ಬಿಎಸ್‌ಎನ್‌ಎಲ್ ಸಂಸ್ಥೆಯಂತೆ ಬಮೂಲ್ ನಷ್ಟಕ್ಕೆ ಒಳಗಾಗುವ ಆತಂಕ: ಅಧಿಕಾರಿಗಳ ವಿರುದ್ಧ ರೈತರು ಗರಂ

ನಾಡಿನ ರೈತರು ಕಟ್ಟಿ ಬೆಳೆಸಿದ ‘ಬಮೂಲ್’ ಅಧಿಕಾರಿಗಳ ಸ್ವಾರ್ಥದಿಂದ ಮತ್ತೊಂದು ಬಿಎಸ್‌ಎನ್‌ಎಲ್ ಸಂಸ್ಥೆಯಂತೆ ನಷ್ಟಕ್ಕೆ ಒಳಗಾಗುವ ಆತಂಕವನ್ನು ರೈತರು ವ್ಯಕ್ತಪಡಿಸಿ, ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ, ಡೈರಿ ಕಾರ್ಯದರ್ಶಿಗಳ ಸಂಘದ ಪದಾಧಿಕಾರಿಳು ನಗರದ ಬಮೂಲ್ ಶೀತಲೀಕರಣ ಘಟಕಕ್ಕೆ ತೆರಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ರೈತ ಮುಖಂಡರು, ಭೀಕರ ಬರಗಾಲ, ತೀವ್ರವಾದ ಬೇಸಿಗೆ, ಹಸಿ ಮೇವಿನ ಕೊರತೆಯಿಂದಾಗಿ ಹಾಲಿನ ಗುಣಮಟ್ಟ ಸ್ವಾಭಾವಿಕವಾಗಿ ಕಡಿಮೆಯಾಗುತ್ತಿದೆ. ಅಲ್ಲದೆ ಇತ್ತೀಚೆಗೆ ಕಾಲು ಬಾಯಿ ರೋಗಕ್ಕೆ ನಿರೋಧಕವಾಗಿ ಇಂಜೆಕ್ಷನ್ ಮಾಡಿಸಲಾಗಿರುವುದು ಕೂಡ ಹಾಲಿನ ಗುಣಮಟ್ಟ ಕಡಿಮೆಯಾಗಲು ಕಾರಣವಾಗಿದೆ.

ರೈತರು ಎದುರಿಸುತ್ತಿರುವ ಈ ಸಮಸ್ಯೆಯನ್ನು ಅರಿಯದ ಅಧಿಕಾರಿಗಳು 8.4 ಎಸ್‌ಎನ್‌ಎಫ್ ಬಂದರೆ ಹಾಲುನ್ನು ತಿರಸ್ಕರಿಸುತ್ತಿದ್ದಾರೆ. ಇದರಿಂದ ರೈತರಿಗೆ ಸರ್ಕಾರದಿಂದ ದೊರೆಯುವ ರೂ.5 ಸಹಾಯ ಧನ ದೊರೆಯುತ್ತಿಲ್ಲ‌.

ಅಲ್ಲದೆ, ಗುಣಮಟ್ಟದ ನೆಪವೊಡ್ಡಿ ಪ್ರತಿ ದಿನ ತಾಲೂಕಿನ ಮೂರ್ ನಾಲ್ಕು ಡೈರಿಗಳಿಗೆ ನೋ ಪೇಮೆಂಟ್ ಮಾಡುತ್ತಿದ್ದು, ಹಾಲು ಉತ್ಪಾದಕ ಸಹಕಾರ ಸಂಘಗಳು, ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ.

ಈ ಕುರಿತು ಪ್ರಶ್ನಿಸಿದರೆ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಿದ್ದು, ಇಂತಹ ಬೇಜವಾಬ್ದಾರಿಯುತ ಅಧಿಕಾರಿಗಳಿಂದಾಗಿ ಸರ್ಕಾರಿ ಸಂಸ್ಥೆಗಳು ನಷ್ಟಕ್ಕೆ ಒಳಗಾಗಿ, ಖಾಸಗಿ ಸಂಸ್ಥೆಗಳು ಲಾಭ ಪಡೆಯಲು ಪರೋಕ್ಷವಾಗಿ ಕಾರಣವಾಗುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಸತೀಶ್, ಮುತ್ತೇಗೌಡ, ಶಿರವಾರ ರವಿ, ಮುನಿ ನಾರಾಯಣಪ್ಪ, ವಾಸು, ಕಾರ್ಯದರ್ಶಿ ಸಂಘದ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಮಂಜುನಾಥ್, ದೇವರಾಜ್, ವೀರಣ್ಣ, ಚನ್ನೇಗೌಡ ಮತ್ತಿತರರಿದ್ದರು.

Ramesh Babu

Journalist

Recent Posts

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 hour ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

6 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

8 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

11 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago