ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ ಮತ್ತು ಪರಿಸ್ಥಿತಿಗೆ ತಕ್ಕಂತೆ ಮಾತು ಬದಲಿಸುವುದು, ಸಿದ್ದಾಂತ ಬದಲಿಸುವುದು, ವರಸೆ ಬದಲಿಸುವುದು ಬಿಜೆಪಿಗರಿಗೆ ದೇವರು ನೀಡಿದ ವರ ಇರಬಹುದೇನೋ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯಗಳನ್ನಿಟ್ಟುಕೊಂಡು, ದಲಿತರಿಗೆ ಅನ್ಯಾಯ, ಒಬಿಸಿಗಳಿಗೆ ಅನ್ಯಾಯ ಎನ್ನುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ತಮ್ಮ ಆತ್ಮಸಾಕ್ಷಿಗೆ ಕೆಲ ಪ್ರಶ್ನೆಗಳನ್ನು ಕೇಳಿಕೊಂಡು ಆತ್ಮ ವಿಮರ್ಶೆ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?
ರಾಜ್ಯದಲ್ಲಿ ಬಿಜೆಪಿಯಿಂದ ಆಗಿರುವ ನಾಲ್ಕು ಮುಖ್ಯಮಂತ್ರಿಗಳಲ್ಲಿ ಎಷ್ಟು ಜನ ಒಬಿಸಿ, ದಲಿತರಿದ್ದಾರೆ?
ಮುಖ್ಯಮಂತ್ರಿಯಾಗಲು ಬಿಜೆಪಿ ಈ ಸಮುದಾಯಗಳ ನಾಯಕರನ್ನು ಬೆಳಸಲಿಲ್ಲವೇ ಅಥವಾ ಇರುವ ನಾಯಕರಿಗೆ ಅರ್ಹತೆ ಇಲ್ಲ ಎಂದು ತೀರ್ಮಾನಿಸಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಧಿಕಾರವಿದ್ದಾಗಿನ ಕತೆ ಆಯಿತು, ಈಗಲಾದರೂ ದಲಿತ, ಒಬಿಸಿಗಳು ನೆನಪಾಗಲಿಲ್ಲವೇ? ವಿಧಾನಸಭೆ ವಿಪಕ್ಷ ನಾಯಕನ ಸ್ಥಾನವನ್ನು ಏಕೆ ಒಬಿಸಿ ಸಮುದಾಯದವರಿಗೆ ಕೊಡಲಿಲ್ಲ? ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ದಲಿತರಿಗೆ ಏಕೆ ಕೊಡಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಹುದ್ದೆಯನ್ನು ದಲಿತರೊಬ್ಬರಿಗೆ ಬಿಟ್ಟುಕೊಡಲು ತಯಾರಿದ್ದಾರಾ?
ವಿಪಕ್ಷ ನಾಯಕರು ತಮ್ಮ ಸ್ಥಾನವನ್ನು ಒಬಿಸಿ ಸಮುದಾಯಕ್ಕೆ ತ್ಯಾಗ ಮಾಡಲು ತಯಾರಿದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ.

ದಲಿತ, ಒಬಿಸಿ ಸಮುದಾಯಗಳಿಗೆ ಜಗನ್ನಾಥ ಭವನದ ಹೊಸ್ತಿಲನ್ನು ದಾಟಲು ಬಿಡದ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕೆ ಸಾಮಾಜಿಕ ನ್ಯಾಯ, ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

◆ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದ ಅತಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಗಳಾಗಿ ದಾಖಲೆ ನಿರ್ಮಿಸಿದ ಶ್ರೀ ದೇವರಾಜ್ ಅರಸು, ಶ್ರೀ ಸಿದ್ದರಾಮಯ್ಯ ಇಬ್ಬರು ಮುಖ್ಯಮಂತ್ರಿಗಳು ಒಬಿಸಿ ಸಮುದಾಯದವರೇ.

◆ ಕಾಂಗ್ರೆಸ್ ಪಕ್ಷ ನಾಲ್ಕು ಹಿಂದುಳಿದ ವರ್ಗಗಳ ನಾಯಕರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿದೆ.

◆ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯದವರಾದ ಶ್ರೀ ವೀರಪ್ಪ ಮೊಯ್ಲಿಯವರು ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್ ಪಕ್ಷದಿಂದಲೇ.

◆ ಶ್ರೀ ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿ ಹಿಂದುಳಿದ ವರ್ಗದ ನೇತಾರರಾಗಿ ಹೊರಹೊಮ್ಮಿದ್ದು ಕಾಂಗ್ರೆಸ್ ಪಕ್ಷದಲ್ಲೇ.

◆ ಶೋಷಿತ ಸಮುದಾಯದಿಂದ ಬಂದಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಕಾಂಗ್ರೆಸ್ ಪಕ್ಷದಲ್ಲೇ.

ಪಕ್ಕದ ಮನೆಗೆ ಬೆಂಕಿ ಹಚ್ಚಿ ಬೇಳೆ ಬೇಯಿಸಿಕೊಳ್ಳುವ ಬದಲು ಬಿಜೆಪಿ ತಮ್ಮ ತನುವ ಸಂತೈಸಿಕೊಳ್ಳಲಿ, ತಮ್ಮ ಮನೆಯ ಸಂಬಾಳಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

6 hours ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

24 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

1 day ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

1 day ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago