
ಸೈಟ್ ವಿವಾದಕ್ಕೆ ಸಂಬಂಧಪಟ್ಟಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತನಿಖೆ ವೇಳೆ ಆರೋಪಿ ಜಗ್ಗ ಯಾರೆಂಬುದೇ ಗೊತ್ತಿಲ್ಲವೆಂದು ಭೈರತಿ ಬಸವರಾಜ್ ಹೇಳಿದ ಸುಳ್ಳುಗಳೇ ಅವರಿಗೆ ಇದೀಗ ಮುಳುವಾಗಿವೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಇಂಡಿಗೋ – 6E683 ವಿಮಾನದಲ್ಲಿ ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿಐಡಿ ತಂಡ ಅವರನ್ನು ಬಂಧಿಸಿದೆ ಎಂಬ ಮಾಹಿತಿ ಒದಗಿಬಂದಿದೆ…