ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ ಫೋರ್ ನ ಶ್ರೀಲಂಕಾ ಹಾಗೂ ಭಾರತದ ನಡುವಿನ ಪಂದ್ಯದಲ್ಲಿ ಬೌಲರ್ ಗಳು ಪಾರಮ್ಯವನ್ನು ಮೆರೆದರೂ ಸಹ ಕೊನೆಗೆ ವಿಜಯಲಕ್ಷ್ಮಿ ಭಾರತಕ್ಕೆ ಒಲಿಯುವ ಮೂಲಕ ಫೈನಲ್ ಪಂದ್ಯಕ್ಕೆ ಲಗ್ಗೆಯಿಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ ಉತ್ತಮ ಆರಂಭವನ್ನು ಪಡೆಯಿತು, ನಾಯಕ ರೋಹಿತ್ ಶರ್ಮಾ (53) ಹಾಗೂ ಆರಂಭಿಕ ಆಟಗಾರ ಶುಭ್ಮನ್ ಗಿಲ್ (19) ಉತ್ತಮವಾಗಿ ರನ್ ಗಳಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿದರು.
ಮಧ್ಯಮ ಕ್ರಮಾಂಕದ ಆಟಗಾರರಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕನ್ನಡಿಗ ಕೆ.ಎಲ್. ರಾಹುಲ್ (39) ಹಾಗೂ ಇಶಾನ್ ಕಿಶನ್ (33) ರನ್ ಹಾಗೂ ಅಕ್ಷರ್ ಪಟೇಲ್ (26) ಗಳಿಸುವ ಮೂಲಕ ತಂಡದ ಮೊತ್ತವನ್ನು 200 ರನ್ ಗಡಿ ದಾಟಿಸಿದರು, ಲಂಕಾದ ಪರವಾಗಿ ವೆಲ್ಲಲಗೆ ವಿಕೆಟ್ ಪಡೆದರೆ ಸ್ಪಿನ್ನರ್ ಅಸಲಂಕ 4 ವಿಕೆಟ್ ಪಡೆದು ಮಿಂಚಿದರು.
ಲಂಕಾದ ಪರವಾಗಿ ಧನಂಜಯ ಡಿಸಿಲ್ವಾ (41), ಧುನಿತ್ ವೆಲ್ಲಲಗೆ (42) ಹಾಗೂ ಅಸಲಂಕ(22) ರನ್ ಗಳಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ 4, ಅಲ್ ರೌಂಡರ್ ರವೀಂದ್ರ ಜಡೇಜಾ ಹಾಗೂ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದು ತಂಡಕ್ಕೆ ಗೆಲುವು ತಂದುಕೊಟ್ಟರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…