ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘ ಒತ್ತಾಯಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸ್ಕೀಮ್ ನೌಕರರ ಕರಾಳ ದಿನಾಚರಣೆ ಅಂಗವಾಗಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ನಳಿನಾಕ್ಷಿ, ಜಿಲ್ಲೆಯ 600ಕ್ಕೂ ಹೆಚ್ಚು ಅಂಗನವಾಡಿ ನೌಕರರನ್ನು ಬಿಎಲ್‌ಒ ಕೆಲಸಕ್ಕೆ ನಿಯೋಜಿಸಿರುವುದರಿಂದ ಅಂಗನವಾಡಿ ಸೇವೆಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.

ಅಂಗನವಾಡಿ ನೌಕರರಲ್ಲಿ ಹಲವರಿಗೆ ಆರೋಗ್ಯ ಸಮಸ್ಯೆಗಳಿದ್ದು, ಕೆಲವರಿಗೆ ಗರ್ಭಕೋಶ ಶಸ್ತ್ರಚಿಕಿತ್ಸೆ ನಡೆದಿದ್ದು, ಕೆಲವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಇನ್ನೂ ಕೆಲವರಿಗೆ ಕಾಲು ನೋವು ಹಾಗೂ ಮೊಬೈಲ್‌ನಲ್ಲಿ ಕೆಲಸ ಮಾಡಲು ಕಣ್ಣಿನ ಸಮಸ್ಯೆಗಳಿವೆ. ಇಂತಹ ಪರಿಸ್ಥಿತಿಯಲ್ಲಿ ಬಿಎಲ್‌ಒ ಜವಾಬ್ದಾರಿ ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಹೇಳಿದರು.

ಅಂಗನವಾಡಿಗಳು ಈಗಾಗಲೇ ಆರಂಭವಾಗಿದ್ದು, ಮಕ್ಕಳು ಕೇಂದ್ರಗಳಿಗೆ ಬರುತ್ತಿದ್ದಾರೆ. ಈ ವೇಳೆ ನೌಕರರನ್ನು ಬಿಎಲ್‌ಒ ಕೆಲಸಕ್ಕೆ ನಿಯೋಜಿಸಿದರೆ ಮಕ್ಕಳ ಆರೈಕೆ ಮತ್ತು ಶಿಕ್ಷಣದ ಮೇಲೆ ಪರಿಣಾಮ ಬೀಳಲಿದೆ. ಮಕ್ಕಳಿಗೆ ಯಾವುದೇ ಸಮಸ್ಯೆಯಾದರೆ ಅದರ ಹೊಣೆ ಯಾರು ಎಂಬ ಪ್ರಶ್ನೆಯನ್ನು ಅವರು ಎತ್ತಿದರು.

ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಒತ್ತಾಯ

ರಾಷ್ಟ್ರೀಯ ಶಿಕ್ಷಣ ನೀತಿ–2020 ಜಾರಿಯಿಂದ 3 ರಿಂದ 6 ವರ್ಷದ ಮಕ್ಕಳನ್ನು ಅಂಗನವಾಡಿಗಳಿಂದ ದೂರವಿಟ್ಟು ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ–ಯುಕೆಜಿ ಆರಂಭಿಸಲಾಗುತ್ತಿದೆ. ಇದರಿಂದ ಅಂಗನವಾಡಿಗಳ ಫಲಾನುಭವಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ನಳಿನಾಕ್ಷಿ ತಿಳಿಸಿದರು.

ರಾಜ್ಯದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ–ಯುಕೆಜಿ ಆರಂಭಿಸುವುದಾಗಿ ಸರ್ಕಾರ ಘೋಷಿಸಿದ್ದರೂ, ಅದಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿಲ್ಲ ಎಂದು ದೂರಿದರು. ಜೊತೆಗೆ, ಫಲಾನುಭವಿಗಳಿಗೆ ಸ್ಥಳೀಯ ತಾಜಾ ಆಹಾರದ ಬದಲಿಗೆ ಸಂಸ್ಕರಿಸಿದ ಪ್ಯಾಕೆಟ್ ಆಹಾರ, ನಗದು ವರ್ಗಾವಣೆ ಹಾಗೂ ಕೇಂದ್ರಿಕೃತ ಅಡಿಗೆ ವ್ಯವಸ್ಥೆಗಳ ಮೂಲಕ ಐಸಿಡಿಎಸ್ ಯೋಜನೆಯನ್ನು ಖಾಸಗೀಕರಣ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಕನಿಷ್ಠ ವೇತನ ಮತ್ತು ಮೂಲ ಸೌಲಭ್ಯಗಳ ಬೇಡಿಕೆ

ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ ₹41,000 ಹಾಗೂ ಸಹಾಯಕಿಯರಿಗೆ ₹35,000 ಕನಿಷ್ಠ ವೇತನ ನೀಡಬೇಕು ಎಂದು ಸಂಘ ಒತ್ತಾಯಿಸಿತು. ಜೊತೆಗೆ, ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿಯುವ ನೀರು, ಗ್ಯಾಸ್ ಸಂಪರ್ಕ, ಅಡುಗೆ ಸಲಕರಣೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳಿಗೆ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಬಾಡಿಗೆ ನೀಡಬೇಕೆಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎ. ವೆಂಕಟೇಶ್, ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಖಜಾಂಜಿ ಪುಷ್ಪಾವತ್ತಮ್ಮ, ಪ್ರಧಾನ ಕಾರ್ಯದರ್ಶಿ ಕಲಾವತಿ ಹಾಗೂ ಜಿಲ್ಲೆಯ ವಿವಿಧ ತಾಲೂಕಿನ ಸಿಐಟಿಯು ಮುಖಂಡರು ಮತ್ತು ಅಂಗನವಾಡಿ ನೌಕರರು ಭಾಗವಹಿಸಿದ್ದರು.

Ramesh Babu

Journalist

Recent Posts

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

16 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

3 days ago