ನಾಡಿನ ರೈತರು ಕಟ್ಟಿ ಬೆಳೆಸಿದ ‘ಬಮೂಲ್’ ಅಧಿಕಾರಿಗಳ ಸ್ವಾರ್ಥದಿಂದ ಮತ್ತೊಂದು ಬಿಎಸ್ಎನ್ಎಲ್ ಸಂಸ್ಥೆಯಂತೆ ನಷ್ಟಕ್ಕೆ ಒಳಗಾಗುವ ಆತಂಕವನ್ನು ರೈತರು ವ್ಯಕ್ತಪಡಿಸಿ, ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ, ಡೈರಿ ಕಾರ್ಯದರ್ಶಿಗಳ ಸಂಘದ ಪದಾಧಿಕಾರಿಳು ನಗರದ ಬಮೂಲ್ ಶೀತಲೀಕರಣ ಘಟಕಕ್ಕೆ ತೆರಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ವೇಳೆ ಮಾತನಾಡಿದ ರೈತ ಮುಖಂಡರು, ಭೀಕರ ಬರಗಾಲ, ತೀವ್ರವಾದ ಬೇಸಿಗೆ, ಹಸಿ ಮೇವಿನ ಕೊರತೆಯಿಂದಾಗಿ ಹಾಲಿನ ಗುಣಮಟ್ಟ ಸ್ವಾಭಾವಿಕವಾಗಿ ಕಡಿಮೆಯಾಗುತ್ತಿದೆ. ಅಲ್ಲದೆ ಇತ್ತೀಚೆಗೆ ಕಾಲು ಬಾಯಿ ರೋಗಕ್ಕೆ ನಿರೋಧಕವಾಗಿ ಇಂಜೆಕ್ಷನ್ ಮಾಡಿಸಲಾಗಿರುವುದು ಕೂಡ ಹಾಲಿನ ಗುಣಮಟ್ಟ ಕಡಿಮೆಯಾಗಲು ಕಾರಣವಾಗಿದೆ.
ರೈತರು ಎದುರಿಸುತ್ತಿರುವ ಈ ಸಮಸ್ಯೆಯನ್ನು ಅರಿಯದ ಅಧಿಕಾರಿಗಳು 8.4 ಎಸ್ಎನ್ಎಫ್ ಬಂದರೆ ಹಾಲುನ್ನು ತಿರಸ್ಕರಿಸುತ್ತಿದ್ದಾರೆ. ಇದರಿಂದ ರೈತರಿಗೆ ಸರ್ಕಾರದಿಂದ ದೊರೆಯುವ ರೂ.5 ಸಹಾಯ ಧನ ದೊರೆಯುತ್ತಿಲ್ಲ.
ಅಲ್ಲದೆ, ಗುಣಮಟ್ಟದ ನೆಪವೊಡ್ಡಿ ಪ್ರತಿ ದಿನ ತಾಲೂಕಿನ ಮೂರ್ ನಾಲ್ಕು ಡೈರಿಗಳಿಗೆ ನೋ ಪೇಮೆಂಟ್ ಮಾಡುತ್ತಿದ್ದು, ಹಾಲು ಉತ್ಪಾದಕ ಸಹಕಾರ ಸಂಘಗಳು, ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ.
ಈ ಕುರಿತು ಪ್ರಶ್ನಿಸಿದರೆ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಿದ್ದು, ಇಂತಹ ಬೇಜವಾಬ್ದಾರಿಯುತ ಅಧಿಕಾರಿಗಳಿಂದಾಗಿ ಸರ್ಕಾರಿ ಸಂಸ್ಥೆಗಳು ನಷ್ಟಕ್ಕೆ ಒಳಗಾಗಿ, ಖಾಸಗಿ ಸಂಸ್ಥೆಗಳು ಲಾಭ ಪಡೆಯಲು ಪರೋಕ್ಷವಾಗಿ ಕಾರಣವಾಗುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಸತೀಶ್, ಮುತ್ತೇಗೌಡ, ಶಿರವಾರ ರವಿ, ಮುನಿ ನಾರಾಯಣಪ್ಪ, ವಾಸು, ಕಾರ್ಯದರ್ಶಿ ಸಂಘದ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಮಂಜುನಾಥ್, ದೇವರಾಜ್, ವೀರಣ್ಣ, ಚನ್ನೇಗೌಡ ಮತ್ತಿತರರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…