ಬಿಎಸ್‌ಎನ್‌ಎಲ್ ಸಂಸ್ಥೆಯಂತೆ ಬಮೂಲ್ ನಷ್ಟಕ್ಕೆ ಒಳಗಾಗುವ ಆತಂಕ: ಅಧಿಕಾರಿಗಳ ವಿರುದ್ಧ ರೈತರು ಗರಂ

ನಾಡಿನ ರೈತರು ಕಟ್ಟಿ ಬೆಳೆಸಿದ ‘ಬಮೂಲ್’ ಅಧಿಕಾರಿಗಳ ಸ್ವಾರ್ಥದಿಂದ ಮತ್ತೊಂದು ಬಿಎಸ್‌ಎನ್‌ಎಲ್ ಸಂಸ್ಥೆಯಂತೆ ನಷ್ಟಕ್ಕೆ ಒಳಗಾಗುವ ಆತಂಕವನ್ನು ರೈತರು ವ್ಯಕ್ತಪಡಿಸಿ, ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ, ಡೈರಿ ಕಾರ್ಯದರ್ಶಿಗಳ ಸಂಘದ ಪದಾಧಿಕಾರಿಳು ನಗರದ ಬಮೂಲ್ ಶೀತಲೀಕರಣ ಘಟಕಕ್ಕೆ ತೆರಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ರೈತ ಮುಖಂಡರು, ಭೀಕರ ಬರಗಾಲ, ತೀವ್ರವಾದ ಬೇಸಿಗೆ, ಹಸಿ ಮೇವಿನ ಕೊರತೆಯಿಂದಾಗಿ ಹಾಲಿನ ಗುಣಮಟ್ಟ ಸ್ವಾಭಾವಿಕವಾಗಿ ಕಡಿಮೆಯಾಗುತ್ತಿದೆ. ಅಲ್ಲದೆ ಇತ್ತೀಚೆಗೆ ಕಾಲು ಬಾಯಿ ರೋಗಕ್ಕೆ ನಿರೋಧಕವಾಗಿ ಇಂಜೆಕ್ಷನ್ ಮಾಡಿಸಲಾಗಿರುವುದು ಕೂಡ ಹಾಲಿನ ಗುಣಮಟ್ಟ ಕಡಿಮೆಯಾಗಲು ಕಾರಣವಾಗಿದೆ.

ರೈತರು ಎದುರಿಸುತ್ತಿರುವ ಈ ಸಮಸ್ಯೆಯನ್ನು ಅರಿಯದ ಅಧಿಕಾರಿಗಳು 8.4 ಎಸ್‌ಎನ್‌ಎಫ್ ಬಂದರೆ ಹಾಲುನ್ನು ತಿರಸ್ಕರಿಸುತ್ತಿದ್ದಾರೆ. ಇದರಿಂದ ರೈತರಿಗೆ ಸರ್ಕಾರದಿಂದ ದೊರೆಯುವ ರೂ.5 ಸಹಾಯ ಧನ ದೊರೆಯುತ್ತಿಲ್ಲ‌.

ಅಲ್ಲದೆ, ಗುಣಮಟ್ಟದ ನೆಪವೊಡ್ಡಿ ಪ್ರತಿ ದಿನ ತಾಲೂಕಿನ ಮೂರ್ ನಾಲ್ಕು ಡೈರಿಗಳಿಗೆ ನೋ ಪೇಮೆಂಟ್ ಮಾಡುತ್ತಿದ್ದು, ಹಾಲು ಉತ್ಪಾದಕ ಸಹಕಾರ ಸಂಘಗಳು, ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ.

ಈ ಕುರಿತು ಪ್ರಶ್ನಿಸಿದರೆ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಿದ್ದು, ಇಂತಹ ಬೇಜವಾಬ್ದಾರಿಯುತ ಅಧಿಕಾರಿಗಳಿಂದಾಗಿ ಸರ್ಕಾರಿ ಸಂಸ್ಥೆಗಳು ನಷ್ಟಕ್ಕೆ ಒಳಗಾಗಿ, ಖಾಸಗಿ ಸಂಸ್ಥೆಗಳು ಲಾಭ ಪಡೆಯಲು ಪರೋಕ್ಷವಾಗಿ ಕಾರಣವಾಗುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಸತೀಶ್, ಮುತ್ತೇಗೌಡ, ಶಿರವಾರ ರವಿ, ಮುನಿ ನಾರಾಯಣಪ್ಪ, ವಾಸು, ಕಾರ್ಯದರ್ಶಿ ಸಂಘದ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಮಂಜುನಾಥ್, ದೇವರಾಜ್, ವೀರಣ್ಣ, ಚನ್ನೇಗೌಡ ಮತ್ತಿತರರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

5 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

13 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

15 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

16 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago