ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ ಮತ್ತು ಪರಿಸ್ಥಿತಿಗೆ ತಕ್ಕಂತೆ ಮಾತು ಬದಲಿಸುವುದು, ಸಿದ್ದಾಂತ ಬದಲಿಸುವುದು, ವರಸೆ ಬದಲಿಸುವುದು ಬಿಜೆಪಿಗರಿಗೆ ದೇವರು ನೀಡಿದ ವರ ಇರಬಹುದೇನೋ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯಗಳನ್ನಿಟ್ಟುಕೊಂಡು, ದಲಿತರಿಗೆ ಅನ್ಯಾಯ, ಒಬಿಸಿಗಳಿಗೆ ಅನ್ಯಾಯ ಎನ್ನುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ತಮ್ಮ ಆತ್ಮಸಾಕ್ಷಿಗೆ ಕೆಲ ಪ್ರಶ್ನೆಗಳನ್ನು ಕೇಳಿಕೊಂಡು ಆತ್ಮ ವಿಮರ್ಶೆ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.
ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?
ರಾಜ್ಯದಲ್ಲಿ ಬಿಜೆಪಿಯಿಂದ ಆಗಿರುವ ನಾಲ್ಕು ಮುಖ್ಯಮಂತ್ರಿಗಳಲ್ಲಿ ಎಷ್ಟು ಜನ ಒಬಿಸಿ, ದಲಿತರಿದ್ದಾರೆ?
ಮುಖ್ಯಮಂತ್ರಿಯಾಗಲು ಬಿಜೆಪಿ ಈ ಸಮುದಾಯಗಳ ನಾಯಕರನ್ನು ಬೆಳಸಲಿಲ್ಲವೇ ಅಥವಾ ಇರುವ ನಾಯಕರಿಗೆ ಅರ್ಹತೆ ಇಲ್ಲ ಎಂದು ತೀರ್ಮಾನಿಸಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ಅಧಿಕಾರವಿದ್ದಾಗಿನ ಕತೆ ಆಯಿತು, ಈಗಲಾದರೂ ದಲಿತ, ಒಬಿಸಿಗಳು ನೆನಪಾಗಲಿಲ್ಲವೇ? ವಿಧಾನಸಭೆ ವಿಪಕ್ಷ ನಾಯಕನ ಸ್ಥಾನವನ್ನು ಏಕೆ ಒಬಿಸಿ ಸಮುದಾಯದವರಿಗೆ ಕೊಡಲಿಲ್ಲ? ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ದಲಿತರಿಗೆ ಏಕೆ ಕೊಡಲಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಹುದ್ದೆಯನ್ನು ದಲಿತರೊಬ್ಬರಿಗೆ ಬಿಟ್ಟುಕೊಡಲು ತಯಾರಿದ್ದಾರಾ?
ವಿಪಕ್ಷ ನಾಯಕರು ತಮ್ಮ ಸ್ಥಾನವನ್ನು ಒಬಿಸಿ ಸಮುದಾಯಕ್ಕೆ ತ್ಯಾಗ ಮಾಡಲು ತಯಾರಿದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ.
ದಲಿತ, ಒಬಿಸಿ ಸಮುದಾಯಗಳಿಗೆ ಜಗನ್ನಾಥ ಭವನದ ಹೊಸ್ತಿಲನ್ನು ದಾಟಲು ಬಿಡದ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕೆ ಸಾಮಾಜಿಕ ನ್ಯಾಯ, ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
◆ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದ ಅತಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಗಳಾಗಿ ದಾಖಲೆ ನಿರ್ಮಿಸಿದ ಶ್ರೀ ದೇವರಾಜ್ ಅರಸು, ಶ್ರೀ ಸಿದ್ದರಾಮಯ್ಯ ಇಬ್ಬರು ಮುಖ್ಯಮಂತ್ರಿಗಳು ಒಬಿಸಿ ಸಮುದಾಯದವರೇ.
◆ ಕಾಂಗ್ರೆಸ್ ಪಕ್ಷ ನಾಲ್ಕು ಹಿಂದುಳಿದ ವರ್ಗಗಳ ನಾಯಕರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿದೆ.
◆ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯದವರಾದ ಶ್ರೀ ವೀರಪ್ಪ ಮೊಯ್ಲಿಯವರು ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್ ಪಕ್ಷದಿಂದಲೇ.
◆ ಶ್ರೀ ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿ ಹಿಂದುಳಿದ ವರ್ಗದ ನೇತಾರರಾಗಿ ಹೊರಹೊಮ್ಮಿದ್ದು ಕಾಂಗ್ರೆಸ್ ಪಕ್ಷದಲ್ಲೇ.
◆ ಶೋಷಿತ ಸಮುದಾಯದಿಂದ ಬಂದಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಕಾಂಗ್ರೆಸ್ ಪಕ್ಷದಲ್ಲೇ.
ಪಕ್ಕದ ಮನೆಗೆ ಬೆಂಕಿ ಹಚ್ಚಿ ಬೇಳೆ ಬೇಯಿಸಿಕೊಳ್ಳುವ ಬದಲು ಬಿಜೆಪಿ ತಮ್ಮ ತನುವ ಸಂತೈಸಿಕೊಳ್ಳಲಿ, ತಮ್ಮ ಮನೆಯ ಸಂಬಾಳಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ.
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…
ದೊಡ್ಡಬಳ್ಳಾಪುರ: ಕಾಂಗ್ರೆಸ್ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…