ಬಿಗಿ ಬೌಲಿಂಗ್ ದಾಳಿಗೆ ಲಂಕಾ ತತ್ತರ, ಫೈನಲ್ ಗೆ ಲಗ್ಗೆಯಿಟ್ಟ ಭಾರತ !

ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ ಫೋರ್ ನ ಶ್ರೀಲಂಕಾ ಹಾಗೂ ಭಾರತದ ನಡುವಿನ ಪಂದ್ಯದಲ್ಲಿ ಬೌಲರ್ ಗಳು ಪಾರಮ್ಯವನ್ನು ಮೆರೆದರೂ ಸಹ ಕೊನೆಗೆ ವಿಜಯಲಕ್ಷ್ಮಿ ಭಾರತಕ್ಕೆ ಒಲಿಯುವ ಮೂಲಕ ಫೈನಲ್ ಪಂದ್ಯಕ್ಕೆ ಲಗ್ಗೆಯಿಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ ಉತ್ತಮ ಆರಂಭವನ್ನು ಪಡೆಯಿತು, ನಾಯಕ ರೋಹಿತ್ ಶರ್ಮಾ (53) ಹಾಗೂ ಆರಂಭಿಕ ಆಟಗಾರ ಶುಭ್ಮನ್ ಗಿಲ್ (19) ಉತ್ತಮವಾಗಿ ರನ್ ಗಳಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿದರು.

ಉತ್ತಮವಾಗಿ ಆಡುತ್ತಿದ್ದ ಭಾರತದ ಅಗ್ರ ಶ್ರೇಯಾಂಕಿತ ಆಟಗಾರರಾದ ಶುಭ್ಮನ್ ಗಿಲ್, ನಾಯಕ ರೋಹಿತ್ ಶರ್ಮಾ ಹಾಗೂ ಹಿರಿಯ ಆಟಗಾರ ವಿರಾಟ್ ಕೋಹ್ಲಿ ಅವರನ್ನು ಶ್ರೀಲಂಕಾದ ಯುವ ಆಟಗಾರ ಧುನಿತ್ ವೆಲ್ಲಲಗೆ ಪೆವಿಲಿಯನ್ ಗೆ ಕಳಿಸಿದರು.

ಮಧ್ಯಮ ಕ್ರಮಾಂಕದ ಆಟಗಾರರಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕನ್ನಡಿಗ ಕೆ.ಎಲ್. ರಾಹುಲ್ (39) ಹಾಗೂ ಇಶಾನ್ ಕಿಶನ್ (33) ರನ್ ಹಾಗೂ ಅಕ್ಷರ್ ಪಟೇಲ್ (26) ಗಳಿಸುವ ಮೂಲಕ ತಂಡದ ಮೊತ್ತವನ್ನು 200 ರನ್ ಗಡಿ ದಾಟಿಸಿದರು, ಲಂಕಾದ ಪರವಾಗಿ ವೆಲ್ಲಲಗೆ ವಿಕೆಟ್ ಪಡೆದರೆ ಸ್ಪಿನ್ನರ್ ಅಸಲಂಕ 4 ವಿಕೆಟ್ ಪಡೆದು ಮಿಂಚಿದರು.

213 ರನ್ ಗುರಿ ಬೆನ್ನತ್ತಿದ್ದ ಲಂಕಾ ಉತ್ತಮ ಆರಂಭವನ್ನು ಪಡೆಯಲಿಲ್ಲ, ಆರಂಭಿಕ ಆಟಗಾರರಾದ ನಿಸಾಂಕ (6) ಅವರು ಬುಮ್ರಾಗೆ ವಿಕೆಟ್ ಒಪ್ಪಿಸಿದರೆ ಕರುಣಾರತ್ನೆ(2) ಸಿರಾಜ್ ಗೆ ಬಲಿಯಾದರು.

ಲಂಕಾದ ಪರವಾಗಿ ಧನಂಜಯ ಡಿಸಿಲ್ವಾ (41), ಧುನಿತ್ ವೆಲ್ಲಲಗೆ (42) ಹಾಗೂ ಅಸಲಂಕ(22) ರನ್ ಗಳಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ 4, ಅಲ್ ರೌಂಡರ್ ರವೀಂದ್ರ ಜಡೇಜಾ ಹಾಗೂ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದು ತಂಡಕ್ಕೆ ಗೆಲುವು ತಂದುಕೊಟ್ಟರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

5 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

24 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago