ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ ಫೋರ್ ನ ಶ್ರೀಲಂಕಾ ಹಾಗೂ ಭಾರತದ ನಡುವಿನ ಪಂದ್ಯದಲ್ಲಿ ಬೌಲರ್ ಗಳು ಪಾರಮ್ಯವನ್ನು ಮೆರೆದರೂ ಸಹ ಕೊನೆಗೆ ವಿಜಯಲಕ್ಷ್ಮಿ ಭಾರತಕ್ಕೆ ಒಲಿಯುವ ಮೂಲಕ ಫೈನಲ್ ಪಂದ್ಯಕ್ಕೆ ಲಗ್ಗೆಯಿಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ ಉತ್ತಮ ಆರಂಭವನ್ನು ಪಡೆಯಿತು, ನಾಯಕ ರೋಹಿತ್ ಶರ್ಮಾ (53) ಹಾಗೂ ಆರಂಭಿಕ ಆಟಗಾರ ಶುಭ್ಮನ್ ಗಿಲ್ (19) ಉತ್ತಮವಾಗಿ ರನ್ ಗಳಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿದರು.
ಮಧ್ಯಮ ಕ್ರಮಾಂಕದ ಆಟಗಾರರಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕನ್ನಡಿಗ ಕೆ.ಎಲ್. ರಾಹುಲ್ (39) ಹಾಗೂ ಇಶಾನ್ ಕಿಶನ್ (33) ರನ್ ಹಾಗೂ ಅಕ್ಷರ್ ಪಟೇಲ್ (26) ಗಳಿಸುವ ಮೂಲಕ ತಂಡದ ಮೊತ್ತವನ್ನು 200 ರನ್ ಗಡಿ ದಾಟಿಸಿದರು, ಲಂಕಾದ ಪರವಾಗಿ ವೆಲ್ಲಲಗೆ ವಿಕೆಟ್ ಪಡೆದರೆ ಸ್ಪಿನ್ನರ್ ಅಸಲಂಕ 4 ವಿಕೆಟ್ ಪಡೆದು ಮಿಂಚಿದರು.
ಲಂಕಾದ ಪರವಾಗಿ ಧನಂಜಯ ಡಿಸಿಲ್ವಾ (41), ಧುನಿತ್ ವೆಲ್ಲಲಗೆ (42) ಹಾಗೂ ಅಸಲಂಕ(22) ರನ್ ಗಳಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ 4, ಅಲ್ ರೌಂಡರ್ ರವೀಂದ್ರ ಜಡೇಜಾ ಹಾಗೂ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದು ತಂಡಕ್ಕೆ ಗೆಲುವು ತಂದುಕೊಟ್ಟರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…