ಬಿಗಿ ಬೌಲಿಂಗ್ ದಾಳಿಗೆ ಲಂಕಾ ತತ್ತರ, ಫೈನಲ್ ಗೆ ಲಗ್ಗೆಯಿಟ್ಟ ಭಾರತ !

ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ ಫೋರ್ ನ ಶ್ರೀಲಂಕಾ ಹಾಗೂ ಭಾರತದ ನಡುವಿನ ಪಂದ್ಯದಲ್ಲಿ ಬೌಲರ್ ಗಳು ಪಾರಮ್ಯವನ್ನು ಮೆರೆದರೂ ಸಹ ಕೊನೆಗೆ ವಿಜಯಲಕ್ಷ್ಮಿ ಭಾರತಕ್ಕೆ ಒಲಿಯುವ ಮೂಲಕ ಫೈನಲ್ ಪಂದ್ಯಕ್ಕೆ ಲಗ್ಗೆಯಿಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ ಉತ್ತಮ ಆರಂಭವನ್ನು ಪಡೆಯಿತು, ನಾಯಕ ರೋಹಿತ್ ಶರ್ಮಾ (53) ಹಾಗೂ ಆರಂಭಿಕ ಆಟಗಾರ ಶುಭ್ಮನ್ ಗಿಲ್ (19) ಉತ್ತಮವಾಗಿ ರನ್ ಗಳಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿದರು.

ಉತ್ತಮವಾಗಿ ಆಡುತ್ತಿದ್ದ ಭಾರತದ ಅಗ್ರ ಶ್ರೇಯಾಂಕಿತ ಆಟಗಾರರಾದ ಶುಭ್ಮನ್ ಗಿಲ್, ನಾಯಕ ರೋಹಿತ್ ಶರ್ಮಾ ಹಾಗೂ ಹಿರಿಯ ಆಟಗಾರ ವಿರಾಟ್ ಕೋಹ್ಲಿ ಅವರನ್ನು ಶ್ರೀಲಂಕಾದ ಯುವ ಆಟಗಾರ ಧುನಿತ್ ವೆಲ್ಲಲಗೆ ಪೆವಿಲಿಯನ್ ಗೆ ಕಳಿಸಿದರು.

ಮಧ್ಯಮ ಕ್ರಮಾಂಕದ ಆಟಗಾರರಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕನ್ನಡಿಗ ಕೆ.ಎಲ್. ರಾಹುಲ್ (39) ಹಾಗೂ ಇಶಾನ್ ಕಿಶನ್ (33) ರನ್ ಹಾಗೂ ಅಕ್ಷರ್ ಪಟೇಲ್ (26) ಗಳಿಸುವ ಮೂಲಕ ತಂಡದ ಮೊತ್ತವನ್ನು 200 ರನ್ ಗಡಿ ದಾಟಿಸಿದರು, ಲಂಕಾದ ಪರವಾಗಿ ವೆಲ್ಲಲಗೆ ವಿಕೆಟ್ ಪಡೆದರೆ ಸ್ಪಿನ್ನರ್ ಅಸಲಂಕ 4 ವಿಕೆಟ್ ಪಡೆದು ಮಿಂಚಿದರು.

213 ರನ್ ಗುರಿ ಬೆನ್ನತ್ತಿದ್ದ ಲಂಕಾ ಉತ್ತಮ ಆರಂಭವನ್ನು ಪಡೆಯಲಿಲ್ಲ, ಆರಂಭಿಕ ಆಟಗಾರರಾದ ನಿಸಾಂಕ (6) ಅವರು ಬುಮ್ರಾಗೆ ವಿಕೆಟ್ ಒಪ್ಪಿಸಿದರೆ ಕರುಣಾರತ್ನೆ(2) ಸಿರಾಜ್ ಗೆ ಬಲಿಯಾದರು.

ಲಂಕಾದ ಪರವಾಗಿ ಧನಂಜಯ ಡಿಸಿಲ್ವಾ (41), ಧುನಿತ್ ವೆಲ್ಲಲಗೆ (42) ಹಾಗೂ ಅಸಲಂಕ(22) ರನ್ ಗಳಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ, ಭಾರತದ ಪರವಾಗಿ ಸ್ಪಿನ್ನರ್ ಕುಲದೀಪ್ ಯಾದವ್ 4, ಅಲ್ ರೌಂಡರ್ ರವೀಂದ್ರ ಜಡೇಜಾ ಹಾಗೂ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದು ತಂಡಕ್ಕೆ ಗೆಲುವು ತಂದುಕೊಟ್ಟರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

4 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

9 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

13 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

16 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago