ಬಿಗ್ ಬಾಸ್ ಕನ್ನಡ 12: ‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಗಿಲ್ಲಿ ನಟನಿಗೆ ಸಿಕ್ಕ ಬಹುಮಾನ ಎಷ್ಟು ?

ಬಿಗ್ ಬಾಸ್ ಕನ್ನಡ 12 ಕಾರ್ಯಕ್ರಮಕ್ಕೆ ಕಡೆಗೂ ತೆರೆಬಿದ್ದಿದೆ. ಸಾಕಷ್ಟು ಪ್ರೇಕ್ಷಕರ ನಿರೀಕ್ಷೆಯಂತೆ ಗಿಲ್ಲಿ ನಟ ವಿನ್ನರ್ ಆಗಿದ್ದಾರೆ.

‘ಬಿಗ್ ಬಾಸ್’ ಮನೆಯೊಳಗೆ ಗಿಲ್ಲಿ ಕಾಲಿಟ್ಟಿದ್ದು ಕಾವ್ಯ ಜೊತೆ ಜಂಟಿಯಾಗಿ. ‘ಬಿಗ್ ಬಾಸ್’ ಮನೆಯೊಳಗೆ ಜಂಟಿಯಾಗಿ ಹೋದರೂ ಸಿಂಗಲ್ ಆಗಿ ಇಡೀ ಸೀಸನ್‌ ಡಾಮಿನೇಷನ್ ಮಾಡಿದವರು ಗಿಲ್ಲಿ ನಟ.

ಗಿಲ್ಲಿ ನಟನ ಕಾಮಿಡಿ ಟೈಮಿಂಗ್, ಸಂದರ್ಭೋಚಿತ ಕಾಮಿಡಿ, ಪಂಚಿಂಗ್ ಲೈನ್ಸ್ ಸಿಕ್ಕಾಪಟ್ಟೆ ವರ್ಕೌಟ್ ಆಗಿತ್ತು. ತಮ್ಮ ಕಾಮಿಡಿಯಲ್ಲಿ ಸಿಲ್ಲಿ ಜೋಕ್ಸ್‌ನ ಗಿಲ್ಲಿ ಎಂದೂ ಮಿಕ್ಸ್ ಮಾಡಲಿಲ್ಲ. ಡಬಲ್ ಮೀನಿಂಗ್ ಅಥವಾ ಅಶ್ಲೀಲತೆಯನ್ನ ಸೋಕಿಸಲೂ ಇಲ್ಲ. ಇಡೀ ಫ್ಯಾಮಿಲಿ ಕೂತು.. ಎಲ್ಲರೂ ಹೊಟ್ಟೆ ತುಂಬಾ ನಗುವಂತೆ ಮಾಡಿದವರು ಗಿಲ್ಲಿ ನಟ. ಇದೇ ಕಾರಣಕ್ಕೆ ‘ಗಿಲ್ಲಿ ಗೆಲ್ಲಬೇಕು’ ಅಂತ ಬಹುತೇಕರು ಬಯಸಿದ್ದರು. ವೀಕ್ಷಕರು ಅಂದುಕೊಂಡಂತೆ ಗಿಲ್ಲಿ ನಟ ವಿಜಯಪತಾಕೆ ಹಾರಿಸಿದ್ದಾರೆ.

‘ಬಿಗ್ ಬಾಸ್’ ಮನೆಯಲ್ಲಿ ”ಬಿಗ್ ಬಾಸ್ ಕನ್ನಡ 12’ ಸ್ವಯಂಘೋಷಿತ ವಿನ್ನರ್‌ ಗಿಲ್ಲಿ” ಅಂತ ಕೆಲವರು ಕಾಲೆಳೆಯುತ್ತಿದ್ದರು. ಅದಕ್ಕೆ ”ಡಮಾಲ್ ಡಿಮಿಲ್ ಡಕ್ಕ.. ಗಿಲ್ಲಿ ಗೆಲ್ಲೋದು ಪಕ್ಕಾ.. ಟಕರ ಟಕರ ತಮಟೆ ಏಟು.. ಗಿಲ್ಲಿ ನಟ ಅಲ್ಟಿಮೇಟು” ಎಂದು ಗಿಲ್ಲಿ ನಟ ತಿರುಗೇಟು ನೀಡುತ್ತಿದ್ದರು. ಈಗ ವೀಕ್ಷಕರಿಂದ ಅತೀ ಹೆಚ್ಚು ಮತಗಳನ್ನ ಪಡೆದು ಗಿಲ್ಲಿ ನಟ ಜಯಭೇರಿ ಬಾರಿಸಿದ್ದಾರೆ.

ಗೆದ್ಮೇಲೆ ”ನಿಜವಾಗಿಯೂ ಸಖತ್ ಖುಷಿಯಾಗುತ್ತಿದೆ. ಗೆದ್ದಿದ್ದೇನೆ.. ಗೆದ್ದಾಗ ಹಿಗ್ಗಲ್ಲ, ಸೋತಾಗ ಕುಗ್ಗಲ್ಲ. ನಿಮ್ಮ ಆಶೀರ್ವಾದ ಯಾವಾಗಲೂ ಹೀಗೇ ಇರಲಿ” ಎಂದಿದ್ದಾರೆ ಗಿಲ್ಲಿ ನಟ. ಜೊತೆಗೆ, ”ನನಗೆ ಒಳಗೆ ರಜತ್, ಕಾವ್ಯ, ರಕ್ಷಿತಾ, ರಘು ತುಂಬಾ ಸಪೋರ್ಟ್ ಮಾಡಿದರು. ಇದನ್ನ ನಾನು ನನ್ನ ಜೀವನದಲ್ಲಿ ಮರೆಯೋದಿಲ್ಲ” ಎಂದು ಗಿಲ್ಲಿ ನಟ ನೆನೆದರು.

