ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ ಮತ್ತು ಪರಿಸ್ಥಿತಿಗೆ ತಕ್ಕಂತೆ ಮಾತು ಬದಲಿಸುವುದು, ಸಿದ್ದಾಂತ ಬದಲಿಸುವುದು, ವರಸೆ ಬದಲಿಸುವುದು ಬಿಜೆಪಿಗರಿಗೆ ದೇವರು ನೀಡಿದ ವರ ಇರಬಹುದೇನೋ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯಗಳನ್ನಿಟ್ಟುಕೊಂಡು, ದಲಿತರಿಗೆ ಅನ್ಯಾಯ, ಒಬಿಸಿಗಳಿಗೆ ಅನ್ಯಾಯ ಎನ್ನುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ತಮ್ಮ ಆತ್ಮಸಾಕ್ಷಿಗೆ ಕೆಲ ಪ್ರಶ್ನೆಗಳನ್ನು ಕೇಳಿಕೊಂಡು ಆತ್ಮ ವಿಮರ್ಶೆ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?
ರಾಜ್ಯದಲ್ಲಿ ಬಿಜೆಪಿಯಿಂದ ಆಗಿರುವ ನಾಲ್ಕು ಮುಖ್ಯಮಂತ್ರಿಗಳಲ್ಲಿ ಎಷ್ಟು ಜನ ಒಬಿಸಿ, ದಲಿತರಿದ್ದಾರೆ?
ಮುಖ್ಯಮಂತ್ರಿಯಾಗಲು ಬಿಜೆಪಿ ಈ ಸಮುದಾಯಗಳ ನಾಯಕರನ್ನು ಬೆಳಸಲಿಲ್ಲವೇ ಅಥವಾ ಇರುವ ನಾಯಕರಿಗೆ ಅರ್ಹತೆ ಇಲ್ಲ ಎಂದು ತೀರ್ಮಾನಿಸಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಧಿಕಾರವಿದ್ದಾಗಿನ ಕತೆ ಆಯಿತು, ಈಗಲಾದರೂ ದಲಿತ, ಒಬಿಸಿಗಳು ನೆನಪಾಗಲಿಲ್ಲವೇ? ವಿಧಾನಸಭೆ ವಿಪಕ್ಷ ನಾಯಕನ ಸ್ಥಾನವನ್ನು ಏಕೆ ಒಬಿಸಿ ಸಮುದಾಯದವರಿಗೆ ಕೊಡಲಿಲ್ಲ? ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ದಲಿತರಿಗೆ ಏಕೆ ಕೊಡಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಹುದ್ದೆಯನ್ನು ದಲಿತರೊಬ್ಬರಿಗೆ ಬಿಟ್ಟುಕೊಡಲು ತಯಾರಿದ್ದಾರಾ?
ವಿಪಕ್ಷ ನಾಯಕರು ತಮ್ಮ ಸ್ಥಾನವನ್ನು ಒಬಿಸಿ ಸಮುದಾಯಕ್ಕೆ ತ್ಯಾಗ ಮಾಡಲು ತಯಾರಿದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ.

ದಲಿತ, ಒಬಿಸಿ ಸಮುದಾಯಗಳಿಗೆ ಜಗನ್ನಾಥ ಭವನದ ಹೊಸ್ತಿಲನ್ನು ದಾಟಲು ಬಿಡದ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕೆ ಸಾಮಾಜಿಕ ನ್ಯಾಯ, ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

◆ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದ ಅತಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಗಳಾಗಿ ದಾಖಲೆ ನಿರ್ಮಿಸಿದ ಶ್ರೀ ದೇವರಾಜ್ ಅರಸು, ಶ್ರೀ ಸಿದ್ದರಾಮಯ್ಯ ಇಬ್ಬರು ಮುಖ್ಯಮಂತ್ರಿಗಳು ಒಬಿಸಿ ಸಮುದಾಯದವರೇ.

◆ ಕಾಂಗ್ರೆಸ್ ಪಕ್ಷ ನಾಲ್ಕು ಹಿಂದುಳಿದ ವರ್ಗಗಳ ನಾಯಕರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿದೆ.

◆ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯದವರಾದ ಶ್ರೀ ವೀರಪ್ಪ ಮೊಯ್ಲಿಯವರು ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್ ಪಕ್ಷದಿಂದಲೇ.

◆ ಶ್ರೀ ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿ ಹಿಂದುಳಿದ ವರ್ಗದ ನೇತಾರರಾಗಿ ಹೊರಹೊಮ್ಮಿದ್ದು ಕಾಂಗ್ರೆಸ್ ಪಕ್ಷದಲ್ಲೇ.

◆ ಶೋಷಿತ ಸಮುದಾಯದಿಂದ ಬಂದಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಕಾಂಗ್ರೆಸ್ ಪಕ್ಷದಲ್ಲೇ.

ಪಕ್ಕದ ಮನೆಗೆ ಬೆಂಕಿ ಹಚ್ಚಿ ಬೇಳೆ ಬೇಯಿಸಿಕೊಳ್ಳುವ ಬದಲು ಬಿಜೆಪಿ ತಮ್ಮ ತನುವ ಸಂತೈಸಿಕೊಳ್ಳಲಿ, ತಮ್ಮ ಮನೆಯ ಸಂಬಾಳಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

43 minutes ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

1 hour ago

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

5 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

19 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

19 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

19 hours ago