ಬಿಎಸ್‌ಎನ್‌ಎಲ್ ಸಂಸ್ಥೆಯಂತೆ ಬಮೂಲ್ ನಷ್ಟಕ್ಕೆ ಒಳಗಾಗುವ ಆತಂಕ: ಅಧಿಕಾರಿಗಳ ವಿರುದ್ಧ ರೈತರು ಗರಂ

ನಾಡಿನ ರೈತರು ಕಟ್ಟಿ ಬೆಳೆಸಿದ ‘ಬಮೂಲ್’ ಅಧಿಕಾರಿಗಳ ಸ್ವಾರ್ಥದಿಂದ ಮತ್ತೊಂದು ಬಿಎಸ್‌ಎನ್‌ಎಲ್ ಸಂಸ್ಥೆಯಂತೆ ನಷ್ಟಕ್ಕೆ ಒಳಗಾಗುವ ಆತಂಕವನ್ನು ರೈತರು ವ್ಯಕ್ತಪಡಿಸಿ, ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ, ಡೈರಿ ಕಾರ್ಯದರ್ಶಿಗಳ ಸಂಘದ ಪದಾಧಿಕಾರಿಳು ನಗರದ ಬಮೂಲ್ ಶೀತಲೀಕರಣ ಘಟಕಕ್ಕೆ ತೆರಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ರೈತ ಮುಖಂಡರು, ಭೀಕರ ಬರಗಾಲ, ತೀವ್ರವಾದ ಬೇಸಿಗೆ, ಹಸಿ ಮೇವಿನ ಕೊರತೆಯಿಂದಾಗಿ ಹಾಲಿನ ಗುಣಮಟ್ಟ ಸ್ವಾಭಾವಿಕವಾಗಿ ಕಡಿಮೆಯಾಗುತ್ತಿದೆ. ಅಲ್ಲದೆ ಇತ್ತೀಚೆಗೆ ಕಾಲು ಬಾಯಿ ರೋಗಕ್ಕೆ ನಿರೋಧಕವಾಗಿ ಇಂಜೆಕ್ಷನ್ ಮಾಡಿಸಲಾಗಿರುವುದು ಕೂಡ ಹಾಲಿನ ಗುಣಮಟ್ಟ ಕಡಿಮೆಯಾಗಲು ಕಾರಣವಾಗಿದೆ.

ರೈತರು ಎದುರಿಸುತ್ತಿರುವ ಈ ಸಮಸ್ಯೆಯನ್ನು ಅರಿಯದ ಅಧಿಕಾರಿಗಳು 8.4 ಎಸ್‌ಎನ್‌ಎಫ್ ಬಂದರೆ ಹಾಲುನ್ನು ತಿರಸ್ಕರಿಸುತ್ತಿದ್ದಾರೆ. ಇದರಿಂದ ರೈತರಿಗೆ ಸರ್ಕಾರದಿಂದ ದೊರೆಯುವ ರೂ.5 ಸಹಾಯ ಧನ ದೊರೆಯುತ್ತಿಲ್ಲ‌.

ಅಲ್ಲದೆ, ಗುಣಮಟ್ಟದ ನೆಪವೊಡ್ಡಿ ಪ್ರತಿ ದಿನ ತಾಲೂಕಿನ ಮೂರ್ ನಾಲ್ಕು ಡೈರಿಗಳಿಗೆ ನೋ ಪೇಮೆಂಟ್ ಮಾಡುತ್ತಿದ್ದು, ಹಾಲು ಉತ್ಪಾದಕ ಸಹಕಾರ ಸಂಘಗಳು, ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ.

ಈ ಕುರಿತು ಪ್ರಶ್ನಿಸಿದರೆ ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಿದ್ದು, ಇಂತಹ ಬೇಜವಾಬ್ದಾರಿಯುತ ಅಧಿಕಾರಿಗಳಿಂದಾಗಿ ಸರ್ಕಾರಿ ಸಂಸ್ಥೆಗಳು ನಷ್ಟಕ್ಕೆ ಒಳಗಾಗಿ, ಖಾಸಗಿ ಸಂಸ್ಥೆಗಳು ಲಾಭ ಪಡೆಯಲು ಪರೋಕ್ಷವಾಗಿ ಕಾರಣವಾಗುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಸತೀಶ್, ಮುತ್ತೇಗೌಡ, ಶಿರವಾರ ರವಿ, ಮುನಿ ನಾರಾಯಣಪ್ಪ, ವಾಸು, ಕಾರ್ಯದರ್ಶಿ ಸಂಘದ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಮಂಜುನಾಥ್, ದೇವರಾಜ್, ವೀರಣ್ಣ, ಚನ್ನೇಗೌಡ ಮತ್ತಿತರರಿದ್ದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

4 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

15 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

24 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago