ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ ಮತ್ತು ಪರಿಸ್ಥಿತಿಗೆ ತಕ್ಕಂತೆ ಮಾತು ಬದಲಿಸುವುದು, ಸಿದ್ದಾಂತ ಬದಲಿಸುವುದು, ವರಸೆ ಬದಲಿಸುವುದು ಬಿಜೆಪಿಗರಿಗೆ ದೇವರು ನೀಡಿದ ವರ ಇರಬಹುದೇನೋ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯಗಳನ್ನಿಟ್ಟುಕೊಂಡು, ದಲಿತರಿಗೆ ಅನ್ಯಾಯ, ಒಬಿಸಿಗಳಿಗೆ ಅನ್ಯಾಯ ಎನ್ನುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ತಮ್ಮ ಆತ್ಮಸಾಕ್ಷಿಗೆ ಕೆಲ ಪ್ರಶ್ನೆಗಳನ್ನು ಕೇಳಿಕೊಂಡು ಆತ್ಮ ವಿಮರ್ಶೆ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.
ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?
ರಾಜ್ಯದಲ್ಲಿ ಬಿಜೆಪಿಯಿಂದ ಆಗಿರುವ ನಾಲ್ಕು ಮುಖ್ಯಮಂತ್ರಿಗಳಲ್ಲಿ ಎಷ್ಟು ಜನ ಒಬಿಸಿ, ದಲಿತರಿದ್ದಾರೆ?
ಮುಖ್ಯಮಂತ್ರಿಯಾಗಲು ಬಿಜೆಪಿ ಈ ಸಮುದಾಯಗಳ ನಾಯಕರನ್ನು ಬೆಳಸಲಿಲ್ಲವೇ ಅಥವಾ ಇರುವ ನಾಯಕರಿಗೆ ಅರ್ಹತೆ ಇಲ್ಲ ಎಂದು ತೀರ್ಮಾನಿಸಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ಅಧಿಕಾರವಿದ್ದಾಗಿನ ಕತೆ ಆಯಿತು, ಈಗಲಾದರೂ ದಲಿತ, ಒಬಿಸಿಗಳು ನೆನಪಾಗಲಿಲ್ಲವೇ? ವಿಧಾನಸಭೆ ವಿಪಕ್ಷ ನಾಯಕನ ಸ್ಥಾನವನ್ನು ಏಕೆ ಒಬಿಸಿ ಸಮುದಾಯದವರಿಗೆ ಕೊಡಲಿಲ್ಲ? ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ದಲಿತರಿಗೆ ಏಕೆ ಕೊಡಲಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಹುದ್ದೆಯನ್ನು ದಲಿತರೊಬ್ಬರಿಗೆ ಬಿಟ್ಟುಕೊಡಲು ತಯಾರಿದ್ದಾರಾ?
ವಿಪಕ್ಷ ನಾಯಕರು ತಮ್ಮ ಸ್ಥಾನವನ್ನು ಒಬಿಸಿ ಸಮುದಾಯಕ್ಕೆ ತ್ಯಾಗ ಮಾಡಲು ತಯಾರಿದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ.
ದಲಿತ, ಒಬಿಸಿ ಸಮುದಾಯಗಳಿಗೆ ಜಗನ್ನಾಥ ಭವನದ ಹೊಸ್ತಿಲನ್ನು ದಾಟಲು ಬಿಡದ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕೆ ಸಾಮಾಜಿಕ ನ್ಯಾಯ, ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
◆ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದ ಅತಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಗಳಾಗಿ ದಾಖಲೆ ನಿರ್ಮಿಸಿದ ಶ್ರೀ ದೇವರಾಜ್ ಅರಸು, ಶ್ರೀ ಸಿದ್ದರಾಮಯ್ಯ ಇಬ್ಬರು ಮುಖ್ಯಮಂತ್ರಿಗಳು ಒಬಿಸಿ ಸಮುದಾಯದವರೇ.
◆ ಕಾಂಗ್ರೆಸ್ ಪಕ್ಷ ನಾಲ್ಕು ಹಿಂದುಳಿದ ವರ್ಗಗಳ ನಾಯಕರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿದೆ.
◆ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯದವರಾದ ಶ್ರೀ ವೀರಪ್ಪ ಮೊಯ್ಲಿಯವರು ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್ ಪಕ್ಷದಿಂದಲೇ.
◆ ಶ್ರೀ ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿ ಹಿಂದುಳಿದ ವರ್ಗದ ನೇತಾರರಾಗಿ ಹೊರಹೊಮ್ಮಿದ್ದು ಕಾಂಗ್ರೆಸ್ ಪಕ್ಷದಲ್ಲೇ.
◆ ಶೋಷಿತ ಸಮುದಾಯದಿಂದ ಬಂದಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಕಾಂಗ್ರೆಸ್ ಪಕ್ಷದಲ್ಲೇ.
ಪಕ್ಕದ ಮನೆಗೆ ಬೆಂಕಿ ಹಚ್ಚಿ ಬೇಳೆ ಬೇಯಿಸಿಕೊಳ್ಳುವ ಬದಲು ಬಿಜೆಪಿ ತಮ್ಮ ತನುವ ಸಂತೈಸಿಕೊಳ್ಳಲಿ, ತಮ್ಮ ಮನೆಯ ಸಂಬಾಳಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…