ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ ಫೋರ್ ನ ಶ್ರೀಲಂಕಾ ಹಾಗೂ ಭಾರತದ ನಡುವಿನ ಪಂದ್ಯದಲ್ಲಿ ಬೌಲರ್ ಗಳು ಪಾರಮ್ಯವನ್ನು ಮೆರೆದರೂ ಸಹ ಕೊನೆಗೆ ವಿಜಯಲಕ್ಷ್ಮಿ ಭಾರತಕ್ಕೆ ಒಲಿಯುವ ಮೂಲಕ ಫೈನಲ್ ಪಂದ್ಯಕ್ಕೆ ಲಗ್ಗೆಯಿಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ ಉತ್ತಮ ಆರಂಭವನ್ನು ಪಡೆಯಿತು, ನಾಯಕ ರೋಹಿತ್ ಶರ್ಮಾ (53) ಹಾಗೂ ಆರಂಭಿಕ ಆಟಗಾರ ಶುಭ್ಮನ್ ಗಿಲ್ (19) ಉತ್ತಮವಾಗಿ ರನ್ ಗಳಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿದರು.
ಮಧ್ಯಮ ಕ್ರಮಾಂಕದ ಆಟಗಾರರಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕನ್ನಡಿಗ ಕೆ.ಎಲ್. ರಾಹುಲ್ (39) ಹಾಗೂ ಇಶಾನ್ ಕಿಶನ್ (33) ರನ್ ಹಾಗೂ ಅಕ್ಷರ್ ಪಟೇಲ್ (26) ಗಳಿಸುವ ಮೂಲಕ ತಂಡದ ಮೊತ್ತವನ್ನು 200 ರನ್ ಗಡಿ ದಾಟಿಸಿದರು, ಲಂಕಾದ ಪರವಾಗಿ ವೆಲ್ಲಲಗೆ ವಿಕೆಟ್ ಪಡೆದರೆ ಸ್ಪಿನ್ನರ್ ಅಸಲಂಕ 4 ವಿಕೆಟ್ ಪಡೆದು ಮಿಂಚಿದರು.
ಲಂಕಾದ ಪರವಾಗಿ ಧನಂಜಯ ಡಿಸಿಲ್ವಾ (41), ಧುನಿತ್ ವೆಲ್ಲಲಗೆ (42) ಹಾಗೂ ಅಸಲಂಕ(22) ರನ್ ಗಳಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ 4, ಅಲ್ ರೌಂಡರ್ ರವೀಂದ್ರ ಜಡೇಜಾ ಹಾಗೂ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದು ತಂಡಕ್ಕೆ ಗೆಲುವು ತಂದುಕೊಟ್ಟರು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…