ಬಿಜೆಪಿ‌ಗೆ ಬಿಗ್ ಶಾಕ್..!: ಪಕ್ಷ ತೊರೆದ ನಗರ ಹಾಗೂ ತಾಲೂಕು ಬಿಜೆಪಿ ಅಧ್ಯಕ್ಷ: ಓರ್ವ ಪಕ್ಷೇತರ, ಆರು ಮಂದಿ‌ ನಗರಸಭಾ ಸದಸ್ಯರು ಕಾಂಗ್ರೆಸ್ ಗೆ ಜಂಪ್

ದೊಡ್ಡಬಳ್ಳಾಪುರ: ತಾಲೂಕು ಬಿಜೆಪಿಯಲ್ಲಿ ಭಿನ್ನಮತ ಮತ್ತೆ ಸ್ಫೋಟಿಸಿದೆ. ಬಿಜೆಪಿ ಬೆಂಬಲಿತ ನಗರಸಭೆಯ ಐವರು ಸದಸ್ಯರು ಹಾಗೂ ಮುಖಂಡರು ಸೋಮವಾರ ಸಂಜೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ಧೀರಜ್ ಮುನಿರಾಜು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜು ಹಾಗೂ ನಗರಾಧ್ಯಕ್ಷರಾದ ನಗರಸಭೆ ಸದಸ್ಯ ಎಚ್.ಎಸ್. ಶಿವಶಂಕರ್ ನೇತೃತ್ವದಲ್ಲಿ ಒಟ್ಟು ಆರು ಮಂದಿ ನಗರಸಭಾ ಸದಸ್ಯರು ಹಾಗೂ ಮುಖಂಡರು ಕಾಂಗ್ರೆಸ್ ಸೇರಿದರು.

ಟಿಕೆಟ್ ಘೋಷಣೆಯಾದ ಬಳಿಕ ಎಲ್ಲ ಮುಖಂಡರು ಭಿನ್ನಮತ ಮರೆತು ಒಂದಾಗಿದ್ದರು. ರಾಜಘಟ್ಟ ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದ್ದರು. ಧೀರಜ್ ಮುನಿರಾಜು ಅವರನ್ನು ಗೆಲ್ಲಿಸಿ ತರುವುದೇ ನಮ್ಮ ಮುಂದಿರುವ ಗುರಿ ಎಂದು ಹೇಳಿದ್ದರು. ಆದರೆ, ಹಠಾತ್ ಬೆಳವಣಿಗೆಯಲ್ಲಿ ಪಕ್ಷಾಂತರ ಮಾಡಿರುವುದು ಪಕ್ಷದಲ್ಲಿ ಸಂಚಲನ ಮೂಡಿಸಿದೆ.

ದೇವರಾಜನಗರ ವಾರ್ಡ್ ಸದಸ್ಯ ಎಚ್.ಎಸ್.ಶಿವಶಂಕರ್, ಕನಕದಾಸ ನಗರ ವಾರ್ಡ್ ಸದಸ್ಯ ಎಂ.ಶಿವ, ವೀರಭದ್ರಪಾಳ್ಯ ವಾರ್ಡಿನ ಆರ್. ಶಿವಣ್ಣ, ನಾಮನಿರ್ದೇಶಿತ ಸದಸ್ಯ ಶಿವು, ಸಿದ್ದೇನಾಯಕನಹಳ್ಳಿ ವಾರ್ಡ್ ಸದಸ್ಯೆ ವಿ. ಇಂದ್ರಾಣಿ ಅವರು ಕಾಂಗ್ರೆಸ್ ಸೇರ್ಪಡೆಯಾದ ನಗರಸಭಾ ಸದಸ್ಯರು.

ಉಳಿದಂತೆ ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜು, ಗುಂಡಮಗೆರೆಯ ಶಿವಾನಂದರೆಡ್ಡಿ, ವಿಶ್ವಾಸ್ ಗೌಡ, ಕೆ.ಟಿ.ಕೃಷ್ಣಪ್ಪ, ತ್ಯಾಗರಾಜ ನಗರ ವಾರ್ಡ್ ಪಕ್ಷೇತರ ಸದಸ್ಯ ಸುರೇಶ್(ಸುಬ್ಬು) ಸೇರ್ಪಡೆ.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

38 minutes ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

4 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

8 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

22 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

22 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

23 hours ago