ಬಿಎಸ್‌ಎನ್‌ಎಲ್ ಸಂಸ್ಥೆಯಂತೆ ಬಮೂಲ್ ನಷ್ಟಕ್ಕೆ ಒಳಗಾಗುವ ಆತಂಕ: ಅಧಿಕಾರಿಗಳ ವಿರುದ್ಧ ರೈತರು ಗರಂ

ನಾಡಿನ ರೈತರು ಕಟ್ಟಿ ಬೆಳೆಸಿದ ‘ಬಮೂಲ್’ ಅಧಿಕಾರಿಗಳ ಸ್ವಾರ್ಥದಿಂದ ಮತ್ತೊಂದು ಬಿಎಸ್‌ಎನ್‌ಎಲ್ ಸಂಸ್ಥೆಯಂತೆ ನಷ್ಟಕ್ಕೆ ಒಳಗಾಗುವ ಆತಂಕವನ್ನು ರೈತರು ವ್ಯಕ್ತಪಡಿಸಿ, ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ, ಡೈರಿ ಕಾರ್ಯದರ್ಶಿಗಳ ಸಂಘದ ಪದಾಧಿಕಾರಿಳು ನಗರದ ಬಮೂಲ್ ಶೀತಲೀಕರಣ ಘಟಕಕ್ಕೆ ತೆರಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ರೈತ ಮುಖಂಡರು, ಭೀಕರ ಬರಗಾಲ, ತೀವ್ರವಾದ ಬೇಸಿಗೆ, ಹಸಿ ಮೇವಿನ ಕೊರತೆಯಿಂದಾಗಿ ಹಾಲಿನ ಗುಣಮಟ್ಟ ಸ್ವಾಭಾವಿಕವಾಗಿ ಕಡಿಮೆಯಾಗುತ್ತಿದೆ. ಅಲ್ಲದೆ ಇತ್ತೀಚೆಗೆ ಕಾಲು ಬಾಯಿ ರೋಗಕ್ಕೆ ನಿರೋಧಕವಾಗಿ ಇಂಜೆಕ್ಷನ್ ಮಾಡಿಸಲಾಗಿರುವುದು ಕೂಡ ಹಾಲಿನ ಗುಣಮಟ್ಟ ಕಡಿಮೆಯಾಗಲು ಕಾರಣವಾಗಿದೆ.

ರೈತರು ಎದುರಿಸುತ್ತಿರುವ ಈ ಸಮಸ್ಯೆಯನ್ನು ಅರಿಯದ ಅಧಿಕಾರಿಗಳು 8.4 ಎಸ್‌ಎನ್‌ಎಫ್ ಬಂದರೆ ಹಾಲುನ್ನು ತಿರಸ್ಕರಿಸುತ್ತಿದ್ದಾರೆ. ಇದರಿಂದ ರೈತರಿಗೆ ಸರ್ಕಾರದಿಂದ ದೊರೆಯುವ ರೂ.5 ಸಹಾಯ ಧನ ದೊರೆಯುತ್ತಿಲ್ಲ‌.

ಅಲ್ಲದೆ, ಗುಣಮಟ್ಟದ ನೆಪವೊಡ್ಡಿ ಪ್ರತಿ ದಿನ ತಾಲೂಕಿನ ಮೂರ್ ನಾಲ್ಕು ಡೈರಿಗಳಿಗೆ ನೋ ಪೇಮೆಂಟ್ ಮಾಡುತ್ತಿದ್ದು, ಹಾಲು ಉತ್ಪಾದಕ ಸಹಕಾರ ಸಂಘಗಳು, ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ.

ಈ ಕುರಿತು ಪ್ರಶ್ನಿಸಿದರೆ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಿದ್ದು, ಇಂತಹ ಬೇಜವಾಬ್ದಾರಿಯುತ ಅಧಿಕಾರಿಗಳಿಂದಾಗಿ ಸರ್ಕಾರಿ ಸಂಸ್ಥೆಗಳು ನಷ್ಟಕ್ಕೆ ಒಳಗಾಗಿ, ಖಾಸಗಿ ಸಂಸ್ಥೆಗಳು ಲಾಭ ಪಡೆಯಲು ಪರೋಕ್ಷವಾಗಿ ಕಾರಣವಾಗುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಸತೀಶ್, ಮುತ್ತೇಗೌಡ, ಶಿರವಾರ ರವಿ, ಮುನಿ ನಾರಾಯಣಪ್ಪ, ವಾಸು, ಕಾರ್ಯದರ್ಶಿ ಸಂಘದ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಮಂಜುನಾಥ್, ದೇವರಾಜ್, ವೀರಣ್ಣ, ಚನ್ನೇಗೌಡ ಮತ್ತಿತರರಿದ್ದರು.

Ramesh Babu

Journalist

Recent Posts

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

40 minutes ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

4 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

15 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

15 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

19 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

20 hours ago