ಹಾಗ್ನೋಡಿದ್ರೆ, ಈ ಹಿಂದೆ 5 ರಿಯಾಲಿಟಿ ಶೋಗಳಲ್ಲಿ ಗಿಲ್ಲಿ ನಟ ಸ್ಪರ್ಧಿಸಿದ್ದರು. ಕೆಲವು ಶೋಗಳಲ್ಲಿ ಫೈನಲಿಸ್ಟ್ ಆಗಿದ್ದರೆ, ಕೆಲವೊಂದರಲ್ಲಿ ರನ್ನರ್‌ ಅಪ್ ಆಗಿದ್ದರು. ಈವರೆಗೂ ಯಾವ ಶೋನಲ್ಲೂ ಗಿಲ್ಲಿ ನಟ ಗೆದ್ದಿರಲಿಲ್ಲ. ಗಿಲ್ಲಿ ನಟನಿಗೆ ಗೆಲುವಿನ ಸಿಹಿ ನೀಡಿರೋದು ‘ಬಿಗ್ ಬಾಸ್‌’. ಈ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್, ”5 ರಿಯಾಲಿಟಿ ಶೋ ನಂತರ ಫೈನಲಿ.. ‘ಬಿಗ್ ಬಾಸ್’ ಎಂಬ ದೊಡ್ಡ ರಿಯಾಲಿಟಿ ಶೋಗೆ ಬಂದು ದೊಡ್ಡ ಮಟ್ಟದಲ್ಲಿ ಗಿಲ್ಲಿ ಗೆಲುವಿನ ನಗೆ ಬೀರಿದ್ದಾರೆ” ಎಂದರು. ಹಾಗೇ, ”ಇದು ವೆಲ್ ಡಿಸರ್ವ್ಡ್ ಗೆಲುವು” ಎಂದು ಗಿಲ್ಲಿ ನಟನ ಬೆನ್ನು ತಟ್ಟಿದರು ಕಿಚ್ಚ ಸುದೀಪ್.

‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಗಿಲ್ಲಿ ನಟನಿಗೆ ಪ್ರಾಯೋಜಕರ ಕಡೆಯಿಂದ 50 ಲಕ್ಷ ರೂಪಾಯಿ ಬಹುಮಾನ ಹಣ ಲಭಿಸಿದೆ. ಬಿಗ್ ಬಾಸ್ ಅರಮನೆ ಥೀಮ್‌ನಲ್ಲಿಯೇ ಸಿದ್ಧಗೊಂಡಿರುವ ‘ಬಿಗ್ ಬಾಸ್ ಕನ್ನಡ 12 ವಿನ್ನರ್ ಟ್ರೋಫಿ’ಗೆ ಗಿಲ್ಲಿ ನಟ ಮುತ್ತಿಟ್ಟಿದ್ದಾರೆ. ಇದರ ಜೊತೆಗೆ ಮಾರುತಿ ಸುಜುಕಿ ಕಡೆಯಿಂದ ವಿಕ್ಟೋರಿಸ್ ಕಾರು ಗಿಲ್ಲಿ ನಟನ ಕೈಸೇರಿದೆ.

ಕಿಚ್ಚ ಸುದೀಪ್ ಕಡೆಯಿಂದಲೂ ಪ್ರೀತಿಯ ಬಹುಮಾನ
ಪ್ರಾಯೋಜಕರ ಕಡೆಯಿಂದ ಮಾತ್ರವಲ್ಲ.. ಕಿಚ್ಚ ಸುದೀಪ್ ಕಡೆಯಿಂದಲೂ ಗಿಲ್ಲಿ ನಟನಿಗೆ ಬಹುಮಾನ ಹಣ ಲಭಿಸಿದೆ. ಕಿಚ್ಚ ಸುದೀಪ್ ಮನಗೆದ್ದಿರುವ ಗಿಲ್ಲಿ ನಟನಿಗೆ ಬಹುಮಾನ ಹಣ ಘೋಷಿಸಿದ್ದಾರೆ. ”ಗಿಲ್ಲಿ ಅದ್ಭುತವಾಗಿ ಆಡಿದ್ದಾರೆ. ಈ ವೇದಿಕೆಯಲ್ಲಿ ನನ್ನ ಕಡೆಯಿಂದ ಗಿಲ್ಲಿಗೆ ನಾನು ಪ್ರೀತಿಯಿಂದ 10 ಲಕ್ಷ ರೂಪಾಯಿ ಕೊಡುತ್ತಿದ್ದೇನೆ” ಎಂದು ಕಿಚ್ಚ ಸುದೀಪ್‌ ಅನೌನ್ಸ್ ಮಾಡಿದರು

Ramesh Babu

Journalist

Recent Posts

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

2 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

3 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

3 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

14 hours ago

Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…

14 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಫಾರ್ಮ್ ಪಾರ್ಟಿ: ಸಂತಸದಿಂದ ಪ್ರಾಣಿಗಳ ಜೊತೆಯಲ್ಲಿ ಸಮಯ ಕಳೆದ ವಿದ್ಯಾರ್ಥಿಗಳು ಮತ್ತು ಪೋಷಕರು

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…

15 hours ago