ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ ಫೋರ್ ನ ಶ್ರೀಲಂಕಾ ಹಾಗೂ ಭಾರತದ ನಡುವಿನ ಪಂದ್ಯದಲ್ಲಿ ಬೌಲರ್ ಗಳು ಪಾರಮ್ಯವನ್ನು ಮೆರೆದರೂ ಸಹ ಕೊನೆಗೆ ವಿಜಯಲಕ್ಷ್ಮಿ ಭಾರತಕ್ಕೆ ಒಲಿಯುವ ಮೂಲಕ ಫೈನಲ್ ಪಂದ್ಯಕ್ಕೆ ಲಗ್ಗೆಯಿಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ ಉತ್ತಮ ಆರಂಭವನ್ನು ಪಡೆಯಿತು, ನಾಯಕ ರೋಹಿತ್ ಶರ್ಮಾ (53) ಹಾಗೂ ಆರಂಭಿಕ ಆಟಗಾರ ಶುಭ್ಮನ್ ಗಿಲ್ (19) ಉತ್ತಮವಾಗಿ ರನ್ ಗಳಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿದರು.
ಮಧ್ಯಮ ಕ್ರಮಾಂಕದ ಆಟಗಾರರಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕನ್ನಡಿಗ ಕೆ.ಎಲ್. ರಾಹುಲ್ (39) ಹಾಗೂ ಇಶಾನ್ ಕಿಶನ್ (33) ರನ್ ಹಾಗೂ ಅಕ್ಷರ್ ಪಟೇಲ್ (26) ಗಳಿಸುವ ಮೂಲಕ ತಂಡದ ಮೊತ್ತವನ್ನು 200 ರನ್ ಗಡಿ ದಾಟಿಸಿದರು, ಲಂಕಾದ ಪರವಾಗಿ ವೆಲ್ಲಲಗೆ ವಿಕೆಟ್ ಪಡೆದರೆ ಸ್ಪಿನ್ನರ್ ಅಸಲಂಕ 4 ವಿಕೆಟ್ ಪಡೆದು ಮಿಂಚಿದರು.
ಲಂಕಾದ ಪರವಾಗಿ ಧನಂಜಯ ಡಿಸಿಲ್ವಾ (41), ಧುನಿತ್ ವೆಲ್ಲಲಗೆ (42) ಹಾಗೂ ಅಸಲಂಕ(22) ರನ್ ಗಳಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ 4, ಅಲ್ ರೌಂಡರ್ ರವೀಂದ್ರ ಜಡೇಜಾ ಹಾಗೂ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದು ತಂಡಕ್ಕೆ ಗೆಲುವು ತಂದುಕೊಟ್ಟರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…