ಬಿಗಿ ಬೌಲಿಂಗ್ ದಾಳಿಗೆ ಲಂಕಾ ತತ್ತರ, ಫೈನಲ್ ಗೆ ಲಗ್ಗೆಯಿಟ್ಟ ಭಾರತ !

ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ ಫೋರ್ ನ ಶ್ರೀಲಂಕಾ ಹಾಗೂ ಭಾರತದ ನಡುವಿನ ಪಂದ್ಯದಲ್ಲಿ ಬೌಲರ್ ಗಳು ಪಾರಮ್ಯವನ್ನು ಮೆರೆದರೂ ಸಹ ಕೊನೆಗೆ ವಿಜಯಲಕ್ಷ್ಮಿ ಭಾರತಕ್ಕೆ ಒಲಿಯುವ ಮೂಲಕ ಫೈನಲ್ ಪಂದ್ಯಕ್ಕೆ ಲಗ್ಗೆಯಿಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ ಉತ್ತಮ ಆರಂಭವನ್ನು ಪಡೆಯಿತು, ನಾಯಕ ರೋಹಿತ್ ಶರ್ಮಾ (53) ಹಾಗೂ ಆರಂಭಿಕ ಆಟಗಾರ ಶುಭ್ಮನ್ ಗಿಲ್ (19) ಉತ್ತಮವಾಗಿ ರನ್ ಗಳಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿದರು.

ಉತ್ತಮವಾಗಿ ಆಡುತ್ತಿದ್ದ ಭಾರತದ ಅಗ್ರ ಶ್ರೇಯಾಂಕಿತ ಆಟಗಾರರಾದ ಶುಭ್ಮನ್ ಗಿಲ್, ನಾಯಕ ರೋಹಿತ್ ಶರ್ಮಾ ಹಾಗೂ ಹಿರಿಯ ಆಟಗಾರ ವಿರಾಟ್ ಕೋಹ್ಲಿ ಅವರನ್ನು ಶ್ರೀಲಂಕಾದ ಯುವ ಆಟಗಾರ ಧುನಿತ್ ವೆಲ್ಲಲಗೆ ಪೆವಿಲಿಯನ್ ಗೆ ಕಳಿಸಿದರು.

ಮಧ್ಯಮ ಕ್ರಮಾಂಕದ ಆಟಗಾರರಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕನ್ನಡಿಗ ಕೆ.ಎಲ್. ರಾಹುಲ್ (39) ಹಾಗೂ ಇಶಾನ್ ಕಿಶನ್ (33) ರನ್ ಹಾಗೂ ಅಕ್ಷರ್ ಪಟೇಲ್ (26) ಗಳಿಸುವ ಮೂಲಕ ತಂಡದ ಮೊತ್ತವನ್ನು 200 ರನ್ ಗಡಿ ದಾಟಿಸಿದರು, ಲಂಕಾದ ಪರವಾಗಿ ವೆಲ್ಲಲಗೆ ವಿಕೆಟ್ ಪಡೆದರೆ ಸ್ಪಿನ್ನರ್ ಅಸಲಂಕ 4 ವಿಕೆಟ್ ಪಡೆದು ಮಿಂಚಿದರು.

213 ರನ್ ಗುರಿ ಬೆನ್ನತ್ತಿದ್ದ ಲಂಕಾ ಉತ್ತಮ ಆರಂಭವನ್ನು ಪಡೆಯಲಿಲ್ಲ, ಆರಂಭಿಕ ಆಟಗಾರರಾದ ನಿಸಾಂಕ (6) ಅವರು ಬುಮ್ರಾಗೆ ವಿಕೆಟ್ ಒಪ್ಪಿಸಿದರೆ ಕರುಣಾರತ್ನೆ(2) ಸಿರಾಜ್ ಗೆ ಬಲಿಯಾದರು.

ಲಂಕಾದ ಪರವಾಗಿ ಧನಂಜಯ ಡಿಸಿಲ್ವಾ (41), ಧುನಿತ್ ವೆಲ್ಲಲಗೆ (42) ಹಾಗೂ ಅಸಲಂಕ(22) ರನ್ ಗಳಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ 4, ಅಲ್ ರೌಂಡರ್ ರವೀಂದ್ರ ಜಡೇಜಾ ಹಾಗೂ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದು ತಂಡಕ್ಕೆ ಗೆಲುವು ತಂದುಕೊಟ್ಟರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

5 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

11 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

13 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago