ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ ಫೋರ್ ನ ಶ್ರೀಲಂಕಾ ಹಾಗೂ ಭಾರತದ ನಡುವಿನ ಪಂದ್ಯದಲ್ಲಿ ಬೌಲರ್ ಗಳು ಪಾರಮ್ಯವನ್ನು ಮೆರೆದರೂ ಸಹ ಕೊನೆಗೆ ವಿಜಯಲಕ್ಷ್ಮಿ ಭಾರತಕ್ಕೆ ಒಲಿಯುವ ಮೂಲಕ ಫೈನಲ್ ಪಂದ್ಯಕ್ಕೆ ಲಗ್ಗೆಯಿಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ ಉತ್ತಮ ಆರಂಭವನ್ನು ಪಡೆಯಿತು, ನಾಯಕ ರೋಹಿತ್ ಶರ್ಮಾ (53) ಹಾಗೂ ಆರಂಭಿಕ ಆಟಗಾರ ಶುಭ್ಮನ್ ಗಿಲ್ (19) ಉತ್ತಮವಾಗಿ ರನ್ ಗಳಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿದರು.
ಮಧ್ಯಮ ಕ್ರಮಾಂಕದ ಆಟಗಾರರಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕನ್ನಡಿಗ ಕೆ.ಎಲ್. ರಾಹುಲ್ (39) ಹಾಗೂ ಇಶಾನ್ ಕಿಶನ್ (33) ರನ್ ಹಾಗೂ ಅಕ್ಷರ್ ಪಟೇಲ್ (26) ಗಳಿಸುವ ಮೂಲಕ ತಂಡದ ಮೊತ್ತವನ್ನು 200 ರನ್ ಗಡಿ ದಾಟಿಸಿದರು, ಲಂಕಾದ ಪರವಾಗಿ ವೆಲ್ಲಲಗೆ ವಿಕೆಟ್ ಪಡೆದರೆ ಸ್ಪಿನ್ನರ್ ಅಸಲಂಕ 4 ವಿಕೆಟ್ ಪಡೆದು ಮಿಂಚಿದರು.
ಲಂಕಾದ ಪರವಾಗಿ ಧನಂಜಯ ಡಿಸಿಲ್ವಾ (41), ಧುನಿತ್ ವೆಲ್ಲಲಗೆ (42) ಹಾಗೂ ಅಸಲಂಕ(22) ರನ್ ಗಳಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ 4, ಅಲ್ ರೌಂಡರ್ ರವೀಂದ್ರ ಜಡೇಜಾ ಹಾಗೂ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದು ತಂಡಕ್ಕೆ ಗೆಲುವು ತಂದುಕೊಟ್ಟರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…