ಬಿಎಸ್‌ಎನ್‌ಎಲ್ ಸಂಸ್ಥೆಯಂತೆ ಬಮೂಲ್ ನಷ್ಟಕ್ಕೆ ಒಳಗಾಗುವ ಆತಂಕ: ಅಧಿಕಾರಿಗಳ ವಿರುದ್ಧ ರೈತರು ಗರಂ

ನಾಡಿನ ರೈತರು ಕಟ್ಟಿ ಬೆಳೆಸಿದ ‘ಬಮೂಲ್’ ಅಧಿಕಾರಿಗಳ ಸ್ವಾರ್ಥದಿಂದ ಮತ್ತೊಂದು ಬಿಎಸ್‌ಎನ್‌ಎಲ್ ಸಂಸ್ಥೆಯಂತೆ ನಷ್ಟಕ್ಕೆ ಒಳಗಾಗುವ ಆತಂಕವನ್ನು ರೈತರು ವ್ಯಕ್ತಪಡಿಸಿ, ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ, ಡೈರಿ ಕಾರ್ಯದರ್ಶಿಗಳ ಸಂಘದ ಪದಾಧಿಕಾರಿಳು ನಗರದ ಬಮೂಲ್ ಶೀತಲೀಕರಣ ಘಟಕಕ್ಕೆ ತೆರಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ರೈತ ಮುಖಂಡರು, ಭೀಕರ ಬರಗಾಲ, ತೀವ್ರವಾದ ಬೇಸಿಗೆ, ಹಸಿ ಮೇವಿನ ಕೊರತೆಯಿಂದಾಗಿ ಹಾಲಿನ ಗುಣಮಟ್ಟ ಸ್ವಾಭಾವಿಕವಾಗಿ ಕಡಿಮೆಯಾಗುತ್ತಿದೆ. ಅಲ್ಲದೆ ಇತ್ತೀಚೆಗೆ ಕಾಲು ಬಾಯಿ ರೋಗಕ್ಕೆ ನಿರೋಧಕವಾಗಿ ಇಂಜೆಕ್ಷನ್ ಮಾಡಿಸಲಾಗಿರುವುದು ಕೂಡ ಹಾಲಿನ ಗುಣಮಟ್ಟ ಕಡಿಮೆಯಾಗಲು ಕಾರಣವಾಗಿದೆ.

ರೈತರು ಎದುರಿಸುತ್ತಿರುವ ಈ ಸಮಸ್ಯೆಯನ್ನು ಅರಿಯದ ಅಧಿಕಾರಿಗಳು 8.4 ಎಸ್‌ಎನ್‌ಎಫ್ ಬಂದರೆ ಹಾಲುನ್ನು ತಿರಸ್ಕರಿಸುತ್ತಿದ್ದಾರೆ. ಇದರಿಂದ ರೈತರಿಗೆ ಸರ್ಕಾರದಿಂದ ದೊರೆಯುವ ರೂ.5 ಸಹಾಯ ಧನ ದೊರೆಯುತ್ತಿಲ್ಲ‌.

ಅಲ್ಲದೆ, ಗುಣಮಟ್ಟದ ನೆಪವೊಡ್ಡಿ ಪ್ರತಿ ದಿನ ತಾಲೂಕಿನ ಮೂರ್ ನಾಲ್ಕು ಡೈರಿಗಳಿಗೆ ನೋ ಪೇಮೆಂಟ್ ಮಾಡುತ್ತಿದ್ದು, ಹಾಲು ಉತ್ಪಾದಕ ಸಹಕಾರ ಸಂಘಗಳು, ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ.

ಈ ಕುರಿತು ಪ್ರಶ್ನಿಸಿದರೆ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಿದ್ದು, ಇಂತಹ ಬೇಜವಾಬ್ದಾರಿಯುತ ಅಧಿಕಾರಿಗಳಿಂದಾಗಿ ಸರ್ಕಾರಿ ಸಂಸ್ಥೆಗಳು ನಷ್ಟಕ್ಕೆ ಒಳಗಾಗಿ, ಖಾಸಗಿ ಸಂಸ್ಥೆಗಳು ಲಾಭ ಪಡೆಯಲು ಪರೋಕ್ಷವಾಗಿ ಕಾರಣವಾಗುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಸತೀಶ್, ಮುತ್ತೇಗೌಡ, ಶಿರವಾರ ರವಿ, ಮುನಿ ನಾರಾಯಣಪ್ಪ, ವಾಸು, ಕಾರ್ಯದರ್ಶಿ ಸಂಘದ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಮಂಜುನಾಥ್, ದೇವರಾಜ್, ವೀರಣ್ಣ, ಚನ್ನೇಗೌಡ ಮತ್ತಿತರರಿದ್ದರು.

Ramesh Babu

Journalist

Recent Posts

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

28 minutes ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

2 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

10 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

19 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

20 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

22 hours ago