ಬಿಗಿ ಬೌಲಿಂಗ್ ದಾಳಿಗೆ ಲಂಕಾ ತತ್ತರ, ಫೈನಲ್ ಗೆ ಲಗ್ಗೆಯಿಟ್ಟ ಭಾರತ !

ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ ಫೋರ್ ನ ಶ್ರೀಲಂಕಾ ಹಾಗೂ ಭಾರತದ ನಡುವಿನ ಪಂದ್ಯದಲ್ಲಿ ಬೌಲರ್ ಗಳು ಪಾರಮ್ಯವನ್ನು ಮೆರೆದರೂ ಸಹ ಕೊನೆಗೆ ವಿಜಯಲಕ್ಷ್ಮಿ ಭಾರತಕ್ಕೆ ಒಲಿಯುವ ಮೂಲಕ ಫೈನಲ್ ಪಂದ್ಯಕ್ಕೆ ಲಗ್ಗೆಯಿಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ ಉತ್ತಮ ಆರಂಭವನ್ನು ಪಡೆಯಿತು, ನಾಯಕ ರೋಹಿತ್ ಶರ್ಮಾ (53) ಹಾಗೂ ಆರಂಭಿಕ ಆಟಗಾರ ಶುಭ್ಮನ್ ಗಿಲ್ (19) ಉತ್ತಮವಾಗಿ ರನ್ ಗಳಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿದರು.

ಉತ್ತಮವಾಗಿ ಆಡುತ್ತಿದ್ದ ಭಾರತದ ಅಗ್ರ ಶ್ರೇಯಾಂಕಿತ ಆಟಗಾರರಾದ ಶುಭ್ಮನ್ ಗಿಲ್, ನಾಯಕ ರೋಹಿತ್ ಶರ್ಮಾ ಹಾಗೂ ಹಿರಿಯ ಆಟಗಾರ ವಿರಾಟ್ ಕೋಹ್ಲಿ ಅವರನ್ನು ಶ್ರೀಲಂಕಾದ ಯುವ ಆಟಗಾರ ಧುನಿತ್ ವೆಲ್ಲಲಗೆ ಪೆವಿಲಿಯನ್ ಗೆ ಕಳಿಸಿದರು.

ಮಧ್ಯಮ ಕ್ರಮಾಂಕದ ಆಟಗಾರರಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕನ್ನಡಿಗ ಕೆ.ಎಲ್. ರಾಹುಲ್ (39) ಹಾಗೂ ಇಶಾನ್ ಕಿಶನ್ (33) ರನ್ ಹಾಗೂ ಅಕ್ಷರ್ ಪಟೇಲ್ (26) ಗಳಿಸುವ ಮೂಲಕ ತಂಡದ ಮೊತ್ತವನ್ನು 200 ರನ್ ಗಡಿ ದಾಟಿಸಿದರು, ಲಂಕಾದ ಪರವಾಗಿ ವೆಲ್ಲಲಗೆ ವಿಕೆಟ್ ಪಡೆದರೆ ಸ್ಪಿನ್ನರ್ ಅಸಲಂಕ 4 ವಿಕೆಟ್ ಪಡೆದು ಮಿಂಚಿದರು.

213 ರನ್ ಗುರಿ ಬೆನ್ನತ್ತಿದ್ದ ಲಂಕಾ ಉತ್ತಮ ಆರಂಭವನ್ನು ಪಡೆಯಲಿಲ್ಲ, ಆರಂಭಿಕ ಆಟಗಾರರಾದ ನಿಸಾಂಕ (6) ಅವರು ಬುಮ್ರಾಗೆ ವಿಕೆಟ್ ಒಪ್ಪಿಸಿದರೆ ಕರುಣಾರತ್ನೆ(2) ಸಿರಾಜ್ ಗೆ ಬಲಿಯಾದರು.

ಲಂಕಾದ ಪರವಾಗಿ ಧನಂಜಯ ಡಿಸಿಲ್ವಾ (41), ಧುನಿತ್ ವೆಲ್ಲಲಗೆ (42) ಹಾಗೂ ಅಸಲಂಕ(22) ರನ್ ಗಳಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ 4, ಅಲ್ ರೌಂಡರ್ ರವೀಂದ್ರ ಜಡೇಜಾ ಹಾಗೂ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದು ತಂಡಕ್ಕೆ ಗೆಲುವು ತಂದುಕೊಟ್ಟರು.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

1 hour ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

15 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago