ್ಒ ಜವಾಬ್ದಾರಿ ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಹೇಳಿದರು.
ಅಂಗನವಾಡಿಗಳು ಈಗಾಗಲೇ ಆರಂಭವಾಗಿದ್ದು, ಮಕ್ಕಳು ಕೇಂದ್ರಗಳಿಗೆ ಬರುತ್ತಿದ್ದಾರೆ. ಈ ವೇಳೆ ನೌಕರರನ್ನು ಬಿಎಲ್ಒ ಕೆಲಸಕ್ಕೆ ನಿಯೋಜಿಸಿದರೆ ಮಕ್ಕಳ ಆರೈಕೆ ಮತ್ತು ಶಿಕ್ಷಣದ ಮೇಲೆ ಪರಿಣಾಮ ಬೀಳಲಿದೆ. ಮಕ್ಕಳಿಗೆ ಯಾವುದೇ ಸಮಸ್ಯೆಯಾದರೆ ಅದರ ಹೊಣೆ ಯಾರು ಎಂಬ ಪ್ರಶ್ನೆಯನ್ನು ಅವರು ಎತ್ತಿದರು.
ಅಂಗನವಾಡಿಗಳಲ್ಲೇ ಎಲ್ಕೆಜಿ–ಯುಕೆಜಿ ಆರಂಭಕ್ಕೆ ಒತ್ತಾಯ
ರಾಷ್ಟ್ರೀಯ ಶಿಕ್ಷಣ ನೀತಿ–2020 ಜಾರಿಯಿಂದ 3 ರಿಂದ 6 ವರ್ಷದ ಮಕ್ಕಳನ್ನು ಅಂಗನವಾಡಿಗಳಿಂದ ದೂರವಿಟ್ಟು ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ–ಯುಕೆಜಿ ಆರಂಭಿಸಲಾಗುತ್ತಿದೆ. ಇದರಿಂದ ಅಂಗನವಾಡಿಗಳ ಫಲಾನುಭವಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ನಳಿನಾಕ್ಷಿ ತಿಳಿಸಿದರು.
ರಾಜ್ಯದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ–ಯುಕೆಜಿ ಆರಂಭಿಸುವುದಾಗಿ ಸರ್ಕಾರ ಘೋಷಿಸಿದ್ದರೂ, ಅದಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿಲ್ಲ ಎಂದು ದೂರಿದರು. ಜೊತೆಗೆ, ಫಲಾನುಭವಿಗಳಿಗೆ ಸ್ಥಳೀಯ ತಾಜಾ ಆಹಾರದ ಬದಲಿಗೆ ಸಂಸ್ಕರಿಸಿದ ಪ್ಯಾಕೆಟ್ ಆಹಾರ, ನಗದು ವರ್ಗಾವಣೆ ಹಾಗೂ ಕೇಂದ್ರಿಕೃತ ಅಡಿಗೆ ವ್ಯವಸ್ಥೆಗಳ ಮೂಲಕ ಐಸಿಡಿಎಸ್ ಯೋಜನೆಯನ್ನು ಖಾಸಗೀಕರಣ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಕನಿಷ್ಠ ವೇತನ ಮತ್ತು ಮೂಲ ಸೌಲಭ್ಯಗಳ ಬೇಡಿಕೆ
ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ ₹41,000 ಹಾಗೂ ಸಹಾಯಕಿಯರಿಗೆ ₹35,000 ಕನಿಷ್ಠ ವೇತನ ನೀಡಬೇಕು ಎಂದು ಸಂಘ ಒತ್ತಾಯಿಸಿತು. ಜೊತೆಗೆ, ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿಯುವ ನೀರು, ಗ್ಯಾಸ್ ಸಂಪರ್ಕ, ಅಡುಗೆ ಸಲಕರಣೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳಿಗೆ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಬಾಡಿಗೆ ನೀಡಬೇಕೆಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎ. ವೆಂಕಟೇಶ್, ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಖಜಾಂಜಿ ಪುಷ್ಪಾವತ್ತಮ್ಮ, ಪ್ರಧಾನ ಕಾರ್ಯದರ್ಶಿ ಕಲಾವತಿ ಹಾಗೂ ಜಿಲ್ಲೆಯ ವಿವಿಧ ತಾಲೂಕಿನ ಸಿಐಟಿಯು ಮುಖಂಡರು ಮತ್ತು ಅಂಗನವಾಡಿ ನೌಕರರು ಭಾಗವಹಿಸಿದ್ದರು.
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…